Don't Miss!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರಿ ಗಾಳಿಸುದ್ದಿ ಹೊಡೆತಕ್ಕೆ ಸಿಲುಕಿದ ಜನಶ್ರೀ ಚಾನಲ್
ವಿಭಿನ್ನ ಕಾರ್ಯಕ್ರಮಗಳ ಮೂಲಕ ತನ್ನದೇ ಆದ ಶೈಲಿಯಿಂದ ಜನಾನುರಾಗಿಯಾಗಿದೆ ಜನಶ್ರೀ ವಾಹಿನಿ. ಈಗ ಹಬ್ಬಿರುವ ಗಾಳಿಸುದ್ದಿ ಏನೆಂದರೆ, ಆರ್ಥಿಕ ಸಮಸ್ಯೆಗೆ ಸಿಲುಕಿರುವ ಜನಶ್ರೀ ವಾಹಿನಿ ತಿಂಗಳ ವೆಚ್ಚವನ್ನು ಸಂಪಾದಿಸುವುದೂ ಕಷ್ಟವಾಗಿದೆ ಎಂಬುದು.
ಈ ಹಿಂದೆಯೇ ವಾಹಿನಿಯನ್ನು ಮಾರಾಟ ಮಾಡಲು ರೆಡ್ಡಿ ಸಹೋದದರು ಪ್ರಯತ್ನಿಸಿದರೂ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ ಎಂಬ ಸುದ್ದಿಯೂ ಇದರ ಬೆನ್ನಿಗಿದೆ. ವಾಹಿನಿಯಿಂದ ಒಂದಷ್ಟು ರಾಜಕೀಯ ಮೈಲೇಜ್ ತೆಗೆದುಕೊಳ್ಳಬಹುದು ಎಂಬ ರೆಡ್ಡಿಗಳ ಲೆಕ್ಕಾಚಾರವೂ ಕಡೆಗೆ ತಲೆಕೆಳಗಾಯಿತು.
ಈಗ ವಾಹಿನಿಯು ಬೀಗ ಜಡಿಯುವತ್ತ ಮುಖ ಮಾಡಿದೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ. ಇದರ ಸತ್ಯಾಸತ್ಯತೆಗಳು ಇನ್ನಷ್ಟೇ ಬಯಲಾಗಬೇಕು. ಇನ್ನೊಂದು ಕಡೆ ರೆಡ್ಡಿ ಸೋದರರ ಮಾಲೀಕತ್ವದ ವಾಹಿನಿಯಾದರೂ ಅವರ ನಿಲುವು ಒಲವುಗಳನ್ನು ಬದಿಗಿಟ್ಟು ವಾಹಿನಿಯನ್ನು ಜಾಣ್ಮೆಯಿಂದ ಮುನ್ನಡೆಸುತ್ತಿದ್ದಾರೆ ಅನುಭವಿ ಪತ್ರಕರ್ತ ಅನಂತ ಚಿನಿವಾರ್ ಅವರು ಸುವರ್ಣ ವಾಹಿನಿ ಕಡೆ ಮುಖ ಮಾಡಿದ್ದಾರೆ ಎಂಬ ಸುದ್ದಿಯೂ ಇದೆ.
ನಮ್ಮ ಕಣ್ಣಮುಂದೆ ಕಣ್ಣುಮುಚ್ಚಿದ ಹಲವಾರು ವಾಹಿನಿಗಳ ನಿದರ್ಶನವೂ ಇದೆ. ಉದಯ ಟಿವಿಗೆ ಪೈಪೋಟಿ ನೀಡಲು ಆರಂಭವಾದ ಸುಪ್ರಭಾತ ಹಾಗೂ ಏಶಿಯಾನೆಟ್ ಕಾವೇರಿ ವಾಹಿನಿಗಳು ಬೀಗ ಜಡಿದದ್ದು ಗೊತ್ತೇ ಇದೆ. ಈಗ ಇದೇ ಹಾದಿಯಲ್ಲಿ ಜನಶ್ರೀ ವಾಹಿನಿಯೂ ಸಾಗಿದೆಯೇ? ಗೊತ್ತಿಲ್ಲ. ಸದ್ಯಕ್ಕೆ ಈ ಗಾಸಿಪ್ ಸುದ್ದಿ ಸುಳ್ಳಾಗಲಿ ಎಂದು ಆಶಿಸೋಣ.