Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಕಿಚ್ಚ ಸುದೀಪ್ ಗೆ ಆಫರ್ ನೀಡಿದ ರಾಜಮೌಳಿ
ಆಗ ಬಂದಿದ್ದ 'ಈಗ' ಸಿನಿಮಾ ಸುದೀಪ್ ಕೆರಿಯರ್ ನಲ್ಲಿ ದೊಡ್ಡ ಹೆಸರು ತಂದು ಕೊಟ್ಟಿತ್ತು. ನಿರ್ದೇಶಕ ರಾಜಮೌಳಿ ನಟ ಸುದೀಪ್ ಪ್ರತಿಭೆಯನ್ನ ಅದ್ಭುತವಾಗಿ ಬಳಸಿಕೊಂಡಿದ್ದರು.
'ಈಗ' ಸಿನಿಮಾದ ನಂತರ 'ಬಾಹುಬಲಿ 'ದಿ ಬಿಗಿನಿಂಗ್' ಸಿನಿಮಾದಲ್ಲಿಯೂ ಸುದೀಪ್ ಒಂದು ಪಾತ್ರ ಮಾಡಿದ್ದರು. ಆ ಸಿನಿಮಾದ ನಂತರ ಇದೀಗ ಮತ್ತೊಂದು ಸಿನಿಮಾಗಾಗಿ ಸುದೀಪ್ ಗೆ ರಾಜಮೌಳಿ ಆಫರ್ ನೀಡಿದ್ದಾರಂತೆ.
ರಾಜಮೌಳಿ ಮತ್ತು ನಿಖಿಲ್ ಬಗ್ಗೆ ಹೊರಬಿತ್ತು ರೋಚಕ ಸುದ್ದಿ.!
'ಆರ್ ಆರ್ ಆರ್' ರಾಜಮೌಳಿ ಸದ್ಯ ನಿರ್ದೇಶನ ಮಾಡುತ್ತಿರುವ ಸಿನಿಮಾ. ಈ ಸಿನಿಮಾದ ಒಂದು ಪಾತ್ರದಲ್ಲಿ ಸುದೀಪ್ ನಟಿಸುತ್ತಾರೆ ಎನ್ನುವ ಮಾತಿದೆ. ತೆಲುಗಿನ ಕೆಲವು ವೆಬ್ ಸೈಟ್ ಗಳು ಈ ಬಗ್ಗೆ ವರದಿ ಮಾಡಿದೆ.
ಸಿನಿಮಾದಲ್ಲಿ ಪೋಲೀಸ್ ಅಧಿಕಾರಿ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ 'ವೀರ ಮದಕರಿ' ಹಾಗೂ 'ಕೆಂಪೇಗೌಡ' ಸಿನಿಮಾಗಳಲ್ಲಿ ಸುದೀಪ್ ಪೊಲೀಸ್ ಆಫೀಸರ್ ಪಾತ್ರ ಮಾಡಿದ್ದರು. ಈ ಚಿತ್ರದಲ್ಲಿ ಸುದೀಪ್ ನಟಿಸುತ್ತಿರುವ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡುವವರೆಗೆ ಕಾಯಬೇಕಾಗಿದೆ.
ಸುದೀಪ್ ಹುಟ್ಟುಹಬ್ಬಕ್ಕೆ ರಾಜಮೌಳಿ 'ತೂಕದ ಮಾತು'
ರಾಮ್ ಚರಣ್ ತೇಜ ಹಾಗೂ ಜೂನಿಯರ್ ಎಸ್ ಟಿ ಆರ್ 'ಆರ್ ಆರ್ ಆರ್' ಸಿನಿಮಾದಲ್ಲಿ ನಾಯಕನಾಗಿದ್ದಾರೆ. ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಪಾತ್ರವನ್ನು ಅವರು ನಿರ್ವಹಿಸುತ್ತಿದ್ದಾರೆ.