Don't Miss!
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎನ್ಟಿಆರ್ ಮುಂದಿನ ಚಿತ್ರದಲ್ಲಿ ರಾಜಕಾರಣಿಯಾದ ಸ್ಟಾರ್ ಹೀರೋಯಿನ್!
ಎಸ್ ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರದಲ್ಲಿ ಜೂನಿಯರ್ ಎನ್ ಟಿ ಆರ್ ನಟಿಸುತ್ತಿದ್ದಾರೆ. ರಾಮ್ ಚರಣ್ ಮತ್ತು ಎನ್ಟಿಆರ್ ಇಬ್ಬರು ಮೊದಲ ಸಲ ಒಟ್ಟಿಗೆ ನಟಿಸುತ್ತಿದ್ದಾರೆ. ಈ ಚಿತ್ರ ಮುಗಿಯುತ್ತಿದ್ದಂತೆ ತ್ರಿವಿಕ್ರಮ್ ನಿರ್ದೇಶನದಲ್ಲಿ ಎನ್ಟಿಆರ್ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರದ ಪ್ರಿ-ಪ್ರೊಡಕ್ಷನ್ ಆರಂಭಿಸಿರುವ ತ್ರಿವಿಕ್ರಮ್ ಚಿತ್ರಕ್ಕೆ ಬೇಕಾದ ಕಲಾವಿದರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಸಹ ಆರಂಭಿಸಿದ್ದಾರೆ.
ಜೂನಿಯರ್ ಎನ್ಟಿಆರ್ ಬಗ್ಗೆ ನೀಚವಾಗಿ ಮಾತನಾಡಿದ್ದರು ಅನುರಾಗ್ ಕಶ್ಯಪ್!
ತ್ರಿವಿಕ್ರಮ್ ಹಾಗೂ ಎನ್ಟಿಆರ್ ಕಾಂಬಿನೇಷನ್ನಲ್ಲಿ ಮೂಡಿ ಬರಲಿರುವ ಚಿತ್ರದಲ್ಲಿ ಹಿರಿಯ ನಟಿಯೊಬ್ಬರು ರಾಜಕಾರಣಿ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಈ ಪಾತ್ರ ಬಹಳ ಪ್ರಮುಖವಾಗಿದ್ದು, ಇಡೀ ಚಿತ್ರದಲ್ಲಿ ಹೈಲೈಟ್ ಆಗಿರಲಿದೆಯಂತೆ. ಹಾಗಾಗಿ, ಈ ಪಾತ್ರಕ್ಕಾಗಿ ಬಹುಭಾಷಾ ನಟಿ ರಮ್ಯಾ ಕೃಷ್ಣನ್ ಅವರನ್ನು ಕರೆತರುವ ಪ್ರಯತ್ನ ಸಾಗಿದೆ.
ಬಾಹುಬಲಿ ಚಿತ್ರದಲ್ಲಿ ರಾಜಮಾತೆ ಶಿವಗಾಮಿಯಾಗಿ ಕಾಣಿಸಿಕೊಂಡ ಬಳಿಕ ರಮ್ಯಾಕೃಷ್ಣನ್ ಅವರ ಇಮೇಜ್ ಸಪೂರ್ಣವಾಗಿ ಬದಲಾಗಿದೆ. ರಮ್ಯಾಕೃಷ್ಣನ್ ಅವರಿಗಾಗಿ ಪಾತ್ರಗಳನ್ನು ಕ್ರಿಯೇಟ್ ಮಾಡುವತ್ತಾ ನಿರ್ದೇಶಕರು ಚಿತ್ತ ನೆಟ್ಟಿದ್ದಾರೆ.
ತ್ರಿವಿಕ್ರಮ್ ತಮ್ಮ ಪ್ರತಿ ಚಿತ್ರದಲ್ಲೂ ಒಬ್ಬೊಬ್ಬ ಹಿರಿಯ ನಟಿಯನ್ನು ಆಯ್ಕೆ ಮಾಡಿಕೊಂಡು ಚಿತ್ರಕ್ಕೆ ಬಲ ತುಂಬುತ್ತಿದ್ದಾರೆ. ಅತ್ತಾರಿಂಟಿಕಿ ದಾರೇದಿ ಚಿತ್ರದಲ್ಲಿ ನಾದಿಯಾ, ಅಲಾ ವೈಕುಂಠಪುರಂಲೋ ಚಿತ್ರದಲ್ಲಿ ಟಬು ಪಾತ್ರ ಹೀಗೆ ಇತ್ತು. ಇದೀಗ, ರಮ್ಯಾಕೃಷ್ಣನ್ ಪಾತ್ರ ಸಹ ಅಷ್ಟೇ ಪ್ರಮುಖವಾಗಿರಲಿದೆಯಂತೆ.
ಅಲಾ ವೈಕುಂಠಪುರಂಲೋ ಸಕ್ಸಸ್ ಬಳಿಕ ಎನ್ಟಿಆರ್ ಚಿತ್ರಕ್ಕಾಗಿ ತ್ರಿವಿಕ್ರಮ್ ಕೆಲಸ ಮಾಡುತ್ತಿದ್ದಾರೆ. ಕಥೆ-ಚಿತ್ರಕಥೆ-ಸಂಭಾಷಣೆ ಹಾಗು ನಿರ್ದೇಶನ ಸಹ ಅವರದ್ದೇ ಇರುತ್ತದೆ. ಇದಕ್ಕೂ ಮುಂಚೆ ಎನ್ಟಿಆರ್ ಜೊತೆ ಅರವಿಂದ ಸಮೇತ ವೀರ ರಾಘವ ಎಂಬ ಚಿತ್ರ ಮಾಡಿದ್ದರು ತ್ರಿವಿಕ್ರಮ್.