Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಿತ್ ಶೆಟ್ಟಿ ತಂಡದಿಂದ ತಯಾರಾಗ್ತಿದೆ ವೆಬ್ ಸಿರೀಸ್!
'ಅವನೇ ಶ್ರೀಮನ್ನಾರಾಯಣ' ಚಿತ್ರದ ಬಳಿಕ ಎರಡ್ಮೂರು ಪ್ರಾಜೆಕ್ಟ್ಗಳಲ್ಲಿ ಬ್ಯುಸಿಯಿರುವ ರಕ್ಷಿತ್ ಶೆಟ್ಟಿ ಈಗ ವೆಬ್ ಸಿರೀಸ್ ಪ್ಲಾನ್ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಹತ್ತು ಎಪಿಸೋಡ್ಗಳ ವೆಬ್ ಸಿರೀಸ್ ಇದಾಗಿದ್ದು, 'ಏಕಂ' (Ekam) ಎಂಬ ಈ ಚಿತ್ರಕ್ಕೆ ಹೆಸರಿಡಲಾಗಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
'ರಿಚ್ಚಿ' ಸಿನಿಮಾ ಟೈಟಲ್ ವಿವಾದ: ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ
ವೆಬ್ ಸಿರೀಸ್ ಮಾಡಲು ಎಲ್ಲ ತಯಾರಿ ನಡೆಸಿದ್ದು, ಅದಕ್ಕಾಗಿ ಪ್ರತಿಭಾನ್ವಿತ ತಂಡವನ್ನು ಸಹ ಸಿದ್ಧ ಮಾಡಿಕೊಂಡಿದ್ದಾರೆ. ಬಹುಶಃ ಮುಂದಿನ ವರ್ಷದ ಆರಂಭದಲ್ಲಿ ಚಿತ್ರೀಕರಣ ಆರಂಭವಾಗುವ ಸಾಧ್ಯತೆ ಇದೆ.
ಮತ್ತೊಂದೆಡೆ 'ಚಾರ್ಲಿ' ಸಿನಿಮಾದ ಚಿತ್ರೀಕರಣವನ್ನು ರಕ್ಷಿತ್ ಶೆಟ್ಟಿ ಬಹುತೇಕ ಮುಗಿಸಿದ್ದಾರೆ. 'ಉಳಿದವರು ಕಂಡಂತೆ' ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿದ್ದ ರಾಹುಲ್ ಜೊತೆಯೂ ಒಂದು ಸಿನಿಮಾ ಮಾಡುತ್ತಿದ್ದಾರೆ.
ಇದರ ಜೊತೆಗೆ 'ಪುಣ್ಯಕೋಟಿ' ಸಿನಿಮಾವೂ ಸಾಲಿನಲ್ಲಿದೆ. 'ಸಪ್ತಸಾಗರದಾಚೆ' ಎಂಬ ಚಿತ್ರವೂ ಘೋಷಣೆಯಾಗಿದೆ. ಹೀಗೆ, ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಿದ್ದರೂ ವೆಬ್ ಸಿರೀಸ್ ನಿರ್ಮಿಸಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.