Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂದು ಕೈಬಿಟ್ಟು ಹೋಗಿದ್ದ 'ಜಾನಿ' ಮತ್ತೆ ರಚಿತಾ ರಾಮ್ ತೆಕ್ಕೆಗೆ.!
ದುನಿಯಾ ವಿಜಯ್ ಮತ್ತು ಪ್ರೀತಂ ಗುಬ್ಬಿ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ.
ಈ ಮೊದಲೇ ರಚಿತಾ ರಾಮ್ ಈ ಚಿತ್ರಕ್ಕೆ ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ, ಅಂತಿಮ ಕ್ಷಣದಲ್ಲಿ ರಚಿತಾ ರಾಮ್ ಅವರು ಈ ಸಿನಿಮಾದಿಂದ ಹೊರ ಬಂದಿದ್ದರು. ಇದೀಗ, ಮತ್ತೆ ಜಾನಿಗೆ ಜೋಡಿಯಾಗಲು ಡಿಂಪಲ್ ಕ್ವೀನ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಗುಳಿಕೆನ್ನೆ ಚೆಲುವೆಗೆ ಅದೃಷ್ಟ ಮತ್ತೆ ಕೈ ಕೊಟ್ಟಿದೆ.!
ರಚಿತಾ ರಾಮ್ ಅವರು ಈ ಹಿಂದೆ ಹೊರ ಬಂದ ನಂತರ ಯುಟರ್ನ್ ಬೆಡಗಿ ಶ್ರದ್ಧಾ ಶ್ರೀನಾಥ್ ಗೆ ಈ ಅವಕಾಶ ಹೋಗಿತ್ತು. ಅವರು ಕೂಡ ಒಪ್ಪಿಕೊಂಡಿದ್ದರು. ಆದ್ರೀಗ, ಶ್ರದ್ಧಾ ಅವರ ಡೇಟ್ ಸಮಸ್ಯೆಯಿಂದ ಈ ಚಿತ್ರವನ್ನ ಕೈಬಿಡಲು ನಿರ್ಧರಿಸಿದ್ದು, ಮತ್ತೆ ರಚಿತಾ ರಾಮ್ ಅವರನ್ನೇ ಕರೆತರಲಾಗಿದೆಯಂತೆ.
ರಚಿತಾ ರಾಮ್ ಬಿಟ್ಟು ಹೋದ ಜಾಗ ತುಂಬಿದ 'ಯು-ಟರ್ನ್' ಬೆಡಗಿ ಶ್ರದ್ಧಾ
'ಜಾನಿ' ಚಿತ್ರದ ಮುಂದುವರೆದ ಭಾಗವಾಗಿರುವ ಈ ಚಿತ್ರದಲ್ಲಿ 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರವನ್ನ ಸ್ವತಃ ವಿಜಯ್ ಅವರೇ ನಿರ್ಮಾಣ ಮಾಡಲಿದ್ದಾರೆ. ಈ ಚಿತ್ರಕ್ಕಾಗಿಯೇ ವಿಶೇಷವಾದ ಸೆಟ್ ಹಾಕಲಾಗುತ್ತಿದೆ. ಕಲಾ ನಿರ್ದೇಶಕ ಮೋಹನ್ ಬಿ.ಕೆರೆಗೆ ಈ ಸೆಟ್ನ ಜವಾಬ್ದಾರಿ ವಹಿಸಲಾಗಿದೆ. ಈ ಕಡೆ 'ಕನಕ' ಚಿತ್ರವನ್ನ ಮುಗಿಸಿರುವ ದುನಿಯಾ ವಿಜಯ್ ಜಾನಿ ಸ್ವೀಕೆಲ್ ಚಿತ್ರೀಕರಣ ಆರಂಭಿಸಿದ್ದಾರೆ. ಮತ್ತೊಂದೆಡೆ ರಚಿತಾ ರಾಮ್ ಕೂಡ 'ಭರ್ಜರಿ' ಸಕ್ಸಸ್ ನಂತರ 'ಜಾನಿ' ತಂಡವನ್ನ ಸೇರಿಕೊಳ್ಳಲಿದ್ದಾರೆ.