Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪ್ಪಿ ಅಪ್ಪು ಚಿತ್ರಕ್ಕೆ ಆಕ್ಷನ್-ಕಟ್ ಹೇಳ್ತಾರಂತೆ ಹೌದಾ?
ಓ ಮೈ ಗಾಡ್ ರಿಯಲ್ ಸ್ಟಾರ್ ಉಪೇಂದ್ರ ದೊಡ್ಮನೆ ಹುಡುಗ ಅಪ್ಪು ಅಲಿಯಾಸ್ ಪುನೀತ್ ರಾಜ್ ಕುಮಾರ್ ಮುಂದಿನ ಚಿತ್ರಕ್ಕೆ ಆಕ್ಷನ್-ಕಟ್ ಹೇಳ್ತಾರಂತೆ!!.
ಹೀಗಂತ ನಾವು ಹೇಳ್ತಾ ಇಲ್ಲ ಬದ್ಲಾಗಿ ಉಪ್ಪಿ ಅಭಿಮಾನಿ ಬಳಗದವರು ಮಾಡಿರುವ ಪೋಸ್ಟರ್ ಒಂದು ಇಡೀ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಅಂದಹಾಗೆ ಪೋಸ್ಟರ್ ನಲ್ಲಿ ಅಂತಹ ವಿಚಾರ ಏನಿದೆ ಅಂತೀರಾ?, ಉಪೇಂದ್ರ ಅವರ ಅಭಿಮಾನಿಗಳು ಮಾಡಿರುವ ಪೋಸ್ಟರ್ ನಲ್ಲಿ ಉಪೇಂದ್ರ ಪ್ರೊಡಕ್ಷನ್ ಜೊತೆಗೆ ಪವರ್ ಸ್ಟಾರ್ ಪುನೀತ್ ಅಭಿನಯ ಹಾಗೂ ಕಥೆ-ಚಿತ್ರಕಥೆ-ಸಂಭಾಷಣೆ ಉಪೇಂದ್ರ ಅಂತ ಬರೆದಿರುವ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.['ಉಪ್ಪಿಟ್ಟು' ರುಚಿಗೆ ಪಾಕಿಸ್ತಾನಿ ಕ್ಲೀನ್ ಬೌಲ್ಡ್ ಗುರು.!]
ಇದು ಎಷ್ಟು ಸತ್ಯ ಎಷ್ಟು ಸುಳ್ಳು ಅಂತ ನಮಗಂತೂ ಗೊತ್ತಿಲ್ಲ. ಆದರೆ ರಿಯಲ್ ಸ್ಟಾರ್ ಉಪೇಂದ್ರ ಅವರು ರಾಜ್ ಕುಟುಂಬಕ್ಕೆ ಮತ್ತೊಮ್ಮೆ ಆಕ್ಷನ್-ಕಟ್ ಹೇಳ್ತಾರೆ ಅಂದ್ರೆ ಇದಕ್ಕಿಂತ ಸಿಹಿ ಸುದ್ದಿ ಇನ್ನೇನಿದೆ ಅಲ್ವಾ.
ಇದಕ್ಕಿಂತ ಮೊದಲು 'ಬುದ್ದಿವಂತ' ನಾಯಕ ಉಪೇಂದ್ರ ಅವರು ಬ್ಲಾಕ್ ಬಸ್ಟರ್ ಹಿಟ್ 'ಓಂ' ಚಿತ್ರಕ್ಕೆ ಆಕ್ಷನ್-ಕಟ್ ಹೇಳಿದ್ದು, ಚಿತ್ರದಲ್ಲಿ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ದೊಡ್ಮನೆ ಹುಡುಗ ಶಿವಣ್ಣನಿಗೆ ಚಿತ್ರರಂಗದಲ್ಲಿ ಒಳ್ಳೆ ಇಮೇಜ್ ತಂದುಕೊಟ್ಟಿತ್ತು.[ಚಿರಂಜೀವಿಗೆ ಆಕ್ಷನ್ ಕಟ್ ಹೇಳ್ತಾರಾ ಉಪೇಂದ್ರ?]
ಇದೀಗ ಅಭಿಮಾನಿಗಳೇ ಸೇರಿಕೊಂಡು ಮಾಡಿರುವ ಪೋಸ್ಟರ್ ನ ಪ್ರಕಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನಾಧರಿಸಿದ ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಾರೆ ಎಂದು ಇಡೀ ಗಾಂಧಿನಗರದಲ್ಲಿ ಸುದ್ದಿಯಾಗಿದೆ.
ಈಗಾಗಲೇ ಪುನೀತ್ ರಾಜ್ ಕುಮಾರ್ ಅವರು 'ದೊಡ್ಮನೆ ಹುಡುಗ', 'ಚಕ್ರವ್ಯೂಹ', 'ರಾಜಕುಮಾರ' ಮುಂತಾದ ಪ್ರಾಜೆಕ್ಟ್ ಗಳನ್ನು ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.
ಅಂತೂ ಈ ಎಲ್ಲಾ ಪ್ರಾಜೆಕ್ಟ್ ಗಳನ್ನು ಮುಗಿಸಿಕೊಂಡು ರಿಯಲ್ ಸ್ಟಾರ್ ಉಪೇಂದ್ರ ಅವರ ಜೊತೆ ಕೈ ಜೋಡಿಸಬಹುದು ಅಂತ ನಮ್ಮ ಅನಿಸಿಕೆ.[ಉಪೇಂದ್ರ ಅವರ ಮುಂದಿನ ಚಿತ್ರ ಯಾವುದು ಗೊತ್ತಾ?]
ಅದೇನೇ ಇರಲಿ ಈ ಸುದ್ದಿ ನಿಜವಾದರೆ ಗಾಂಧಿನಗರದ ಮಂದಿಗೆ ಮತ್ತೊಮ್ಮೆ ಧಮಾಕೇದರ್ ದಿನಗಳು ಬರೋದು ಗ್ಯಾರಂಟಿ. ಒಟ್ನಲ್ಲಿ ಗಾಸಿಪ್ ಆಫೀಶಿಯಲ್ ಆಗಿ ಕನ್ ಫರ್ಮ್ ಆಗೋವರೆಗೂ ಅಭಿಮಾನಿಗಳು ಕಾಯಲೇಬೇಕು.