Don't Miss!
- News ಒಳರೋಗಿಗಳು ಆಸ್ಪತ್ರೆಯಲ್ಲಿನ ಆಹಾರವನ್ನೇ ಏಕೆ ಸೇವಿಸಬೇಕು? ಇದಕ್ಕೆ ಕಾರಣವೇನು?
- Sports PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು ಸಿನಿಮಾದಿಂದ ಹೊರಬಂದ ಪೂಜಾ ಹೆಗ್ಡೆ: ಕಾರಣ?
ಮಹೇಶ್ ಬಾಬು ಜೊತೆ ನಟಿಸಲು ಹಲವು ನಟಿಯರು ಸಾಲುಗಟ್ಟಿ ನಿಂತಿದ್ದಾರೆ. ಮಹೇಶ್ ಬಾಬು ಜೊತೆಗೆ ನಟಿಸುವ ನಟಿಯರ ಮಾರುಕಟ್ಟೆ ಮೌಲ್ಯ ಏರುತ್ತದೆಯಾದ್ದರಿಂದ ಅವರೊಟ್ಟಿಗೆ ತೆರೆ ಹಂಚಿಕೊಳ್ಳಲು ನಟಿಮಣಿಯರು ತುದಿಗಾಲಲ್ಲಿ ನಿಂತಿರುತ್ತಾರೆ.
ಹ್ಯಾಂಡ್ಸಮ್ ನಟ ಮಹೇಶ್ ಬಾಬು ಜೊತೆಗೆ ಹಲವು ಅತ್ಯುತ್ತಮ ನಾಯಕಿಯರು ನಟಿಸಿದ್ದಾರೆ. ಬಾಲಿವುಡ್ ನಟಿಯರು ಸಹ ಮಹೇಶ್ ಬಾಬು ಜೊತೆ ನಟಿಸಿದ್ದಾರೆ.
ಬಾಲಿವುಡ್ ಹಾಗೂ ದಕ್ಷಿಣ ಭಾರತ ಸಿನಿಮಾ ರಂಗ ಎರಡರಲ್ಲೂ ಮಿಂಚುತ್ತಿರುವ ನಟಿ ಪೂಜಾ ಹೆಗ್ಡೆಗೆ ಮಹೇಶ್ ಬಾಬು ಜೊತೆ ನಟಿಸುವ ಅವಕಾಶ ದೊರೆತಿತ್ತು. ಆದರೆ ಆ ಅವಕಾಶವನ್ನು ಕೈಚೆಲ್ಲಿದ್ದಾರೆ ನಟಿ ಪೂಜಾ ಹೆಗ್ಡೆ. ಮಹೇಶ್ ಬಾಬು ಸಿನಿಮಾದಿಂದ ಹೊರಬಂದಿದ್ದಾರೆ ಈ ನಟಿ.
ಮಹೇಶ್ ಬಾಬು ನಟಿಸಲಿರುವ ತಮ್ಮ 28ನೇ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದರು. ಈ ಬಗ್ಗೆ ಚಿತ್ರತಂಡ ಘೋಷಣೆಯನ್ನು ಸಹ ಮಾಡಿತ್ತು. ಆದರೆ ಈಗ ಪೂಜಾ ಹೆಗ್ಡೆ ಆ ಸಿನಿಮಾದಿಂದ ಹೊರಗೆ ಬಂದಿದ್ದಾರೆ.
ಮಹೇಶ್ ಬಾಬು ಜೊತೆ ನಟಿಸಲು ಈ ಮೊದಲು ಪೂಜಾ ಹೆಗ್ಡೆ ಒಪ್ಪಿಕೊಂಡಿದ್ದರು. ಆದರೆ ಬಳಿಕ, ಡೇಟ್ಸ್ ಹೊಂದಾಣಿಕೆ ಆಗದ ಕಾರಣದಿಂದ ಆ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಪೂಜಾ. ಸಿನಿಮಾದಲ್ಲಿ ಮತ್ತೊಬ್ಬ ನಾಯಕಿಯ ಪಾತ್ರ ಇರುವ ಕಾರಣದಿಂದ ಪೂಜಾ ಹೆಗ್ಡೆ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ.
ಸಿನಿಮಾದಲ್ಲಿ ಮತ್ತೊಬ್ಬ ನಾಯಕಿಯ ಪಾತ್ರವೂ ಇದ್ದು, ಇದಕ್ಕಾಗಿ ನಟಿ ಸಮಂತಾರನ್ನು ಸಂಪರ್ಕಿಸಲಾಗಿದೆ. ಆದರೆ ಇದು ಪೂಜಾ ಹೆಗ್ಡೆಗೆ ಇಷ್ಟವಾಗಿಲ್ಲ. ಈ ಮೊದಲು ಪೂಜಾ ಹೆಗ್ಡೆ ಜೊತೆ ಮಾತನಾಡಿದ್ದಾಗ ಇನ್ನೊಬ್ಬ ನಾಯಕಿ ಇರುವ ಬಗ್ಗೆ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ. ಹಾಗಾಗಿ ಈಗ ಪೂಜಾ ಹೆಗ್ಡೆ ಮಹೇಶ್ ಬಾಬು ಸಿನಿಮಾದಿಂದ ಹೊರಗೆ ಹೋಗಿದ್ದಾರೆ.
ಮಹೇಶ್ ಬಾಬು ಪ್ರಸ್ತುತ 'ಸರ್ಕಾರು ವಾರಿ ಪಾಟ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾವು ಕ್ಯಾಸಿನೊ ನಡೆಸುವವನ ಕತೆಯನ್ನು ಹೊಂದಿರಲಿದೆ. ಸಿನಿಮಾದ ಚಿತ್ರೀಕರಣವನ್ನು ಹೈದರಾಬಾದ್, ಗೋವಾ, ಅಮೆರಿಕ, ದುಬೈಗಳಲ್ಲಿ ನಡೆಸಲಾಗಿದೆ. ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿದ್ದಾರೆ. ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ಸಹ ನಟಿಸಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾವು ಏಪ್ರಿಲ್ 1ಕ್ಕೆ ಬಿಡುಗಡೆ ಆಗಲಿದೆ. ಆ ಸಿನಿಮಾದ ಬಳಿಕ ಮಹೇಶ್ ಬಾಬು ತ್ರಿವಿಕ್ರಮ್ ಶ್ರೀನಿವಾಸ್ ಜೊತೆ ಸಿನಿಮಾ ಮಾಡಲಿದ್ದಾರೆ. ಅದರ ಬಳಿಕ ರಾಜಮೌಳಿ ಜೊತೆಗೆ ಸಾಹಸಭರಿತ ಸಿನಿಮಾ ಒಂದಕ್ಕೆ ಕಾಲ್ಶೀಟ್ ಕೊಟ್ಟಿದ್ದಾರೆ.
ಇನ್ನು ನಟಿ ಪೂಜಾ ಹೆಗ್ಡೆ ದಕ್ಷಿಣ ಭಾರತದ ಅತ್ಯಂತ ದುಬಾರಿ ಹಾಗೂ ಬ್ಯುಸಿ ನಟಿಯಾಗಿದ್ದಾರೆ. ಪ್ರಸ್ತುತ 'ರಾಧೆ ಶ್ಯಾಮ್', ಚಿರಂಜೀವಿ ನಟನೆಯ 'ಆಚಾರ್ಯ' ತಮಿಳಿನಲ್ಲಿ ವಿಜಯ್ ನಟನೆಯ 'ಬೀಸ್ಟ್' ಸಿನಿಮಾಗಳಲ್ಲಿ ನಟಿಸಿದ್ದಾರೆ. 'ರಾಧೆ-ಶ್ಯಾಮ್', 'ಆಚಾರ್ಯ' ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ. 'ಬೀಸ್ಟ್' ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಇವುಗಳ ನಡುವೆ ಹಿಂದಿಯಲ್ಲಿ ಅಕ್ಷಯ್ ಕುಮಾರ್ ಜೊತೆಗೆ 'ಸರ್ಕಸ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ಜೊತೆಗೆ 'ಕಭಿ ಈದ್ ಕಭಿ ದಿವಾಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.