twitter
    For Quick Alerts
    ALLOW NOTIFICATIONS  
    For Daily Alerts

    ಹ್ಯಾಟ್ರಿಕ್ ಹೀರೋ ಶಿವಣ್ಣ ವಿರುದ್ಧ ದೂರು ದಾಖಲು

    By Rajendra
    |

    ಸೆಂಚುರಿ ಸ್ಟಾರ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಿರ್ಮಾಪಕರ ಡಾರ್ಲಿಂಗ್ ಎಂಬುದು ಸಮಸ್ತ ಕನ್ನಡ ಚಿತ್ರೋದ್ಯಮಕ್ಕೆ ಗೊತ್ತಿರುವ ಸಂಗತಿ. ಆದರೆ ಶಿವಣ್ಣನ ವಿರುದ್ಧ ಇದೇ ಮೊದಲ ಬಾರಿಗೆ ನಿರ್ಮಾಪಕರೊಬ್ಬರು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿದ್ದಾರೆ.

    ದೂರು ದಾಖಲಿಸಿರುವವರು ಕನ್ನಡದ ಚಿತ್ರರಂಗದ ಹೆಸರಾಂತ ನಿರ್ಮಾಪಕರಲ್ಲಿ ಒಬ್ಬರಾದ ಸೂರಪ್ಪ ಬಾಬು (ಎನ್ ಬಿ ಬಾಬು). ಈ ಹಿಂದೆ ಇವರು ಶಿವರಾಜ್ ಕುಮಾರ್ ಜೊತೆ 'ಬಂಧು ಬಳಗ' ಎಂಬ ಚಿತ್ರ ನಿರ್ಮಿಸಿದ್ದರು. ಈಗ ದೂರು ದಾಖಲಿಸಲು ಪ್ರಮುಖ ಕಾರಣ ಎಂದರೆ ರು.20 ಲಕ್ಷ ಮುಂಗಡ ಹಣ ವಾಪಸು ಕೊಡಿಸಿ ಎಂದು.

    'ವರದ' ಎಂಬ ಚಿತ್ರಕ್ಕಾಗಿ ಶಿವಣ್ಣನಿಗೆ ರು.20 ಲಕ್ಷ ಅಡ್ವಾನ್ಸ್ ಕೊಟ್ಟಿದ್ದರಂತೆ ಸೂರಪ್ಪ ಬಾಬು. ಆದರೆ ಆ ಚಿತ್ರದ ಶೂಟಿಂಗ್ ಇನ್ನೂ ಪ್ರಾರಂಭವಾಗಿಲ್ಲ. ಈ ಹಣವನ್ನು ತಮಗೆ ವಾಪಸು ಕೊಡಿಸಬೇಕು ಎಂದು ಲಿಖಿತ ರೂಪದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೂರಪ್ಪ ಬಾಬು ದೂರು ನೀಡಿದ್ದಾರೆ.

    ಅಭಿನಯ ಚಕ್ರವರ್ತಿ ಬಿರುದಾಂಕಿತ ಸುದೀಪ್ ಅವರು ಈಗಾಗಲೆ 'ವರದನಾಯಕ' ಎಂಬ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ತಮ್ಮ ಚಿತ್ರಕ್ಕೆ ವರದ ಎಂಬ ಶೀರ್ಷಿಕೆ ಸರಿಹೋಗಲ್ಲ. ಹಾಗಾಗಿ ತಾನು ಸಿನಿಮಾ ಕೈಬಿಟ್ಟಿದ್ದೇನೆ. ಶಿವಣ್ಣನಿಗೆ ಕೊಟ್ಟಿರುವ ರು.20 ಲಕ್ಷ ಅಡ್ವಾನ್ಸ್ ಹಣವನ್ನು ವಾಪಸ್ ಕೊಡಿಸಿ ಎಂಬುದು ಬಾಬು ಅವರ ಅಹವಾಲು.

    ಸದ್ಯಕ್ಕೆ ಶಿವರಾಜ್ ಕುಮಾರ್ ಅವರು ಕುಟುಂಬ ಸಮೇತ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಅವರು ಹಿಂತಿರುಗಿದ ಬಳಿಕವಷ್ಟೇ ಈ ಬಗ್ಗೆ ಅವರು ಪ್ರತಿಕ್ರಿಯಿಸಬಹುದು. ಈ ಸಮಸ್ಯೆಯನ್ನು ಕೇಂದ್ರ ಸಂಧಾನ ಸಮಿತಿ ಮುಂದಿಟ್ಟು ಪರಿಹರಿಸಿಕೊಳ್ಳುವಂತೆ ಫಿಲಂ ಚೇಂಬರ್ ಸೂಚಿಸಲಿದೆ.

    ಕಳೆದ 25 ವರ್ಷಗಳಿಂದ ಶಿವಣ್ಣ ಯಾವುದೇ ವಾದ ವಿವಾದಗಳಿಗೆ ಗುರಿಯಾಗದೆ ತಮ್ಮ ಪಾಡಿಗೆ ತಾವಿದ್ದರು. ನಿರ್ಮಾಪಕರ ಪಾಲಿಗೆ ಹಾಟ್ ಕೇಕ್ ಆಗಿದ್ದರು. ಸೂರಪ್ಪ ಬಾಬು ಈಗ ಏಕಾಏಕಿ ದೂರು ನೀಡುವುದು ಶಿವಣ್ಣ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಇದೇ ಮೊದಲ ಬಾರಿಗೆ ರಾಜ್ ಕುಮಾರ್ ಕುಟುಂಬದ ಮೇಲೆ ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿರುವುದು ಚರ್ಚಾಸ್ಪದ ವಿಷಯವಾಗಿದೆ. ಸದ್ಯಕ್ಕೆ ಸೂರಪ್ಪ ಬಾಬು ಕೊಟ್ಟ ದೂರು ಮಂಡಳಿಯ ಟೇಬಲ್ ಮೇಲಿದೆ. ಶಿವಣ್ಣ ಪ್ರವಾಸದಲ್ಲಿ ಇರುವುದರಿಂದ ಅವರು ಬಂದ ನಂತರ ವಿಚಾರಣೆ ನಡೆಸಿ ಈ ಪ್ರಕರಣಕ್ಕೊಂದು ಅಂತ್ಯ ಹಾಡುವ ನಿರೀಕ್ಷೆಯಿದೆ. (ಏಜೆನ್ಸೀಸ್)

    English summary
    Kannada films producer Soorappa Babu approaches Karnataka Film Chamber of Commerce (KFCC) to get the Hat-trick Hero to return the advance paid to him for the now-shelved Varada. The producer written to the KFCC has sought help to get Shivrajkumar to return the advance of Rs 20 lakh, which was paid to him towards their project Varada.
    Saturday, July 7, 2012, 10:36
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X