Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎನ್ಟಿಆರ್ ಮುಂದಿನ ಚಿತ್ರದಲ್ಲಿ ರಾಜಕಾರಣಿಯಾದ ಸ್ಟಾರ್ ಹೀರೋಯಿನ್!
ಎಸ್ ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರದಲ್ಲಿ ಜೂನಿಯರ್ ಎನ್ ಟಿ ಆರ್ ನಟಿಸುತ್ತಿದ್ದಾರೆ. ರಾಮ್ ಚರಣ್ ಮತ್ತು ಎನ್ಟಿಆರ್ ಇಬ್ಬರು ಮೊದಲ ಸಲ ಒಟ್ಟಿಗೆ ನಟಿಸುತ್ತಿದ್ದಾರೆ. ಈ ಚಿತ್ರ ಮುಗಿಯುತ್ತಿದ್ದಂತೆ ತ್ರಿವಿಕ್ರಮ್ ನಿರ್ದೇಶನದಲ್ಲಿ ಎನ್ಟಿಆರ್ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರದ ಪ್ರಿ-ಪ್ರೊಡಕ್ಷನ್ ಆರಂಭಿಸಿರುವ ತ್ರಿವಿಕ್ರಮ್ ಚಿತ್ರಕ್ಕೆ ಬೇಕಾದ ಕಲಾವಿದರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಸಹ ಆರಂಭಿಸಿದ್ದಾರೆ.
ಜೂನಿಯರ್ ಎನ್ಟಿಆರ್ ಬಗ್ಗೆ ನೀಚವಾಗಿ ಮಾತನಾಡಿದ್ದರು ಅನುರಾಗ್ ಕಶ್ಯಪ್!
ತ್ರಿವಿಕ್ರಮ್ ಹಾಗೂ ಎನ್ಟಿಆರ್ ಕಾಂಬಿನೇಷನ್ನಲ್ಲಿ ಮೂಡಿ ಬರಲಿರುವ ಚಿತ್ರದಲ್ಲಿ ಹಿರಿಯ ನಟಿಯೊಬ್ಬರು ರಾಜಕಾರಣಿ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಈ ಪಾತ್ರ ಬಹಳ ಪ್ರಮುಖವಾಗಿದ್ದು, ಇಡೀ ಚಿತ್ರದಲ್ಲಿ ಹೈಲೈಟ್ ಆಗಿರಲಿದೆಯಂತೆ. ಹಾಗಾಗಿ, ಈ ಪಾತ್ರಕ್ಕಾಗಿ ಬಹುಭಾಷಾ ನಟಿ ರಮ್ಯಾ ಕೃಷ್ಣನ್ ಅವರನ್ನು ಕರೆತರುವ ಪ್ರಯತ್ನ ಸಾಗಿದೆ.
ಬಾಹುಬಲಿ ಚಿತ್ರದಲ್ಲಿ ರಾಜಮಾತೆ ಶಿವಗಾಮಿಯಾಗಿ ಕಾಣಿಸಿಕೊಂಡ ಬಳಿಕ ರಮ್ಯಾಕೃಷ್ಣನ್ ಅವರ ಇಮೇಜ್ ಸಪೂರ್ಣವಾಗಿ ಬದಲಾಗಿದೆ. ರಮ್ಯಾಕೃಷ್ಣನ್ ಅವರಿಗಾಗಿ ಪಾತ್ರಗಳನ್ನು ಕ್ರಿಯೇಟ್ ಮಾಡುವತ್ತಾ ನಿರ್ದೇಶಕರು ಚಿತ್ತ ನೆಟ್ಟಿದ್ದಾರೆ.
ತ್ರಿವಿಕ್ರಮ್ ತಮ್ಮ ಪ್ರತಿ ಚಿತ್ರದಲ್ಲೂ ಒಬ್ಬೊಬ್ಬ ಹಿರಿಯ ನಟಿಯನ್ನು ಆಯ್ಕೆ ಮಾಡಿಕೊಂಡು ಚಿತ್ರಕ್ಕೆ ಬಲ ತುಂಬುತ್ತಿದ್ದಾರೆ. ಅತ್ತಾರಿಂಟಿಕಿ ದಾರೇದಿ ಚಿತ್ರದಲ್ಲಿ ನಾದಿಯಾ, ಅಲಾ ವೈಕುಂಠಪುರಂಲೋ ಚಿತ್ರದಲ್ಲಿ ಟಬು ಪಾತ್ರ ಹೀಗೆ ಇತ್ತು. ಇದೀಗ, ರಮ್ಯಾಕೃಷ್ಣನ್ ಪಾತ್ರ ಸಹ ಅಷ್ಟೇ ಪ್ರಮುಖವಾಗಿರಲಿದೆಯಂತೆ.
ಅಲಾ ವೈಕುಂಠಪುರಂಲೋ ಸಕ್ಸಸ್ ಬಳಿಕ ಎನ್ಟಿಆರ್ ಚಿತ್ರಕ್ಕಾಗಿ ತ್ರಿವಿಕ್ರಮ್ ಕೆಲಸ ಮಾಡುತ್ತಿದ್ದಾರೆ. ಕಥೆ-ಚಿತ್ರಕಥೆ-ಸಂಭಾಷಣೆ ಹಾಗು ನಿರ್ದೇಶನ ಸಹ ಅವರದ್ದೇ ಇರುತ್ತದೆ. ಇದಕ್ಕೂ ಮುಂಚೆ ಎನ್ಟಿಆರ್ ಜೊತೆ ಅರವಿಂದ ಸಮೇತ ವೀರ ರಾಘವ ಎಂಬ ಚಿತ್ರ ಮಾಡಿದ್ದರು ತ್ರಿವಿಕ್ರಮ್.