Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದರ್ಬಾರ್' ನಂತರ ರಜನಿ ಮುಂದಿನ ಚಿತ್ರಕ್ಕೆ ಡೈರೆಕ್ಟರ್ ಫಿಕ್ಸ್
ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಪ್ರವೇಶ ಮಾಡುವ ಹಿನ್ನೆಲೆ ಇನ್ಮುಂದೆ ಸಿನಿಮಾಗಳನ್ನ ಮಾಡುವುದಿಲ್ಲ ಎಂದು ಹೇಳಲಾಗುತ್ತಿತ್ತು. ಪೇಟಾ ಚಿತ್ರದ ಬಳಿಕ ಬೇರೆ ಚಿತ್ರಗಳನ್ನ ಒಪ್ಪಿಕೊಳ್ಳುವುದು ಅನುಮಾನ ಎನ್ನಲಾಗಿತ್ತು.
ಆದರೆ, ಎಆರ್ ಮುರುಗದಾಸ್ ನಿರ್ದೇಶನ ದರ್ಬಾರ್ ಗೆ ಗ್ರೀನ್ ಸಿಗ್ನಲ್ ಕೊಟ್ಟರು. ಈಗ ದರ್ಬಾರ್ ನಂತರ ತಲೈವಾ ಸಿನಿಮಾ ಮಾಡ್ತಾರಾ ಎಂಬುದು ಇನ್ನು ಪಕ್ಕಾ ಆಗಿಲ್ಲ.
ಈ ಮಧ್ಯೆ ಮುಂದಿನ ಚಿತ್ರಕ್ಕೂ ರಜನಿಕಾಂತ್ ತಯಾರಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ. ತಮಿಳು ಸ್ಟಾರ್ ನಿರ್ದೇಶಕ ಸಿರುತೈ ಶಿವ ಜೊತೆ ಸೂಪರ್ ಸ್ಟಾರ್ ಮುಂದಿನ ಚಿತ್ರ ಮಾಡುವ ಸಾಧ್ಯತೆ ಇದೆಯಂತೆ.
'ಮಾಡಿದ ತಪ್ಪು ಅರಿವಾಯಿತು': ರಜನಿ, ಕಮಲ್ ಆ ತಪ್ಪು ಮಾಡುವುದು ಬೇಡ
ಈಗಾಗಲೇ ನಿರ್ದೇಶಕ ಶಿವ ಅವರು ರಜನಿಕಾಂತ್ ಅವರನ್ನ ಅಪ್ರೋಚ್ ಮಾಡಿದ್ದಾರಂತೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಅಂತಿಮವಾಗಿಲ್ಲ. ಈ ಬಗ್ಗೆ ಮಾತನಾಡಲು ಕೂಡ ಇದು ಸಮಯವಲ್ಲ ಎಂದು ನಿರ್ದೇಶಕ ಶಿವ ಹೇಳಿಕೊಂಡಿದ್ದಾರೆ. ಆದರೆ, ರಜನಿ ಜೊತೆ ಸಿನಿಮಾ ಮಾಡೋದು ಪಕ್ಕಾ ಎನ್ನಲಾಗಿದೆ.
ನಿರ್ಮಾಣ ಸಂಸ್ಥೆಯಿಂದ ರಿಜೆಕ್ಟ್ ಆಗಿತ್ತು ರಜನಿ - ಶಂಕರ್ ಸಿನಿಮಾ
ಶಿವ ಅವರ ಬಗ್ಗೆ ಹೇಳುವುದಾರೇ ಸಿನಿಮಾಟೋಗ್ರಫರ್ ಆಗಿ ಕೆಲಸ ಆರಂಭಿಸಿದ್ದ ಇವರು, ಕಾರ್ತಿ ಜೊತೆ ಸಿರುತೈ ಎಂಬ ಚಿತ್ರ ನಿರ್ದೇಶನ ಮಾಡಿದರು. ಅದಾದ ಬಳಿಕ ಅಜಿತ್ ಜೊತೆ ವೀರಂ, ವೇದಾಲಂ, ವಿವೇಗಂ, ವಿಶ್ವಾಸಂ ಅಂತಹ ಸೂಪರ್ ಹಿಟ್ ಚಿತ್ರಗಳನ್ನ ನೀಡಿದ್ದಾರೆ.
ದರ್ಬಾರ್ ಚಿತ್ರದಲ್ಲಿ ರಜನಿಕಾಂತ್ ಪೊಲೀಸ್ ಆಫೀಸರ್ ಆಗಿ ನಟಿಸಿದ್ದು, ನಯನತಾರ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ದರ್ಬಾರ್ ಪೋಸ್ಟರ್ ಗಳು ಅಭಿಮಾನಿಗಳಿಗೆ ಥ್ರಿಲ್ ಹೆಚ್ಚಿಸಿದ್ದು ಈ ವರ್ಷದ ಅಂತ್ಯಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ.