Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇಕಪ್ ಕಲಾವಿದನಿಗೆ ಕೊರೊನಾ: ಕ್ವಾರಂಟೈನ್ ಆದ ಪ್ರಭಾಸ್
ಟಾಲಿವುಡ್ ನಟ ಪ್ರಭಾಸ್ ಅವರು ತಮ್ಮ ಸಿಬ್ಬಂದಿಯೊಬ್ಬರಿಗೆ ಕೋವಿಡ್ ಸೋಂಕು ತಗುಲಿದ ನಂತರ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಮೇಕಪ್ ಕಲಾವಿದನಿಗೆ ಕೊರೊನಾ ಪತ್ತೆಯಾದ ಹಿನ್ನೆಲೆ ಪ್ರಭಾಸ್ ಮತ್ತು ರಾಧೇ ಶ್ಯಾಮ್ ಚಿತ್ರತಂಡವನ್ನು ಐಸೋಲೇಟ್ ಆಗುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಭಾಸ್ ಅವರು ರಾಧೇ ಶ್ಯಾಮ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದೆ. ಇದಕ್ಕೂ ಮುಂಚೆ ಆದಿಪುರುಷ್ ಚಿತ್ರೀಕರಣದಲ್ಲೂ ಪ್ರಭಾಸ್ ಭಾಗಿಯಾಗಿದ್ದರು.
'ಆದಿಪುರುಷ್' ಚಿತ್ರತಂಡದಿಂದ ಪ್ರಭಾಸ್ ಅಭಿಮಾನಿಗಳಿಗೆ ಭಾರಿ ನಿರಾಸೆ
ಸಿಬ್ಬಂದಿಗೆ ಸೋಂಕು ದೃಢಪಟ್ಟ ಬಳಿಕ ರಾಧೇ ಶ್ಯಾಮ್ ಚಿತ್ರೀಕರಣ ಸ್ಥಗಿತಗೊಂಡಿದೆ. ಹಾಡಿನ ಜೊತೆ ಕೆಲವು ಪ್ರಮಖ ದೃಶ್ಯಗಳ ಚಿತ್ರೀಕರಣ ಬಾಕಿಯಿದೆ. ಮೇಕಪ್ ಕಲಾವಿದನಿಗೆ ಕೊರೊನಾ ತಗುಲಿರುವ ಕುರಿತು ಹಾಗೂ ಪ್ರಭಾಸ್ ಕ್ವಾರಂಟೈನ್ ಆಗಿರುವ ಕುರಿತು ಅಧಿಕೃತ ಮಾಹಿತಿ ನೀಡಿಲ್ಲ.
ಪ್ರಭಾಸ್ ಅವರು ಸತತವಾಗಿ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್, ಓಂ ರಾವತ್ ನಿರ್ದೇಶನದ ಆದಿಪುರುಷ್ ಹಾಗೂ ರಾಧೇ ಶ್ಯಾಮ್ ಚಿತ್ರೀಕರಣವನ್ನು ಒಟ್ಟೊಟ್ಟಿಗೆ ಬ್ಯಾಲೆನ್ಸ್ ಮಾಡುತ್ತಿದ್ದಾರೆ.
ಆದಿಪುರುಷ್ ಮತ್ತು ರಾಧೇ ಶ್ಯಾಮ್ ಚಿತ್ರೀಕರಣ ಮುಂಬೈನಲ್ಲೇ ನಡೆಯುತ್ತಿತ್ತು. ಸಲಾರ್ ಸದ್ಯಕ್ಕೆ ಬ್ರೇಕ್ ತೆಗೆದುಕೊಂಡಿದೆ.
ಈ ನಡುವೆ ನಾಗ್ ಅಶ್ವಿನ್ ನಿರ್ದೇಶನದಲ್ಲಿ ಪ್ರಭಾಸ್ ತಮ್ಮ 21ನೇ ಪ್ರಾಜೆಕ್ಟ್ ಆರಂಭಿಸಬೇಕಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿದ್ದು, ಅಮಿತಾಭ್ ಬಚ್ಚನ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.