Don't Miss!
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸೈರಾ' ನಿರ್ದೇಶಕನ ಮುಂದಿನ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ!
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಚಿತ್ರವನ್ನು ನಿರ್ದೇಶಕ ಸುರೇಂದರ್ ರೆಡ್ಡಿ ಜೊತೆ ಮಾಡಲಿದ್ದಾರೆ ಎಂಬ ಸುದ್ದಿ ಸೌತ್ ಇಂಡಸ್ಟ್ರಿಯಲ್ಲಿ ಸದ್ದು ಮಾಡುತ್ತಿದೆ.
ಮೆಗಾಸ್ಟಾರ್ ಚಿರಂಜೀವಿ ನಟನೆಯ ಸೈರಾ ನರಸಿಂಹ ರೆಡ್ಡಿ ಎಂಬ ಸೂಪರ್ ಹಿಟ್ ಚಿತ್ರ ನಿರ್ದೇಶಿಸಿದ್ದ ಸುರೇಂದರ್ ರೆಡ್ಡಿ ಮುಂದಿನ ಚಿತ್ರವನ್ನು ಅಖಿಲ್ ಅಕ್ಕಿಕೇನಿಗೆ ಮಾಡುವುದಾಗಿ ಘೋಷಿಸಿದ್ದರು.
ಚೊಚ್ಚಲ ತಮಿಳು ಚಿತ್ರದ ಶೂಟಿಂಗ್ ಮುಗಿಸಿದ ರಶ್ಮಿಕಾ ಮಂದಣ್ಣ
ಇದೀಗ, ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿಯಾಗುವ ಸಾಧ್ಯತೆ ಇದೆ. ಬಹಳ ದಿನಗಳಿಂದಲೂ ಅಖಿಲ್ ಜೊತೆ ರಶ್ಮಿಕಾ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಗಳು ವರದಿಯಾಗುತ್ತಿತ್ತು. ಖಚಿತ ಮಾಹಿತಿ ಸಿಕ್ಕಿರಲಿಲ್ಲ. ಈಗಲೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೂ ಆಪ್ತವಲಯದಲ್ಲಿ ಇಂತಹದೊಂದು ಸುದ್ದಿ ಸದ್ದು ಮಾಡುತ್ತಿದೆ.
ಅಲ್ಲು ಅರ್ಜುನ್ ನಟಿಸುತ್ತಿರುವ ಪುಷ್ಪ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಜೊತೆ ಜೊತೆಯಲ್ಲಿ ಅಖಿಲ್ ಹಾಗೂ ಸುರೇಂದರ್ ರೆಡ್ಡಿ ಚಿತ್ರಕ್ಕೂ ಸೈ ಎಂದಿದ್ದಾರೆ ಎನ್ನಲಾಗಿದೆ.
ಸದ್ಯ ಅಖಿಲ್ ಅಕ್ಕಿನೇನಿ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಗಿಯುತ್ತಿದ್ದಂತೆ ಸುರೇಂದರ್ ರೆಡ್ಡಿ ಸಿನಿಮಾ ಆರಂಭಿಸಲಿದ್ದಾರೆ.