Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಿತ್ ಶೆಟ್ಟಿ ತಂಡದಿಂದ ತಯಾರಾಗ್ತಿದೆ ವೆಬ್ ಸಿರೀಸ್!
'ಅವನೇ ಶ್ರೀಮನ್ನಾರಾಯಣ' ಚಿತ್ರದ ಬಳಿಕ ಎರಡ್ಮೂರು ಪ್ರಾಜೆಕ್ಟ್ಗಳಲ್ಲಿ ಬ್ಯುಸಿಯಿರುವ ರಕ್ಷಿತ್ ಶೆಟ್ಟಿ ಈಗ ವೆಬ್ ಸಿರೀಸ್ ಪ್ಲಾನ್ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಹತ್ತು ಎಪಿಸೋಡ್ಗಳ ವೆಬ್ ಸಿರೀಸ್ ಇದಾಗಿದ್ದು, 'ಏಕಂ' (Ekam) ಎಂಬ ಈ ಚಿತ್ರಕ್ಕೆ ಹೆಸರಿಡಲಾಗಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
'ರಿಚ್ಚಿ' ಸಿನಿಮಾ ಟೈಟಲ್ ವಿವಾದ: ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ
ವೆಬ್ ಸಿರೀಸ್ ಮಾಡಲು ಎಲ್ಲ ತಯಾರಿ ನಡೆಸಿದ್ದು, ಅದಕ್ಕಾಗಿ ಪ್ರತಿಭಾನ್ವಿತ ತಂಡವನ್ನು ಸಹ ಸಿದ್ಧ ಮಾಡಿಕೊಂಡಿದ್ದಾರೆ. ಬಹುಶಃ ಮುಂದಿನ ವರ್ಷದ ಆರಂಭದಲ್ಲಿ ಚಿತ್ರೀಕರಣ ಆರಂಭವಾಗುವ ಸಾಧ್ಯತೆ ಇದೆ.
ಮತ್ತೊಂದೆಡೆ 'ಚಾರ್ಲಿ' ಸಿನಿಮಾದ ಚಿತ್ರೀಕರಣವನ್ನು ರಕ್ಷಿತ್ ಶೆಟ್ಟಿ ಬಹುತೇಕ ಮುಗಿಸಿದ್ದಾರೆ. 'ಉಳಿದವರು ಕಂಡಂತೆ' ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿದ್ದ ರಾಹುಲ್ ಜೊತೆಯೂ ಒಂದು ಸಿನಿಮಾ ಮಾಡುತ್ತಿದ್ದಾರೆ.
ಇದರ ಜೊತೆಗೆ 'ಪುಣ್ಯಕೋಟಿ' ಸಿನಿಮಾವೂ ಸಾಲಿನಲ್ಲಿದೆ. 'ಸಪ್ತಸಾಗರದಾಚೆ' ಎಂಬ ಚಿತ್ರವೂ ಘೋಷಣೆಯಾಗಿದೆ. ಹೀಗೆ, ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಿದ್ದರೂ ವೆಬ್ ಸಿರೀಸ್ ನಿರ್ಮಿಸಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.