Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಮಶಾನದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡ ನಟಿ ರಾಧಿಕಾ ಕುಮಾರಸ್ವಾಮಿ ಕಡೆಯಿಂದ ಕುರಿಬಲಿ.?
Recommended Video
'ಭೈರಾದೇವಿ' ಎಂಬ ಚಿತ್ರದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ನಟಿಸುತ್ತಿರುವುದು ನಿಮಗೆಲ್ಲಾ ಗೊತ್ತೇ ಇದೆ. ಇದೇ ಚಿತ್ರಕ್ಕಾಗಿ ಕಾಳಿ ಮಾತೆಯ ಅವತಾರ ತಾಳಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಮೊನ್ನೆಮೊನ್ನೆಯಷ್ಟೇ ಶಾಂತಿನಗರದ ಸ್ಮಶಾನದಲ್ಲಿ ಗೋರಿ ಮೇಲಿಂದ ಬಿದ್ದಿದ್ದರು. ಪರಿಣಾಮ ರಾಧಿಕಾ ಕುಮಾರಸ್ವಾಮಿ ರವರ ಸ್ಪೈನಲ್ ಕಾರ್ಡ್ ಗೆ ಏಟಾಗಿತ್ತು.
ಅಮಾವಾಸ್ಯೆಯಂದು ಸ್ಮಶಾನದಲ್ಲಿ ಬಿದ್ದು ರಾಧಿಕಾ ಕುಮಾರಸ್ವಾಮಿ ಪೆಟ್ಟು ಮಾಡಿಕೊಂಡ ಮೇಲೆ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದ್ಯಂತೆ. ಹೀಗಾಗಿ, ಕುರಿಯನ್ನು ಬಲಿ ಕೊಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಮಾವಾಸ್ಯೆಯಂದು ಸ್ಮಶಾನದಲ್ಲಿ ಬಿದ್ದು ಬೆನ್ನಿಗೆ ಪೆಟ್ಟು ಮಾಡಿಕೊಂಡ ರಾಧಿಕಾ ಕುಮಾರಸ್ವಾಮಿ.!
ಇತ್ತ ಪೆಟ್ಟು ಮಾಡಿಕೊಂಡಿರುವ ರಾಧಿಕಾ ಕುಮಾರಸ್ವಾಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಒಂದು ತಿಂಗಳ ಕಾಲ ವೈದ್ಯರು ಬೆಡ್ ರೆಸ್ಟ್ ಸೂಚಿಸಿರುವ ಕಾರಣ, ಚಿತ್ರೀಕರಣದಲ್ಲಿ ರಾಧಿಕಾ ಕುಮಾರಸ್ವಾಮಿ ಭಾಗಿ ಆಗುತ್ತಿಲ್ಲ.
'ಭೈರಾ ದೇವಿ' ಚಿತ್ರಕ್ಕಾಗಿ ಖಾಕಿ ತೊಟ್ಟ ನಟ ರಮೇಶ್ ಅರವಿಂದ್
ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ 'ಭೈರಾದೇವಿ' ಚಿತ್ರ ತಯಾರಾಗುತ್ತಿದೆ. ಈ ಹಿಂದೆ ದುನಿಯಾ ವಿಜಯ್ ನಟಿಸಿದ್ದ 'ಆರ್.ಎಕ್ಸ್.ಸೂರಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಶ್ರೀಜೈ 'ಭೈರಾದೇವಿ' ಸಿನಿಮಾದ ನಿರ್ದೇಶಕ. ಇದೇ ಸಿನಿಮಾದಲ್ಲಿ ನಟ ರಮೇಶ್ ಅರವಿಂದ್ ಕೂಡ ಅಭಿನಯಿಸುತ್ತಿದ್ದಾರೆ.