Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೆಬ್ಬುಲಿ' ನಿರ್ಮಾಪಕನ ಮುಂದಿನ ಚಿತ್ರದ ಹೀರೋ ಪುನೀತ್
'ಹೆಬ್ಬುಲಿ' ಚಿತ್ರದ ಸಕ್ಸಸ್ ನಂತರ ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಉಮಾಪತಿ ಶ್ರೀನಿವಾಸ್ ಮತ್ತೆ ಕಿಚ್ಚ ಸುದೀಪ್ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದರು. ಆದರೆ ಅವರ ಆಸೆ ತಕ್ಷಣಕ್ಕೆ ಈಡೇರಲಿಲ್ಲ. ಈಗ ಉಮಾಪತಿ ಶ್ರೀನಿವಾಸ್ ರವರು ಪುನೀತ್ ರಾಜ್ ಕುಮಾರ್ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
'ರಾಜಕುಮಾರ' 100 ಡೇಸ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೋಡಿ
ಹೌದು, 'ಉಮಾಪತಿ ಫಿಲ್ಮ್ಸ್' ಬ್ಯಾನರ್ ಅಡಿಯಲ್ಲಿ ತಮ್ಮ ಮೊದಲ ಸಿನಿಮಾವನ್ನೇ ಕಿಚ್ಚ ಸುದೀಪ್ ಚಿತ್ರದ ಮೂಲಕ ನಿರ್ಮಾಣ ಮಾಡಲು ಶುರುಮಾಡಿದ ಯುವ ನಿರ್ಮಾಪಕ ಉಮಾಪತಿ ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರಕ್ಕೆ ಬಂಡವಾಳ ಹೂಡಲು ಮುಂದಾಗಿದ್ದಾರಂತೆ. ಇವರ ಚಿತ್ರದಲ್ಲಿ ಪುನೀತ್ ಸಹ ಅಭಿನಯಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರಂತೆ.
ಅಂದಹಾಗೆ ಉಮಾಪತಿ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ಚಿತ್ರ 2018 ಕ್ಕೆ ಸೆಟ್ಟೇರಲಿದ್ದು, ಚಿತ್ರಕ್ಕೆ ಈಗಾಗಲೇ ನಿರ್ಮಾಪಕ ಪುನೀತ್ ಅವರೊಂದಿಗೆ ಮಾತನಾಡಿ ಡೇಟ್ಸ್ ಸಹ ಪಡೆದಿದ್ದಾರಂತೆ. ಆದರೆ ಈ ಸಕ್ಸಸ್ ಫುಲ್ ನಿರ್ಮಾಪಕ ಮತ್ತು ಪುನೀತ್ ರಾಜ್ ಕುಮಾರ್ ಜೋಡಿಯ ಚಿತ್ರಕ್ಕೆ ನಿರ್ದೇಶಕರು ಯಾರು ಎಂಬುದು ಇನ್ನು ಫೈನಲ್ ಆಗಿಲ್ಲವಂತೆ. ಉಮಾಪತಿ ಈ ಚಿತ್ರಕ್ಕಾಗಿ ಯುವ ನಿರ್ದೇಶಕರ ಹುಡುಕಾಟದಲ್ಲಿದ್ದಾರಂತೆ.
ಸದ್ಯದಲ್ಲಿ 'ಕನ್ನಡದ ರಾಜರತ್ನ' ಪುನೀತ್ ರಾಜ್ ಕುಮಾರ್ ರವರು ಹರ್ಷ ನಿರ್ದೇಶನದ 'ಅಂಜನಿಪುತ್ರ' ಚಿತ್ರದಲ್ಲಿ ಬ್ಯುಸಿ ಆಗಿದ್ದು, ಈ ಚಿತ್ರದ ನಂತರ ಯಾವ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬುದರ ಬಗ್ಗೆ ಇನ್ನು ಯಾವುದೇ ಸುದ್ದಿ ಹೊರಬಿದ್ದಿಲ್ಲ.