Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗತಿಹಳ್ಳಿ ಮಗಳ ಮದುವೆಗೆ ಮಂತ್ರಮಾಂಗಲ್ಯ ಇಲ್ಲ?
ಹೆಸರಾಂತ ನಿರ್ದೇಶಕ, ಬರಹಗಾರ, ಪತ್ರಿಕಾ ಅಂಕಣಕಾರ, ಕಿರುತೆರೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡು ಹೆಸರು ಮಾಡಿದವರು ನಾಗತಿಹಳ್ಳಿ ಚಂದ್ರಶೇಖರ್. ಎಲ್ಲಕ್ಕಿಂತ ಹೆಚ್ಚಾಗಿ ಅವರು ಕುವೆಂಪು ಅವರ ಮಂತ್ರ ಮಾಂಗಲ್ಯದ ಶೈಲಿಯ ಮದುವೆಯ ಪ್ರತಿಪಾದಕರು.
ತಾವು ಈ ಹಿಂದೆ ನಡೆದ ಮದುವೆಗಳಲ್ಲಿ ನಿರ್ದೇಶಕ, ಬರಹಗಾರ ನಾಗತೀಹಳ್ಳಿ ಚಂದ್ರಶೇಖರ್ ಮಂತ್ರಮಾಂಗಲ್ಯ ಬೋಧನೆ ಮಾಡಿ ಮಂತ್ರಮಾಂಗಲ್ಯ ಮದುವೆಯ ಮುಂದಾಳತ್ವ ವಹಿಸಿದ್ದರು. ಇದಕ್ಕೆ ಇತ್ತೀಚೆಗಿನ ಉದಾಹರಣೆ ಅಂದ್ರೆ ಶಿವಮೊಗ್ಗದಲ್ಲಿ ನಡೆದ ಸಾಹಿತಿ ಕವಿರಾಜ್ ಮದುವೆ. [ನಾಗತಿಹಳ್ಳಿ ಚಂದ್ರಶೇಖರ್ ಪುತ್ರಿ ಫಾರಿನ್ ಪರಿಣಯ]
ಆದ್ರೆ ಈಗ ನಾಗತಿಹಳ್ಳಿ ಪುತ್ರಿ ಕನಸು ನಾಗತಿಹಳ್ಳಿ ಅವರ ವಿವಾಹ ಜರುಗುತ್ತಿದೆ. ಇದು ಕುವೆಂಪು ಕನಸಿನ ಮಂತ್ರಮಾಂಗಲ್ಯ ಅಲ್ಲ. ಕನಸು ಅವರ ಮದುವೆ ಸಾಯಿ ವಿವಸ್ವತ್ ಓಂಕಾರ ಅನ್ನುವ ವರನೊಂದಿಗೆ ಚಂದ್ರಶೇಖರ್ ಹುಟ್ಟೂರಾದ ನಾಗತಿಹಳ್ಳಿಯಲ್ಲಿ ಮಾರ್ಚ್ 28ರ ಶನಿವಾರದಂದು ನಡೆಯಲಿದೆ.
ಆರತಕ್ಷತೆ ಅದಾದ ಮಾರನೇ ದಿನ ಬೆಂಗಳೂರಿನ ಪುಟ್ಟೇನಹಳ್ಳಿಯ ಬ್ರಿಗೇಡ್ ಮಿಲೇನಿಯಂ ಅಪಾರ್ಮ್ ಮೆಂಟ್ ಎಂ ಎಲ್ ಆರ್ ಕನ್ವೆಶನ್ ನಲ್ಲಿ ನಡೆಯಲಿದೆ. ಕನ್ನಡ ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ ನಾಗತಿಹಳ್ಳಿ, 'ಕಾಡಿನ ಬೆಂಕಿ' ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಬರೆಯುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.
'ಉಂಡು ಹೋದ ಕೊಂಡು ಹೋದ', 'ಕೊಟ್ರೇಶಿ ಕನಸು', 'ಅಮೇರಿಕಾ ಅಮೇರಿಕಾ', 'ನನ್ನ ಪ್ರೀತಿಯ ಹುಡುಗಿ', 'ಅಮೃತಧಾರೆ' ಸೇರಿದಂತೆ ಹಲವಾರು ಸೂಪರ್ ಹಿಟ್ ಚಿತ್ರಗಳನ್ನ ನೀಡಿರುವ ನಾಗತಿಹಳ್ಳಿ ಚಂದ್ರಶೇಖರ್ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅನ್ನುವುದು ನಿಮಗೆ ಗೊತ್ತೇ ಇದೆ.