Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಂಗಿತರಂಗ' ನಿರ್ಮಾಪಕರಿಗೆ ರಕ್ಷಿತ್ ಶೆಟ್ಟಿನೇ ಬೇಕಂತೆ.!
ಭಂಡಾರಿ ಸಹೋದರರ 'ರಂಗಿತರಂಗ' ಚಿತ್ರಕ್ಕೆ ಬಂಡವಾಳ ಹಾಕಿ ಕೋಟಿ-ಕೋಟಿ ಹಣ ಬಾಚಿಕೊಂಡ ನಿರ್ಮಾಪಕ ಎಚ್.ಕೆ ಪ್ರಕಾಶ್ ಅವರು ಇದೀಗ ರಕ್ಷಿತ್ ಶೆಟ್ಟಿ ಅವರ ಜೊತೆ ಕೈ ಜೋಡಿಸುತ್ತಿದ್ದಾರೆ.
'ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ', 'ಉಳಿದವರು ಕಂಡಂತೆ', 'ರಿಕ್ಕಿ', 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಮುಂತಾದ ಪ್ರಯೋಗಾತ್ಮಕ ಚಿತ್ರಗಳ ಮೂಲಕ ಖ್ಯಾತಿ ಗಳಿಸಿದ ನಟ ಕಮ್ ನಿರ್ದೇಶಕ ರಕ್ಷಿತ್ ಶೆಟ್ಟಿ ಅವರು ಇದೀಗ ಹಿಟ್ ನಿರ್ಮಾಪಕ ಎಚ್.ಕೆ.ಪ್ರಕಾಶ್ ಅವರ ಜೊತೆ ಮತ್ತೊಂದು ಪ್ರಯೋಗಾತ್ಮಕ ಸಿನಿಮಾ ಮಾಡಲು ತಯಾರಾಗಿದ್ದಾರೆ.['ಗೋಧಿ ಬಣ್ಣ' ಚಿತ್ರವನ್ನು ತಂದೆಗೆ ಅರ್ಪಿಸಿದ ರಕ್ಷಿತ್ ಶೆಟ್ಟಿ]
'ಉಳಿದವರು ಕಂಡಂತೆ' ಚಿತ್ರದಲ್ಲಿ ಕೆಲಸ ಮಾಡಿರುವ ಸಂಕಲನಕಾರ ಸಚಿನ್ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟು ಇನ್ನೂ ಹೆಸರಿಡದ ಈ ಚಿತ್ರದ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ. ಮನೋಹರ್ ಜೋಷಿ ಅವರು ಕ್ಯಾಮರಾ ಕೈ ಚಳಕ ತೊರಲಿದ್ದು, ಚರಣ್ ರಾಜ್ ಅವರು ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ.[ನಟ-ನಿರ್ದೇಶಕನ ನಂತರ ನಿರ್ಮಾಪಕರಾಗಿ ಶೆಟ್ರ ಹೊಸ ವರಸೆ]
ಈಗಾಗಲೇ ಚಿತ್ರದ ಸಿದ್ಧತೆಗಳು ಒಂದೊಂದಾಗಿ ನಡೆಯುತ್ತಿದ್ದು, ಅಧೀಕೃತ ಘೋಷಣೆ ಮಾಡುವುದಷ್ಟೇ ಬಾಕಿ ಇದೆ. ಇನ್ನು ನಟ ರಕ್ಷಿತ್ ಶೆಟ್ಟಿ ಅವರು ತಮ್ಮ 'ಕಿರಿಕ್ ಪಾರ್ಟಿ' ಚಿತ್ರ ಕಂಪ್ಲೀಟ್ ಆದ ಮೇಲೆ ನಿರ್ಮಾಪಕ ಪ್ರಕಾಶ್ ಅವರ ಜೊತೆ ಸೇರಿಕೊಳ್ಳಲಿದ್ದಾರೆ.
ಒಟ್ನಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ನೀಡಿದ 'ರಂಗಿತರಂಗ' [ಚಿತ್ರ ವಿಮರ್ಶೆ : 'ರಂಗಿತರಂಗ' ಬಲು ರೋಚಕ] ಚಿತ್ರದ ನಂತರ ಇದೀಗ 'ಆ' ಯಶಸ್ಸನ್ನು ಮತ್ತೆ ಮರುಕಳಿಸಲು ನಿರ್ಮಾಪಕ ಎಚ್.ಕೆ ಪ್ರಕಾಶ್ ಅವರು ಪಣ ತೊಟ್ಟಿದ್ದಾರೆ.