Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪ್ಪಿ ಹುಟ್ಟುಹಬ್ಬಕ್ಕೆ 'ಮುಕುಂದ ಮುರಾರಿ' ರಿಲೀಸ್.?
ಕಿಚ್ಚ ಸುದೀಪ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಅವರು ಒಂದಾಗಿ ಕಾಣಿಸಿಕೊಂಡಿರುವ 'ಮುಕುಂದ ಮುರಾರಿ' ಚಿತ್ರದ ಕೆಲಸಗಳು ಭರಭರನೇ ಸಾಗುತ್ತಿದ್ದು, ಇದೀಗ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಚಿತ್ರತಂಡ ಬಿಜಿಯಾಗಿದೆ.
ಇನ್ನು ವಿಶೇಷವಾಗಿ, ಈ ಚಿತ್ರದಲ್ಲಿ ಒಂದಾಗಿ ತೆರೆ ಹಂಚಿಕೊಂಡಿರುವ ಸ್ಟಾರ್ ನಟರಾದ ಕಿಚ್ಚ ಸುದೀಪ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ಸಂಭ್ರಮದ ದಿನದಂದು, ಈ ಚಿತ್ರದ ಆಡಿಯೋ ಮತ್ತು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.[ಲಕ್ಷಾನುಗಟ್ಟಲೇ ಬೆಲೆಬಾಳುವ ಸ್ಟೈಲಿಷ್ ಬೈಕ್ ನಲ್ಲಿ ಕಿಚ್ಚನ ಜಾಲಿ ರೈಡ್]
ಅಂದಹಾಗೆ ಚಿತ್ರದ ಬಹುತೇಕ ಕೆಲಸಗಳು ಈಗಾಗಲೇ ಮುಗಿದಿದ್ದು, ಚಿತ್ರದ ಆಡಿಯೋ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಸೆಪ್ಟೆಂಬರ್ 2, ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದಂದು 'ಮುಕುಂದ ಮುರಾರಿ' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ನಿರ್ದೇಶಕ ನಂದಕಿಶೋರ್ ಪ್ಲ್ಯಾನ್ ಮಾಡಿದ್ದಾರೆ.
ತದನಂತರ ಸೆಪ್ಟೆಂಬರ್ 18, ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದಂದು ಸಿನಿಮಾ ಬಿಡುಗಡೆ ಮಾಡಲು ನಂದಕಿಶೋರ್ ಅವರು ನಿರ್ಧಾರ ತಳೆದಿದ್ದಾರೆ. ಹಿಂದಿ ನಟ ಅಕ್ಷಯ್ ಕುಮಾರ್ ಮತ್ತು ಪರೇಶ್ ರಾವಲ್ ಅವರು ಕಾಣಿಸಿಕೊಂಡಿದ್ದ 'ಓ ಮೈ ಗಾಡ್' ಹಿಂದಿ ಚಿತ್ರದ ರೀಮೇಕ್ ಆಗಿರುವ 'ಮುಕುಂದ ಮುರಾರಿ' ಆಸ್ತಿಕ ಮತ್ತು ನಾಸ್ತಿಕನ ನಡುವೆ ನಡೆಯುವ ಕಥೆ.['ಓ ಮೈ ಗಾಡ್' ಕಿಚ್ಚ-ಉಪ್ಪಿ ಚಿತ್ರದ ಟೈಟಲ್ ಮತ್ತೆ ಬದಲಾಯಿತಾ?]
ಈ ಚಿತ್ರದಲ್ಲಿ ನಟ ಉಪೇಂದ್ರ ಅವರ ಪತ್ನಿಯ ಪಾತ್ರದಲ್ಲಿ ನಟಿ ನಿಖಿತಾ ತುಕ್ರಾಲ್ ಅವರು ಮಿಂಚಿದ್ದು, ಪರಮಾತ್ಮ ಶ್ರೀಕೃಷ್ಣನ ಪಾತ್ರದಲ್ಲಿ ಕಿಚ್ಚ ಸುದೀಪ್ ಅವರು ನಟಿಸಿದ್ದಾರೆ. ನಿರ್ಮಾಪಕರಾದ ಜಯಶ್ರೀ ದೇವಿ ಮತ್ತು ಎಂ.ಎನ್ ಕುಮಾರ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.[ರಿಯಲ್ ಉಪ್ಪಿ ಹೆಂಡ್ತಿ ಆಗ್ತಾರಂತೆ ನಿಖಿತಾ ತುಕ್ರಾಲ್]
ಅಂತೂ ಇಂತೂ 'ಕಲ್ಪನಾ 2' ಮತ್ತು 'ಕೋಟಿಗೊಬ್ಬ 2' ಬಂದು ಹೋದ ಬೆನ್ನಲ್ಲೇ, ಮತ್ತೆ ಮುಂದಿನ ತಿಂಗಳು ಸುದೀಪ್ ಮತ್ತು ಉಪ್ಪಿಯನ್ನು ತೆರೆಯ ಮೇಲೆ ನೋಡುವ ಅವಕಾಶ ಅಭಿಮಾನಿಗಳಿಗೆ ದೊರೆಯಲಿದೆ.