Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡದ ಕೋಟ್ಯಾಧಿಪತಿ'ಗೆ ಇವರೆಲ್ಲಾ ಎಷ್ಟು ಸಂಭಾವನೆ ಕೇಳಿದ್ರು ಗೊತ್ತಾ?
ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿದ್ದ 'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮ ಹಿಟ್ ಆಗಿರೋ ವಿಷಯ ನಿಮಗೆ ತಿಳಿದೇ ಇದೆ ಅಲ್ವಾ.
ಇದೀಗ ಅದೇ ಕಾರ್ಯಕ್ರಮ ಮತ್ತೊಂದು ಸೀಸನ್ ಗೆ ತಯಾರಾಗಿದ್ದು, ಖಾಸಗಿ ಚಾನಲ್ ಸುವರ್ಣಾ ವಾಹಿನಿಯಲ್ಲಿ ಮೂಡಿಬರಲಿದೆ. ಇದೀಗ ಕೋಟ್ಯಾಧಿಪತಿಯ ಸಾರಥ್ಯ ಯಾರು ವಹಿಸಿಕೊಳ್ಳುತ್ತಾರೆ ಎಂಬುದರ ಬಗ್ಗೆ ಗಾಂಧಿನಗರದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.
ಕಳೆದ ಕೋಟ್ಯಾಧಿಪತಿ ಸೀಸನ್ ಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಉತ್ತಮ ನಿರೂಪಕರಾಗಿ ಹೊರಹೊಮ್ಮಿ ಎಲ್ಲರಿಂದ ಸೈ ಎನಿಸಿಕೊಳ್ಳುವುದರ ಜೊತೆಗೆ ಜನರಿಂದ ಪ್ರಶಂಸೆ ಗಿಟ್ಟಿಸಿಕೊಂಡು, ಎಲ್ಲರ ಪ್ರೀತಿಪಾತ್ರರಾಗಿದ್ದರು. ಜೊತೆಗೆ ಕಾರ್ಯಕ್ರಮ ನಿರೂಪಿಸಿದ್ದಕ್ಕಾಗಿ 4 ಕೋಟಿ ರೂಪಾಯಿ ಸಂಭಾವನೆ ಕೂಡ ಪಡೆದಿದ್ದರಂತೆ.['ಕನ್ನಡದ ಕೋಟ್ಯಾಧಿಪತಿ', ಬೆನ್ನು ಹತ್ತಲಿದ್ದಾರ, ಲಕ್ಕಿ ಸ್ಟಾರ್ ರಮ್ಯಾ?]
ಆದರೆ ಈ ಬಾರಿ ಪವರ್ ಸ್ಟಾರ್ ಪುನೀತ್ ಬದಲಾಗಿ ಬೇರೆ ಯಾರನ್ನಾದರೂ ಆಯ್ಕೆ ಮಾಡೋಣ ಎಂದು ಸುವರ್ಣ ವಾಹಿನಿ ನಿರ್ಧಾರ ಮಾಡಿದೆಯಂತೆ. ಹಾಗೆಯೇ ಯಾರು ನಿರೂಪಕರಾಗಬಹುದು ಎಂದು ಸಿಕ್ಕಾ ಪಟ್ಟೆ ತಲೆ ಕೆಡಿಸಿಕೊಂಡು ಹುಡುಕಾಟ ನಡೆಸಿದ್ದಾರಂತೆ.
ಅಂದಹಾಗೆ ಇದಕ್ಕೆಲ್ಲಾ ಮೂಲ ಕಾರಣ ನಟ ಪುನೀತ್ ಅವರು ತಮ್ಮ ಸಂಭಾವನೆಯನ್ನು ಹೆಚ್ಚಿಸಿದ್ದಾರೆ ಎಂದು ಅಲ್ಲಲ್ಲಿ ಗಾಳಿ ಸುದ್ದಿ ಹಬ್ಬಿದೆ. ಮೂಲಗಳ ಪ್ರಕಾರ ಪವರ್ ಸ್ಟಾರ್ ಪುನೀತ್ ಅವರು ಸುಮಾರು 5 ಕೊಟಿ ಡಿಮ್ಯಾಂಡ್ ಮಾಡಿದ್ದಾರಂತೆ. ಹೀಗಾಗಿ ಸುವರ್ಣ ಮುಖ್ಯಸ್ಥರು ಮೋಹಕ ತಾರೆ ರಮ್ಯಾ ಅವರ ಮನೆ ಬಾಗಿಲು ತಟ್ಟಿದ್ದಾರಂತೆ. ಆದರೆ ಪೂರ್ತಿ ಕನ್ನಡ ಸರಿಯಾಗಿ ಬಾರದ ಈಕೆ ಇನ್ನೂ ಹಸಿರು ನಿಶಾನೆ ತೋರಿಲ್ಲ ಎನ್ನಲಾಗಿದೆ.
ಈ ನಡುವೆ ರಾಕಿಂಗ್ ಸ್ಟಾರ್ ಯಶ್ ಅವರನ್ನು ಕೋಟ್ಯಾಧಿಪತಿ ಹಾಟ್ ಸೀಟ್ ಮೈಟೆಂನ್ ಮಾಡಲು ಸುವರ್ಣ ವಾಹಿನಿ ಆಲೋಚನೆ ಮಾಡಿದ್ದು, ಯಶ್ ಜೊತೆ ಒಂದು ರೌಂಡ್ ಮಾತುಕತೆ ಕೂಡ ಮುಗಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.
ಆದರೆ ಯಶ್ ಇಟ್ಟ ಬೇಡಿಕೆ ಎಷ್ಟು ಅಂತೀರಾ?, ಬರೋಬ್ಬರಿ 10 ಕೊಟಿ ರೂಪಾಯಿ ಬೇಡಿಕೆ ಇಟ್ಟ ಕಾರಣ ಚಾನಲ್ ಅವರನ್ನು ಸೈಡಿಗೆ ಇಟ್ಟಿದ್ದಾರೆ. ಆದರೂ ಮನ ಒಲಿಸುವ ಕಾರ್ಯ ಮುಂದುವರಿದಿದ್ದು, ಏನಾಗುತ್ತೆ ಅಂತ ಮುಂದೆ ನೋಡಬೇಕಿದೆ.
ಒಟ್ನಲ್ಲಿ ಯಶ್ ಹಾಗೂ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಒಪ್ಪದಿದ್ದಲ್ಲಿ , ಕೊನೆಗೆ ಹಳೇ ಗಂಡನ ಪಾದವೇ ಗತಿ ಅಂತ ಪವರ್ ಸ್ಟಾರ್ ಪುನೀತ್ ಅವರೇ ಕಾರ್ಯಕ್ರಮ ನಡೆಸಿಕೊಡುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ. ಅಂತೂ ಇಂತೂ ಈ ಬಾರಿ ಕೋಟ್ಯಾಧಿಪತಿ ಯಾರ ಮಡಿಲಿಗೆ ಬೀಳುತ್ತೆ ಅಂತ ಕಾದು ನೋಡಬೇಕು.