Don't Miss!
- Automobiles ಕೋಟಿ ಬೆಲೆಯ ಲ್ಯಾಂಡ್ರೋವರ್ ಖರೀದಿಸಿದ ಗಾಯಕಿ: ಹೆಣ್ಮಕ್ಳೇ ಸ್ಟ್ರಾಂಗು ಗುರು ಎಂದ ನೆಟ್ಟಿಗರು!
- Finance Real Estate: ಬೆಂಗಳೂರಿನ ಕೋರಮಂಗಲದಲ್ಲಿ ದುಬಾರಿ ಬೆಲೆಗೆ ಆಸ್ತಿ ಖರೀದಿಸಿದ ಅಜಿತ್ ಐಸಾಕ್
- News ಡಿ ಕೆ ಶಿವಕುಮಾರ್ 9 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಆಸ್ತಿ ಬರೆಸಿಕೊಂಡವ್ರೆ ; ಹಿಂದಿನ ಸತ್ಯ ಬಿಚ್ಚಿಟ್ಟ ದೇವೇಗೌಡ್ರು
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹತ್ವದ ಪ್ರಾಜೆಕ್ಟ್ ಗೆ ಕೈ ಹಾಕಿದ ಕ್ರಿಕೆಟಿಗ ಎಂ ಎಸ್ ಧೋನಿ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಚಿತ್ರರಂಗಕ್ಕೆ ಬರ್ತಾರೆ ಎಂಬ ಸುದ್ದಿ ಬಹಳ ದಿನದಿಂದ ಸದ್ದು ಮಾಡ್ತಿದೆ. ಹಿಂದಿ ಚಿತ್ರವೊಂದನ್ನು ನಿರ್ಮಿಸುತ್ತಾರೆ ಅಥವಾ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಮಾತಿದೆ.
ಇದೀಗ, ಅದಕ್ಕಿಂತ ವಿಶೇಷವಾದ ಸುದ್ದಿಯೊಂದು ಹೊರಬಿದ್ದಿದೆ. ಈ ಸುದ್ದಿ ನಿಜವೇ ಆದರೆ, ಧೋನಿ ಅಭಿಮಾನಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಬಿ-ಟೌನ್ ಪ್ರವೇಶ ಮಾಡಲಿದ್ದಾರಂತೆ ಕೂಲ್ ಕ್ಯಾಪ್ಟನ್ ಧೋನಿ
ಮುಂಬೈ ಮಿರರ್ ವರದಿ ಮಾಡಿರುವ ಪ್ರಕಾರ ಎಂ ಎಸ್ ಧೋನಿ ಟಿವಿ ನಿರ್ಮಾಣ ಸಂಸ್ಥೆ ಸ್ಥಾಪಿಸಲು ಯೋಚಿಸಿದ್ದಾರಂತೆ. ಈ ಶೋ ಮೂಲಕ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿದ ಸೈನಿಕರ ಜೀವನ ಕಥೆಯನ್ನು ಜನರ ಮುಂದೆ ತರಲು ನಿರ್ಧರಿಸಿದ್ದಾರಂತೆ.
ಯೋಧರ ಜೀವನ, ಅವರು ನಡೆದ ಬಂದ ಹಾದಿಗಳನ್ನು ಈ ಟಿವಿ ಶೋನಲ್ಲಿ ಪ್ರಸ್ತತಪಡಿಸಲು ಧೋನಿ ಚಿಂತಿಸಿದ್ದಾರಂತೆ. ಪ್ರಮುಖವಾಗಿ ಪರಮವೀರ ಮತ್ತು ಅಶೋಕ ಚಕ್ರ ಪ್ರಶಸ್ತಿಗಳನ್ನ ಪಡೆದಿರುವ ಯೋಧರ ಸ್ಫೂರ್ತಿದಾಯಕ ಕಥೆಗಳನ್ನು ಈ ಕಾರ್ಯಕ್ರಮದ ಮೂಲಕ ಜನರ ಮುಂದೆ ತೆರೆದಿಡುವ ಉದ್ದೇಶ ಹೊಂದಿದ್ದಾರಂತೆ.
'ನನ್ನ ನೆಚ್ಚಿನ ಕ್ರಿಕೆಟಿಗ ಧೋನಿ' ಎಂದ ಸನ್ನಿ ಲಿಯೋನ್
ಸದ್ಯ, ಇಂತಹದೊಂದು ಕಾರ್ಯಕ್ರಮಕ್ಕಾಗಿ ಎಲ್ಲ ರೀತಿಯ ತಯಾರಿ ಮಾಡಲಾಗುತ್ತಿದೆ ಎಂಬ ಮಾತಿದೆ. ಪ್ರೀ-ಪ್ರೊಡಕ್ಷನ್ ಹಂತದ ಕೆಲಸ ಆರಂಭವಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಣೆಯಾಗಲಿದೆಯಂತೆ.
ಅಂದ್ಹಾಗೆ, ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಧೋನಿ ಭಾರತದ ಕ್ರಿಕೆಟ್ ತಂಡದಿಂದ ಹೊರಗುಳಿದಿದ್ದಾರೆ. ಈ ಮಧ್ಯೆ ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿ ಬಂದಿದ್ದಾರೆ.