Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇಕಪ್ ಕಲಾವಿದನಿಗೆ ಕೊರೊನಾ: ಕ್ವಾರಂಟೈನ್ ಆದ ಪ್ರಭಾಸ್
ಟಾಲಿವುಡ್ ನಟ ಪ್ರಭಾಸ್ ಅವರು ತಮ್ಮ ಸಿಬ್ಬಂದಿಯೊಬ್ಬರಿಗೆ ಕೋವಿಡ್ ಸೋಂಕು ತಗುಲಿದ ನಂತರ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಮೇಕಪ್ ಕಲಾವಿದನಿಗೆ ಕೊರೊನಾ ಪತ್ತೆಯಾದ ಹಿನ್ನೆಲೆ ಪ್ರಭಾಸ್ ಮತ್ತು ರಾಧೇ ಶ್ಯಾಮ್ ಚಿತ್ರತಂಡವನ್ನು ಐಸೋಲೇಟ್ ಆಗುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಭಾಸ್ ಅವರು ರಾಧೇ ಶ್ಯಾಮ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದೆ. ಇದಕ್ಕೂ ಮುಂಚೆ ಆದಿಪುರುಷ್ ಚಿತ್ರೀಕರಣದಲ್ಲೂ ಪ್ರಭಾಸ್ ಭಾಗಿಯಾಗಿದ್ದರು.
'ಆದಿಪುರುಷ್' ಚಿತ್ರತಂಡದಿಂದ ಪ್ರಭಾಸ್ ಅಭಿಮಾನಿಗಳಿಗೆ ಭಾರಿ ನಿರಾಸೆ
ಸಿಬ್ಬಂದಿಗೆ ಸೋಂಕು ದೃಢಪಟ್ಟ ಬಳಿಕ ರಾಧೇ ಶ್ಯಾಮ್ ಚಿತ್ರೀಕರಣ ಸ್ಥಗಿತಗೊಂಡಿದೆ. ಹಾಡಿನ ಜೊತೆ ಕೆಲವು ಪ್ರಮಖ ದೃಶ್ಯಗಳ ಚಿತ್ರೀಕರಣ ಬಾಕಿಯಿದೆ. ಮೇಕಪ್ ಕಲಾವಿದನಿಗೆ ಕೊರೊನಾ ತಗುಲಿರುವ ಕುರಿತು ಹಾಗೂ ಪ್ರಭಾಸ್ ಕ್ವಾರಂಟೈನ್ ಆಗಿರುವ ಕುರಿತು ಅಧಿಕೃತ ಮಾಹಿತಿ ನೀಡಿಲ್ಲ.
ಪ್ರಭಾಸ್ ಅವರು ಸತತವಾಗಿ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್, ಓಂ ರಾವತ್ ನಿರ್ದೇಶನದ ಆದಿಪುರುಷ್ ಹಾಗೂ ರಾಧೇ ಶ್ಯಾಮ್ ಚಿತ್ರೀಕರಣವನ್ನು ಒಟ್ಟೊಟ್ಟಿಗೆ ಬ್ಯಾಲೆನ್ಸ್ ಮಾಡುತ್ತಿದ್ದಾರೆ.
ಆದಿಪುರುಷ್ ಮತ್ತು ರಾಧೇ ಶ್ಯಾಮ್ ಚಿತ್ರೀಕರಣ ಮುಂಬೈನಲ್ಲೇ ನಡೆಯುತ್ತಿತ್ತು. ಸಲಾರ್ ಸದ್ಯಕ್ಕೆ ಬ್ರೇಕ್ ತೆಗೆದುಕೊಂಡಿದೆ.
ಈ ನಡುವೆ ನಾಗ್ ಅಶ್ವಿನ್ ನಿರ್ದೇಶನದಲ್ಲಿ ಪ್ರಭಾಸ್ ತಮ್ಮ 21ನೇ ಪ್ರಾಜೆಕ್ಟ್ ಆರಂಭಿಸಬೇಕಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿದ್ದು, ಅಮಿತಾಭ್ ಬಚ್ಚನ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.