Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೂಜಾಗಾಂಧಿ ಕೆಜೆಪಿ ಹಾದಿಯಲ್ಲಿ ರಕ್ಷಿತಾ ಪ್ರೇಮ್?
ಅದೇನೆಂದರೆ ಸ್ವಾಭಿಮಾನಿ ಶ್ರೀರಾಮುಲು ಅವರ ಬಿಎಸ್ ಆರ್ ಕಾಂಗ್ರೆಸ್ ಪಕ್ಷದ ಪ್ರಮುಖ ಆಕರ್ಷಣೆಯಾಗಿರುವ ತಾರೆ ರಕ್ಷಿತಾ ಪ್ರೇಮ್ ಅವರು ಕೆಜೆಪಿ ಪಕ್ಷಕ್ಕೆ ಸೇರಲಿದ್ದಾರೆ ಎಂಬುದು. ಈಗಾಗಲೆ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎನ್ನಲಾಗಿದೆ.
ಇನ್ನೇನು ಅಧಿಕೃತವಾಗಿ ಕೆಜೆಪಿಗೆ ಸೇರುವುದಷ್ಟೇ ಬಾಕಿ ಇದೆಯಂತೆ. ಈ ಬಗ್ಗೆ ರಕ್ಷಿತಾ ಅವರು ಒಂಥರಾ ಅಡ್ಡಗೋಡೆ ಮೇಲೆ ಫ್ಯಾನ್ (ಬಿಎಸ್ ಆರ್ ಪಕ್ಷದ ಚಿಹ್ನೆ) ತಿರುಗಿಸಿದ್ದಾರೆ. "ಮುಂದೇನಾಗುತ್ತದೋ ನನಗೂ ಗೊತ್ತಿಲ್ಲ. ರಾಜಕೀಯದಲ್ಲಿ ಪಕ್ಷಾಂತರ ಹೊಸದೇನಲ್ಲ" ಎಂದಿದ್ದಾರೆ.
ಅವರೂ ಒಗಟೊಗಟಾಗಿ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ. ಶ್ರೀರಾಮುಲು ಅವರ ಪಕ್ಷದಲ್ಲೇ ರಕ್ಷಿತಾ ರಾಜಕೀಯ ಓನಾಮಗಳನ್ನು ಕಲಿತಿದ್ದು. ಅಲ್ಲಿ ಕಲಿತ ಪಾಠಗಳನ್ನು ಕೆಜೆಪಿಯಲ್ಲಿ ಆಚರಣೆಗೆ ತರಲಿದ್ದಾರೆ ಎನ್ನುತ್ತವೆ ಮೂಲಗಳು.
ತಮ್ಮ ಗ್ಲಾಮರ್ ಹಾಗೂ ಭಾಷಣಗಳ ಮೂಲಕ ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳುವಲ್ಲೂ ಒಂಚೂರು ಯಶಸ್ವಿಯಾಗಿದ್ದರು ರಕ್ಷಿತಾ. ಮುಂಬರುವ ವಿಧಾನಸಭೆ ಚುನಾವಣೆಗೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು.
ಇತ್ತೀಚೆಗಷ್ಟೇ ನಟಿ ಪೂಜಾಗಾಂಧಿ ಅವರು ಜೆಡಿಎಸ್ ತೊರೆದು ಕೆಜೆಪಿಗೆ ಸೇರ್ಪಡೆಯಾಗಿದ್ದರು. ಈಗ ಅದೇ ಹಾದಿಯಲ್ಲಿ ರಕ್ಷಿತಾ ಪ್ರೇಮ್ ಅವರೂ ಇದ್ದಾರಾ? ಉತ್ತರ ಸಿಗಬೇಕಾದರೆ ಸ್ವಲ್ಪ ದಿನ ಕಾಯಲೇಬೇಕು. (ಏಜೆನ್ಸೀಸ್)