Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಕೃಷ್ಣನಾದ ಕಿಚ್ಚನ ಜೊತೆ ಇಬ್ಬರು ಗೋಪಿಕೆಯರು, ಯಾರವರು.?
ಹಿಂದಿ 'ಓ ಮೈ ಗಾಡ್' ಚಿತ್ರದ ರೀಮೇಕ್ ಆಗಿರುವ 'ಮುಕುಂದ ಮುರಾರಿ' ಫಸ್ಟ್ ಲುಕ್ ಮೊನ್ನೆ ಮೊನ್ನೆ ರಿಲೀಸ್ ಆಯ್ತು. ಕಿಚ್ಚ ಸುದೀಪ್ ಅವರು ಶ್ರೀಕೃಷ್ಣನ ಅವತಾರದಲ್ಲಿ ಕಾಣಿಸಿಕೊಂಡಿರುವ ಫಸ್ಟ್ ಲುಕ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು ಸುಳ್ಳಲ್ಲ.
ಇದೀಗ ಈ ಚಿತ್ರತಂಡದಿಂದ ಮತ್ತೊಂದು ಬ್ಲಾಸ್ಟಿಂಗ್ ನ್ಯೂಸ್ ಹೊರಬಿದ್ದಿದೆ. ಈ ಚಿತ್ರದಲ್ಲಿ ಸುದೀಪ್ ಅವರಿಗಾಗಿ ಅಂತಾನೇ ಒಂದು ವಿಶೇಷ ಹಾಡಿದ್ದು, ಆ ಹಾಡಿನಲ್ಲಿ ಕಿಚ್ಚನಿಗೆ ಸಾಥ್ ಕೊಡಲು ಇಬ್ಬರು ಸುಂದರಿಯರು ಇರುತ್ತಾರಂತೆ. ['ಮುಕುಂದ ಮುರಾರಿ' ಅಡ್ಡದಿಂದ ಲೀಕ್ ಆಗಿರುವ 'ಕೃಷ್ಣ' ಸುದೀಪ್ ಫೋಟೋ ಇದೇ.!] ಯಾರು ಆ ಸುಂದರಿಯರು ಮುಂದೆ ಓದಿ......
ರಚಿತಾ ರಾಮ್ ಮತ್ತು ಭಾವನಾ
ಅವರು ಬೇರಾರು ಅಲ್ಲ, 'ರನ್ನ'ನ ರಾಣಿ ರಚಿತಾ ರಾಮ್ ಮತ್ತು 'ವಿಷ್ಣುವರ್ಧನ'ನ ಬೆಡಗಿ ಭಾವನಾ ಮೆನನ್ ಎನ್ನುತ್ತಿವೆ ಚಿತ್ರತಂಡದ ಮೂಲಗಳು.[ಉಪ್ಪಿ ಹುಟ್ಟುಹಬ್ಬಕ್ಕೆ 'ಮುಕುಂದ ಮುರಾರಿ' ರಿಲೀಸ್.?]
ಉಪ್ಪಿ ಮತ್ತು ಕಿಚ್ಚನ ಜುಗಲ್ ಬಂದಿ
ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅವರು ಒಂದಾಗಿ ಕಾಣಿಸಿಕೊಂಡಿದ್ದಾರೆ. ನಟಿ ನಿಖಿತಾ ತುಕ್ರಾಲ್ ಅವರು ಉಪ್ಪಿ ಜೊತೆ ಡ್ಯುಯೆಟ್ ಹಾಡುತ್ತಿದ್ದು, ನಟ ರವಿಶಂಕರ್ ಅವರು ಲೀಲಾನಂದ ಸ್ವಾಮೀಜಿಯಾಗಿ ಮಿಂಚಿದ್ದಾರೆ.
ಲಿಸ್ಟ್ ನಲ್ಲಿದ್ದರು ನಾಲ್ವರು ಬೆಡಗಿಯರು
ಶ್ರೀ ಕೃಷ್ಣ ಪರಮಾತ್ಮನಾಗಿ ಕಾಣಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್ ಅವರ ಜೊತೆ ವಿಶೇಷ ಹಾಡಿಗೆ ಹೆಜ್ಜೆ ಹಾಕಲು, ಈ ಮೊದಲು ಗುಳಿಕೆನ್ನೆ ಬೆಡಗಿ ರಚಿತಾ ರಾಮ್, ಭಾವನಾ, ತೆಲುಗು ನಡಿ ರೆಜಿನಾ ಕಸೆಂಡ್ರಾ ಮತ್ತು ಲಕ್ಷ್ಮಿ ರೈ ಅವರು ಲಿಸ್ಟ್ ನಲ್ಲಿದ್ದರು. ಕೊನೆಗೆ ರಚಿತಾ ರಾಮ್ ಮತ್ತು ಭಾವನಾ ಅವರು ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ.
'ಹೆಬ್ಬುಲಿ' ಶೂಟ್ ನಲ್ಲಿ ಕಿಚ್ಚ ಬಿಜಿ
ಸದ್ಯಕ್ಕೆ ಕಾಶ್ಮೀರದಲ್ಲಿ 'ಹೆಬ್ಬುಲಿ' ಶೂಟಿಂಗ್ ನಲ್ಲಿ ಬಿಜಿಯಾಗಿರುವ ಕಿಚ್ಚ ಸುದೀಪ್ ಅವರು ವಾಪಸಾದ ಮೇಲೆ ಈ ವಿಶೇಷ ಹಾಡಿನ ಶೂಟಿಂಗ್ ನಡೆಯಲಿದೆ, ಎನ್ನುತ್ತಿವೆ ಮೂಲಗಳು. ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಅವರು ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
ಉಪ್ಪಿ ಬರ್ತ್ ಡೇಗೆ ಆಡಿಯೋ
ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದಂದು ಆಡಿಯೋ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಈ ಮೊದಲು ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕೆ ಸುದೀಪ್ ಅವರ ಮೊದಲ ನೋಟ ಬಿಡುಗಡೆ ಮಾಡಿದ್ದಾರೆ.