Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ 'ಮನೆ'ಯಿಂದ ಹೊರಬಿತ್ತು 'ಬಿಗ್' ಸಿನಿಮಾ ಸುದ್ದಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದಿಂದ ಚಿತ್ರಕ್ಕೆ ಹೊಸತನ ಬಯಸುವ ನಟ. ನಟನೆ, ಗಾಯನ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಂಡಿರುವ ಅಪ್ಪು ಈಗ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದಾರೆ.
ಹೌದು, ಪುನೀತ್ ರಾಜ್ ಕುಮಾರ್ ಕಣ್ಣು ಈಗ ನಿರ್ಮಾಣದತ್ತ ಬಿದ್ದಿದೆ. ಪುನೀತ್ ತಮ್ಮ ಸ್ವಂತ ನಿರ್ಮಾಣ ಸಂಸ್ಥೆಯನ್ನ ಸ್ಥಾಪಿಸಿದ್ದು, ಈ ಬ್ಯಾನರ್ ನಲ್ಲಿ ತಮ್ಮ ಚೊಚ್ಚಲ ಚಿತ್ರವನ್ನ ತಯಾರು ಮಾಡುತ್ತಿದ್ದಾರೆ. ಹೀಗಿರುವಾಗ, ತಮ್ಮ ಬ್ಯಾನರ್ ನಲ್ಲಿ ಮತ್ತೊಂದು ಚಿತ್ರವನ್ನ ನಿರ್ಮಾಣ ಮಾಡುವ ಯೋಚನೆ ಮಾಡಿದ್ದು, ಈ ಚಿತ್ರದಲ್ಲಿ ತಾವೇ ನಾಯಕರಾಗಿ ಅಭಿನಯಿಸಲಿದ್ದಾರಂತೆ.
ಯಾವುದು ಆ ಚಿತ್ರ? ಯಾರು ಈ ಚಿತ್ರಕ್ಕೆ ನಿರ್ದೇಶಕ? ಯಾವಾಗ ಶುರು ಎಂದು ತಿಳಿದುಕೊಳ್ಳಲು ಮುಂದೆ ಓದಿ.....
ಎರಡನೇ ಚಿತ್ರಕ್ಕೆ ಪುನೀತ್ ನಾಯಕ
ಪವರ್ ಸ್ಟಾರ್ ತಮ್ಮ ಸ್ವಂತ ನಿರ್ಮಾಣ ಸಂಸ್ಥೆಯಲ್ಲಿ ತಯಾರು ಮಾಡಲಿರುವ ಎರಡನೇ ಚಿತ್ರದಲ್ಲಿ ತಾವೇ ನಾಯಕರಾಗಿ ಅಭಿನಯಿಸುತ್ತಿದ್ದಾರೆ.
ಪುನೀತ್ ನಿರ್ಮಾಣದ 'ಕವಲು ದಾರಿ' ಕುರಿತ ಲೇಟೆಸ್ಟ್ ಸುದ್ದಿ ಇದು..
ಶಶಾಂಕ್ ನಿರ್ದೇಶನ
ಪುನೀತ್ ನಟಿಸಿ, ನಿರ್ಮಾಣ ಮಾಡಲಿರುವ ಚಿತ್ರಕ್ಕೆ ಸ್ಟಾರ್ ನಿರ್ದೇಶಕ ಶಶಾಂಕ್ ಆಕ್ಷನ್ ಕಟ್ ಹೇಳಲಿದ್ದಾರೆ.
ಮುಂದಿನ ವರ್ಷ ಆರಂಭ
ಸದ್ಯ, ಪುನೀತ್ ರಾಜ್ ಕುಮಾರ್ 'ಅಂಜನಿಪುತ್ರ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಾದ ನಂತರ ತಮಿಳು ನಿರ್ದೇಶಕ ವೆಟ್ರಿಮಾರನ್ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಅದಾದ ನಂತರ ಶಶಾಂಕ್ ಮತ್ತು ಪುನೀತ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ.
ಚೊಚ್ಚಲ ಕಾಂಬಿನೇಷನ್
'ಮೊಗ್ಗಿನ ಮನಸ್ಸು', 'ಕೃಷ್ಣನ್ ಲವ್ ಸ್ಟೋರಿ', 'ಕಷ್ಣಲೀಲಾ'. 'ಮುಂಗಾರು ಮಳೆ-2', 'ಬಚ್ಚನ್', ಅಂತಹ ಚಿತ್ರಗಳನ್ನ ನಿರ್ದೇಶನ ಮಾಡಿರುವ ಶಶಾಂಕ್, ಇದೇ ಮೊದಲ ಬಾರಿಗೆ ಪುನೀತ್ ಜೊತೆ ಸಿನಿಮಾ ಮಾಡುತ್ತಿದ್ದಾರೆ.
'ಕವಲುದಾರಿ'ಗೆ ಅಪ್ಪು ನಿರ್ಮಾಣ
'ಗೋಧಿಬಣ್ಣ ಸಾಧಾರಣ ಮೈಕಟ್ಟು' ಚಿತ್ರದ ನಿರ್ದೇಶಕ ಹೇಮಂತ್ ರಾವ್ ಆಕ್ಷನ್ ಕಟ್ ಹೇಳುತ್ತಿರುವ 'ಕವಲುದಾರಿ' ಚಿತ್ರವನ್ನ ಪುನೀತ್ ರಾಜ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.