Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿ ಸ್ಟಾರ್ ರವಿಚಂದ್ರನ್ಗೆ ಶ್ರೀಲೀಲಾ ಜೊತೆ ರೊಮ್ಯಾನ್ಸ್ ಮಾಡಲು ಸಾಧ್ಯ ಇಲ್ಲವಂತೆ!
ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಇತ್ತೀಚೆಗೆ ಅಪಹರಣ ಆಗಿದ್ದಾರೆ ಎಂದು ಸುದ್ದಿ ಆಗಿದ್ದರು. ರಿಯಾಲಿಟಿ ಶೋ ಒಂದರ ಪ್ರೋಮೊದಲ್ಲಿ ಅವರನ್ನು ಕಿಡ್ನಾಪ್ ಮಾಡಿ ನಂತರ ಸಿಕ್ಕಿ ಬಿದ್ದಿದ್ದಾರೆ. ಇದು ಕೇವಲ ಪ್ರೋಮೊ ಅಷ್ಟೇ. ಈಗ ರವಿಚಂದ್ರನ್ ಅವರ ಒಂದು ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಕನ್ನಡದ 'ಬೈಟು ಲವ್' ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ರವಿಚಂದ್ರನ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ರವಿಚಂದ್ರನ್ ಅವರು ವೇದಿಕೆ ಮೇಲೆ ನಟಿ ಶ್ರೀಲೀಲಾ ಅವರ ಬಗ್ಗೆ ಮಾತನಾಡಿದ್ದಾರೆ. ನಿರೂಪಕಿ ಅನುಶ್ರೀ ಅವರು ಈ ಬೈಟು ಲವ್ ಚಿತ್ರದ ಇವೆಂಟ್ ನಡೆಸಿಕೊಟ್ಟರು. ವೇದಿಕೆ ಮೇಲೆ ಮಾತನಾಡಿದ ನಟ ರವಿಚಂದ್ರನ್ ಅವರು ಸಿನಿಮಾ ತಂಡಕ್ಕೆ ಶುಭ ಕೋರಿದರು. ಜೊತೆಗೆ ನಟ ಧನವೀರ್, ನಟಿ ಶ್ರೀಲೀಲಾ ಬಗ್ಗೆ ಮಾತನಾಡಿ "ನನ್ನ ಮಕ್ಕಳು ಯಾವುದೇ ಕಾರ್ಯಕ್ರಮಕ್ಕೂ ಹೆಚ್ಚಾಗಿ ಬರುವುದಿಲ್ಲ. ಆದರೆ ಇಂದು ನನಗಿಂತ ಮುಂಚೆ ರೆಡಿಯಾಗಿದ್ದ ನನ್ನ ಮಗ. ನಾನು ಕೇಳಿದೆ ಶ್ರೀಲೀಲಾ ಅವಳನ್ನು ನೋಡಲು ಬರುತ್ತಿದೆಯಾ ಎಂದು. ಆಗ ಮೂವರು ಫೋನ್ ಮಾಡಿದ್ದಾರೆ ಎಂದ. ಶ್ರೀಲೀಲಾ ತಾಯಿಯವರು ಫೋನ್ ಮಾಡಿದ್ದರು ಎಂದ. ಹಾಗಾಗಿ ಅವರ ಪಕ್ಕದಲ್ಲಿಯ ಕುಳಿತಿದ್ದಾನೆ ನೋಡಿ" ಎಂದು ನಗೆ ಚಟಾಕಿ ಹಾರಿಸಿದರು.
ಲವ್, ಮದುವೆ ಬಗ್ಗೆ ರಶ್ಮಿಕಾ ಮಂದಣ್ಣ ಹೊಸ ಹೇಳಿಕೆ!
ನಂತರ ನಿರೂಪಕಿ ಅನುಶ್ರೀ ನೀವು ಶ್ರೀಲೀಲಾ ಜೊತೆ ಈಗ ರೋಮ್ಯಾನ್ಸ್ ಮಾಡಬೇಕು ಎನ್ನುತ್ತಾರೆ. ಆಗ ರವಿಚಂದ್ರನ್ ಅವರು ಶ್ರೀಲೀಲಾ ಜೊತೆಗೆ ರೋಮ್ಯಾನ್ಸ್ ಮಾಡಲು ಸಾಧ್ಯವಿಲ್ಲ ನೀವೇ ಅರ್ಥ ಮಾಡಿಕೊಳ್ಳಿ ಎಂದು ನಗೆ ಬೀರಿದರು. ಯಾಕೆಂದರೆ ಅವರು ತಮ್ಮ ಮಗ ಶ್ರೀಲೀಲಾ ಅವರನ್ನು ನೋಡಲು ಬಂದಿದ್ದಾನೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದು ರವಿಮಾಮ ತಮಾಷೆಗಾಗಿ ಹೇಳಿದ ಮಾತು. ಅದರೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಅಗುತ್ತಿದೆ.
ಇದೇ ಶುಕ್ರವಾರ ಬೈಟು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಿರ್ದೇಶಕ ಹರಿ ಸಂತೋಷ್ ಅವರ ನಿರ್ದೇಶನದಲ್ಲಿ ಚಿತ್ರ ಮೂಡಿ ಬರುತ್ತಿದೆ. ಇದು ರೊಮ್ಯಾಂಟಿಕ್ ಎಂಟರ್ಟೈನರ್ ಚಿತ್ರವಾಗಿರಲಿದೆ. ಚಿತ್ರದಲ್ಲಿ ಧನ್ವೀರ್ ಗೌಡ ಮತ್ತು ಶ್ರೀಲೀಲಾ ಮುಖ್ಯ ಭೂಮಿಕೆಯಲ್ಲಿದ್ದಾರೆ. ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಮಹೇಂದ್ರ ಸಿಂಹ ಅವರ ಛಾಯಾಗ್ರಹಣ ಮತ್ತು ಕೆ ಎಂ ಪ್ರಕಾಶ್ ಸಂಕಲನ ಮಾಡಿದ್ದಾರೆ. ಚಿತ್ರವನ್ನು ನಿಶಾ ವೆಂಕಟ್ ನಿರ್ಮಿಸಿದ್ದಾರೆ.