Don't Miss!
- News Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ದಿಲ್ಲದೇ ಆ ನಟನನ್ನು ಭೇಟಿ ಮಾಡಿದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್?
ಕೆಜಿಎಫ್ ಚಾಪ್ಟರ್ 1 ಸಿನಿಮಾ ಮೂಲಕ ಇಡೀ ದೇಶವನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿರುವ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್ 2 ಪ್ರಾಜೆಕ್ಟ್ನಲ್ಲಿ ಬ್ಯುಸಿಯಿದ್ದಾರೆ.
ಈ ಸಿನಿಮಾ ಮುಗಿಸಿದ ಬಳಿಕ ಮುಂದಿನ ಚಿತ್ರವನ್ನು ಯಾವ ನಟನ ಜೊತೆ ಮಾಡಲಿದ್ದಾರೆ ಎಂಬ ಕುತೂಹಲ ಚಿತ್ರಪ್ರೇಮಿಗಳನ್ನು ಕಾಡುತ್ತಿದೆ.
ತೆಲುಗು ನಟರಾದ ಪ್ರಭಾಸ್, ಜೂನಿಯರ್ ಎನ್ ಟಿ ಆರ್ ಅವರ ಜೊತೆ ಮಾತುಕತೆ ಆಗ್ತಿದೆ ಎಂಬ ಸುದ್ದಿಗಳು ಚರ್ಚೆಯಲ್ಲಿದೆ. ಇಲ್ಲ, ಕನ್ನಡ ನಟರ ಜೊತೆಯೇ ಮುಂದಿನ ಸಿನಿಮಾ ಆಗಬಹುದು ಎಂದು ಹೇಳಲಾಗ್ತಿದೆ. ಆದ್ರೆ, ಪ್ರಶಾಂತ್ ನೀಲ್ ಹೊಸ ಚಿತ್ರದ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
ಪ್ರಭಾಸ್ 'ಅದಿಪುರುಷ್' ಸಿನಿಮಾಗೆ ನಾಯಕಿ ಫಿಕ್ಸ್; ಯಾರಾಗ್ತಿದ್ದಾರೆ ಸೀತೆ?
ಇದೀಗ, ಬಾಹುಬಲಿ ಸ್ಟಾರ್ ಪ್ರಭಾಸ್ ಅವರನ್ನು ಪ್ರಶಾಂತ್ ನೀಲ್ ಭೇಟಿ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಇವರಿಬ್ಬರು ಭೇಟಿ ಮಾಡಿರುವ ಫೋಟೋ ಯಾವುದು ಬಹಿರಂಗವಾಗಿಲ್ಲ, ಆದರೆ, ಇಬ್ಬರು ಮುಖಾಮುಖಿಯಾಗಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಸದ್ಯ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಹೈದರಾಬಾದ್ನಲ್ಲಿ ನಡೆಯುತ್ತಿದೆ. ಯಶ್, ಸಂಜಯ್ ದತ್ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ.
ಪ್ರಭಾಸ್ ಮುಂದಿನ ಮೂರು ಚಿತ್ರಗಳ ಬಜೆಟ್ 1000 ಕೋಟಿ!
ಮತ್ತೊಂದೆಡೆ ಪ್ರಭಾಸ್ ನಟಿಸಿರುವ ರಾಧೇ ಶ್ಯಾಮ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದಾದ ಬಳಿಕ ನಾಗ್ ಅಶ್ವಿನ್ ಹಾಗೂ ಆದಿಪುರುಷ್ ಪ್ರಾಜೆಕ್ಟ್ ಸಾಲಿನಲ್ಲಿದೆ.