Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ಚಿತ್ರರಂಗದ ಕಡೆ ಮುಖ ಮಾಡ್ತಾರಾ ಕನ್ನಡಿಗ ಸಂತೋಷ್ ಆನಂದ್ ರಾಮ್.?
ಸಂತೋಷ್ ಆನಂದ್ ರಾಮ್... ಉಡುಪಿ ಮೂಲದವರಾದರೂ, ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಇವರು ಇಂದು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಿರ್ದೇಶಕ. ಆಕ್ಷನ್ ಕಟ್ ಹೇಳಿರುವ ಚಿತ್ರಗಳ ಸಂಖ್ಯೆ ಕೇವಲ 2. ಎರಡೂ ಸೂಪರ್ ಡ್ಯೂಪರ್ ಹಿಟ್ ಆಗಿರುವ ಕಾರಣ ಇವತ್ತು ಇವರು 'ಸ್ಟಾರ್ ಡೈರೆಕ್ಟರ್'. ಬಹುತೇಕ ತಾರೆಯರಿಗೆ ಇವರೊಂದಿಗೆ ಕೆಲಸ ಮಾಡುವ ಆಸೆ. ಆದ್ರೆ, ಇವರ ಚಿತ್ತ ಸದ್ಯ ತೆಲುಗು ಚಿತ್ರರಂಗದ ಕಡೆಗೆ.
ಹೌದು, ಕನ್ನಡಿಗ.. ನಿರ್ದೇಶಕ ಸಂತೋಷ್ ಆನಂದ್ ರಾಮ್ ಟಾಲಿವುಡ್ ಗೆ ಪದಾರ್ಪಣೆ ಮಾಡಲಿದ್ದಾರಂತೆ. ಹಾಗೆನ್ನುತ್ತಿವೆ ಬಲ್ಲ ಮೂಲಗಳು.
ತೆಲುಗಿನಲ್ಲಿ 'ರಾಜಕುಮಾರ' ರಾಜ್ಯಭಾರ
ಕನ್ನಡದಲ್ಲಿ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳಿರುವ 'ರಾಜಕುಮಾರ' ಚಿತ್ರದ ರೀಮೇಕ್ ರೈಟ್ಸ್ ಗೆ ತೆಲುಗಿನಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಆದ್ರೆ, ರೀಮೇಕ್ ಹಕ್ಕುಗಳನ್ನು ಸೇಲ್ ಮಾಡುವ ಬದಲು ತೆಲುಗಿನಲ್ಲಿ ತಮ್ಮದೇ ಬ್ಯಾನರ್ ನಲ್ಲಿ 'ರಾಜಕುಮಾರ' ಚಿತ್ರವನ್ನು ರೀಮೇಕ್ ಮಾಡಲು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಧರಿಸಿದ್ಯಂತೆ.
ಮಲ್ಟಿಪ್ಲೆಕ್ಸ್ ಗಳಲ್ಲಿ 'ರಾಜಕುಮಾರ' ಆಲ್ ಟೈಮ್ ನಂಬರ್ ಒನ್.!
ತೆಲುಗಿನ ವರ್ಷನ್ ಗೂ ಸಂತೋಷ್ ಆನಂದ್ ರಾಮ್ ಡೈರೆಕ್ಟರ್
ಹೊಂಬಾಳೆ ಫಿಲ್ಮ್ಸ್ ಅಡಿ ನಿರ್ಮಾಣ ಆಗುವ ತೆಲುಗಿನ 'ರಾಜಕುಮಾರ' ಚಿತ್ರಕ್ಕೂ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳುವ ಸಾಧ್ಯತೆ ಹೆಚ್ಚಾಗಿದೆ.
ಕನ್ಫರ್ಮ್ ಇಲ್ಲ.!
ಹೊಂಬಾಳೆ ಫಿಲ್ಮ್ಸ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟಾಲಿವುಡ್ ಗೆ ಹಾರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ ಹೊರತು ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
'ರಾಜಮೌಳಿ'ನ ಭೇಟಿ ಮಾಡಿದ 'ರಾಜಕುಮಾರ' ಡೈರೆಕ್ಟರ್ ಸಂತೋಷ್
ತೆಲುಗಿನಲ್ಲಿ 'ರಾಜಕುಮಾರ' ಯಾರು.?
ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್ ನಿರ್ವಹಿಸಿದ ಪಾತ್ರವನ್ನು ತೆಲುಗಿನಲ್ಲಿ ಯಾರು ನಿರ್ವಹಿಸಲಿದ್ದಾರೆ ಎಂಬುದು ಕೂಡ ಸದ್ಯಕ್ಕೆ ಸಸ್ಪೆನ್ಸ್ ಆಗಿ ಉಳಿದಿದೆ.
'ರಾಜಕುಮಾರ' ನಿರ್ದೇಶಕ ಹೈದರಬಾದ್ ಗೆ ಹೋಗಿದ್ದರ ಗುಟ್ಟು ರಟ್ಟು.!
ರಾಜಮೌಳಿ ಜೊತೆ ಭೇಟಿ
ಹೈದರಾಬಾದ್ ನಲ್ಲಿ 'ಬಾಹುಬಲಿ' ಡೈರೆಕ್ಟರ್ ಎಸ್.ಎಸ್.ರಾಜಮೌಳಿ ರವರನ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ಹೊಂಬಾಳೆ ಫಿಲ್ಮ್ಸ್ ನ ಕಾರ್ತಿಕ್ ಗೌಡ ಭೇಟಿ ಆಗಿದ್ದನ್ನ ಇಲ್ಲಿ ಸ್ಮರಿಸಬಹುದು. ತಮ್ಮ ಮುಂದಿನ ಚಿತ್ರದ ಬಗ್ಗೆ ಸಂತೋಷ್ ಆನಂದ್ ರಾಮ್ ರವರಿಗೆ ರಾಜಮೌಳಿ ಕೆಲ ಟಿಪ್ಸ್ ಗಳನ್ನು ನೀಡಿದ್ದಾರಂತೆ. ಹಾಗಾದ್ರೆ, ತೆಲುಗು ಚಿತ್ರರಂಗದ ಕಡೆಗೆ ಸಂತೋಷ್ ಆನಂದ್ ರಾಮ್ ಮುಖ ಮಾಡ್ತಾರಾ.? ಕಾದು ನೋಡೋಣ...