Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದೇವದಾಸ್' ನಂತರ ಮತ್ತೊಬ್ಬ ತೆಲುಗು ಸ್ಟಾರ್ ನಟನ ಚಿತ್ರದಲ್ಲಿ ರಶ್ಮಿಕಾ.!
Recommended Video
'ಅಂಜನಿಪುತ್ರ' ನಂತರ ರಶ್ಮಿಕಾ ಮಂದಣ್ಣ ಅಭಿನಯದ ಯಾವ ಕನ್ನಡ ಸಿನಿಮಾನೂ ಬಿಡುಗಡೆಯಾಗಿಲ್ಲ. ಆ ಕಡೆ 'ಗೀತಾ ಗೋವಿಂದಂ' ಚಿತ್ರ ಮುಗಿದ ಬೆನ್ನಲ್ಲೆ 'ದೇವದಾಸ್' ಎಂಬ ಸಿನಿಮಾ ರಿಲೀಸ್ ಆಗಿತ್ತು.
ಈಗ 'ದೇವದಾಸ್' ಸಿನಿಮಾ ಯಶಸ್ವಿಯಾಗಿ ಪ್ರದರ್ಶನವಾಗ್ತಿದೆ. ಈ ಮಧ್ಯೆ ರಶ್ಮಿಕಾ ಅಭಿನಯಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಆರಂಭವಾಗಿದೆ.
'ವೃತ್ರ' ಚಿತ್ರದಿಂದ ನಟಿ ರಶ್ಮಿಕಾ ಮಂದಣ್ಣ ಹೊರಬರಲು ಅಸಲಿ ಕಾರಣವೇನು.?
ಕನ್ನಡದಲ್ಲಿ ಸದ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 'ಯಜಮಾನ' ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಇದೇ ವರ್ಷ ತೆರೆಕಾಣಲಿದೆ. ಇದಾದ ಬಳಿಕ ಯಾವ ಕನ್ನಡ ಸಿನಿಮಾನೂ ಒಪ್ಪಿಕೊಂಡಿಲ್ಲ. ಮತ್ತೊಂದೆಡೆ ಒಂದು ತೆಲುಗು ಸಿನಿಮಾ ಮುಗಿಯುತ್ತಿದ್ದಂತೆ ಇನ್ನೊಂದು ಸಿನಿಮಾ ಮಾಡ್ತಿದ್ದಾರೆ. ಹೌದು, ಈಗ 'ದೇವದಾಸ್' ನಂತರ ಮತ್ತೊಂದು ಸ್ಟಾರ್ ಚಿತ್ರದಲ್ಲಿ ರಶ್ಮಿಕಾ ಬಣ್ಣ ಹಚ್ಚಲಿದ್ದಾರೆ. ಯಾವುದು ಆ ಚಿತ್ರ.? ಮುಂದೆ ಓದಿ.....
ದೇವರಕೊಂಡ ಚಿತ್ರಕ್ಕೆ ನಾಯಕಿ
ವಿಜಯ ದೇರಕೊಂಡ ಅಭಿನಯದ 'ಗೀತಾ ಗೋವಿಂದಂ' ಚಿತ್ರದಲ್ಲಿ ನಟಿಸಿದ್ದ ರಶ್ಮಿಕಾ ಮತ್ತೆ ದೇವರಕೊಂಡ ನಾಯಕನಾಗಿರುವ 'ಡಿಯರ್ ಕಾಮ್ರೆಡ್' ಚಿತ್ರದಲ್ಲಿ ನಾಯಕಿಯಾಗುತ್ತಿದ್ದಾರೆ. ಬಹುಶಃ ಈ ಚಿತ್ರಕ್ಕೂ ಮೊದಲೇ ಇನ್ನೊಂದು ತೆಲುಗು ಸಿನಿಮಾ ಮಾಡುತ್ತಿದ್ದಾರೆ ರಶ್ಮಿಕಾ.
ಗಾಸಿಪ್ ಸುದ್ದಿಯನ್ನ ಖಚಿತ ಪಡಿಸಿದ ನಟಿ ರಶ್ಮಿಕಾ ಮಂದಣ್ಣ.!
ನಿತೀನ್ ಚಿತ್ರಕ್ಕೆ ನಾಯಕಿ
ಹೌದು, ತೆಲುಗು ಸ್ಟಾರ್ ನಟ ನಿತೀನ್ ಅಭಿನಯಿಸಲಿರುವ ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಲಿದ್ದಾರೆ ಎನ್ನಲಾಗಿದೆ. 'ದೇವದಾಸ್' ಸಿನಿಮಾದ ನಂತರ ಈ ಚಿತ್ರದಲ್ಲಿ ರಶ್ಮಿಕಾ ನಟಿಸಲಿದ್ದಾರಂತೆ. ಈ ಚಿತ್ರಕ್ಕೆ ವೆಂಕಿ ಕುಡುಮುಲ ಆಕ್ಷನ್ ಕಟ್ ಹೇಳಲಿದ್ದಾರಂತೆ.
ರಶ್ಮಿಕಾರನ್ನ ತೆಲುಗು ಮಂದಿ ಮೆಚ್ಚಿಕೊಳ್ಳಲು ಕಾರಣ ಹೇಳಿದ ನಾಗಾರ್ಜುನ
'ಚಲೋ' ನಿರ್ದೇಶಕನಿಗೆ ಸಾಥ್
ರಶ್ಮಿಕಾ ಮಂದಣ್ಣ ತೆಲುಗು ಇಂಡಸ್ಟ್ರಿಗೆ ಕಾಲಿಟ್ಟಿದ್ದು 'ಚಲೋ' ಚಿತ್ರದ ಮೂಲಕ. ಈ ಚಿತ್ರವನ್ನ ನಿರ್ದೇಶನ ಮಾಡಿದ್ದ ವೆಂಕಿ ಕುಡುಮುಲ ಅವರು ಈಗ ನಿರ್ದೇಶನ ಮಾಡುತ್ತಿರುವ ಮುಂದಿನ ಸಿನಿಮಾಗೆ ರಶ್ಮಿಕಾ ಅವರೇ ನಾಯಕಿಯನ್ನಾಗಿಸಿಕೊಂಡಿದ್ದಾರಂತೆ. ಈ ಚಿತ್ರಕ್ಕೆ ನಿತೀನ್ ನಾಯಕ ಎನ್ನಲಾಗಿದೆ.
ರಶ್ಮಿಕಾ ಬಿಟ್ಟು ಹೋದ ಸಿನಿಮಾಗೆ ಸಿಕ್ಕಳು ಹೊಸ ನಾಯಕಿ
'ವೃತ್ರ' ಬಿಟ್ಟು ಹೋದ ರಶ್ಮಿಕಾ
ಈ ಮಧ್ಯೆ ರಶ್ಮಿಕಾ ಮಾಡಬೇಕಿದ್ದ 'ವೃತ್ರ' ಚಿತ್ರದಿಂದ ರಶ್ಮಿಕಾ ಹೊರಹೋಗಿದ್ದರು. ಈ ಪಾತ್ರಕ್ಕೆ ನ್ಯಾಯ ಒದಗಿಸಲು ಕಷ್ಟವಾಗಬಹುದು ಎಂಬ ಕಾರಣಕ್ಕೆ ಈ ಪ್ರಾಜೆಕ್ಟ್ ಕೈಬಿಟ್ಟಿದ್ದರು. ಅಲ್ಲಿಗೆ ಸದ್ಯಕ್ಕೆ ಯಾವುದೇ ಕನ್ನಡ ಸಿನಿಮಾ ಮಾಡುತ್ತಿರುವ ಬಗ್ಗೆ ವರದಿಯಾಗಿಲ್ಲ.