Don't Miss!
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿನಗರದ ಗಾಸಿಪಿಗೆ ತೆರೆ ಎಳೆದ ಪುನೀತ್
ಪುನೀತ್, ಯೋಗಿ ಅಭಿನಯದ ಯಾರೇ ಕೂಗಾಡಲಿ ಚಿತ್ರ ಪ್ರಚಂಡ ಯಶಸ್ಸು ಪಡೆದ ನಂತರ ಹುಟ್ಟಿಕೊಂಡ ಗಾಸಿಪಿಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೊಸ ವರ್ಷದ ಮುನ್ನಾ ದಿನ ತೆರೆ ಎಳೆದಿದ್ದಾರೆ.
ಯಾರೇ ಕೂಗಾಡಲಿ ಚಿತ್ರದ ನಿರ್ದೇಶಕ ತಮಿಳಿನ ಸಮುದ್ರಖಣಿ ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅವರ ಮುಂದಿನ ಚಿತ್ರ ಸೆಟ್ಟೇರಲಿದೆ ಎಂದು ಊರೆಲ್ಲಾ ಸುದ್ದಿಯಾಗಿತ್ತು.
ನಾನು ಮತ್ತೆ ಸಮುದ್ರಖಣಿ ನಿರ್ದೇಶನದಲ್ಲಿ ನಟಿಸುತ್ತೇನೆ ಎಂದು ಹೇಳಿದ್ದು ನಿಜ, ಆದರೆ ನನ್ನ ಮುಂದಿನ ಚಿತ್ರ ಅವರ ನಿರ್ದೇಶನದ ಚಿತ್ರವಲ್ಲ.
ನಾಲ್ಕೈದು ಚಿತ್ರಗಳಿಗೆ ನಿರ್ಮಾಪಕರು ಮತ್ತು ನಿರ್ದೇಶಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಕ್ರಿಪ್ಟ್ ಯಾವುದು ಇನ್ನೂ ಅಂತಿಮವಾಗಿಲ್ಲ.
ಮಾತುಕತೆ ಮುಗಿದು ಎಲ್ಲಾ ಅಂತಿಮವಾದ ಮೇಲೆ ನಾನೇ ಮಾಧ್ಯಮದವರಿಗೆ ತಿಳಿಸುತ್ತೇನೆ ಎಂದು ಪುನೀತ್ ಹೇಳಿದ್ದಾರೆ.
ರಾಘಣ್ಣನ ಮಗ ವಿನಯ್ ಕೂಡಾ ಚಿತ್ರರಂಗಕ್ಕೆ ಬರಲು ಸಜ್ಜಾಗಿದ್ದಾನೆ. ಒಳ್ಳೆ ಸ್ಕ್ರಿಪ್ಟ್ ಮತ್ತು ನಿರ್ದೇಶಕರನ್ನು ಹುಡುಕುತ್ತಿದ್ದೇವೆ. ಎಲ್ಲಾ ಅಂದುಕೊಂಡಂತೆ ನಡೆದರೆ ನಮ್ಮ ಕುಟುಂಬದ ಇನ್ನೊಬ್ಬ ಕಲಾವಿದನನ್ನು ರಾಜ್ಯದ ಜನತೆಗೆ ಪರಿಚಯಿಸುತ್ತೇವೆ ಎಂದು ಪುನೀತ್ ಹೇಳಿದ್ದಾರೆ.
ಮೂಲ: ಕಸ್ತೂರಿ ನ್ಯೂಸ್ 24X7