Don't Miss!
- Technology HMD ಪಲ್ಸ್ ನ ಕಲರ್ ಹಾಗೂ ಫೀಚರ್ಸ್ ಲೀಕ್! ಶೀಘ್ರದಲ್ಲೇ ಲಾಂಚ್...
- Lifestyle ರಾಮನವಮಿ ವಿಶೇಷ: ಬಾಲರಾಮನಿಗೆ ಸೂರ್ಯರಶ್ಮಿ ಅಭಿಷೇಕದ ಅದ್ಭುತ ದೃಶ್ಯಾವಳಿ..!
- Finance ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಕ್ಯಾಬ್ ಸೇವೆ ಪ್ರಾರಂಭ, ಶೂನ್ಯ ಕಮಿಷನ್ ಭರವಸೆ
- Automobiles ಭಾರತದಲ್ಲಿ ಎಪ್ರಿಲಿಯಾ ಶ್ರೇಣಿಯ ನವೀಕರಣ... ಸೂಪರ್ ಬೈಕ್ ಸಂಸ್ಕೃತಿಗೆ ಅಡಿಪಾಯ
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- News ಕಾಂಗ್ರೆಸ್ ಬಿಗ್ ಶಾಕ್ : ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿ ಸೇರ್ಪಡೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ಡೈರೆಕ್ಟರ್ ಕ್ಯಾಪ್ ತೊಡುತ್ತಿರುವುದು 'ಈ' ಚಿತ್ರಕ್ಕಾ.?
'ಅಭಿನಯ ಚಕ್ರವರ್ತಿ' ಕಿಚ್ಚ ಸುದೀಪ್ ಬರೀ ನಟ ಮಾತ್ರ ಅಲ್ಲ.. ಉತ್ತಮ ನಿರ್ದೇಶಕ ಕೂಡ ಹೌದು. 'ಮೈ ಆಟೋಗ್ರಾಫ್', '#73 ಶಾಂತಿನಿವಾಸ', 'ವೀರ ಮದಕರಿ', 'ಜಸ್ಟ್ ಮಾತ್ ಮಾತಲ್ಲಿ', 'ಕೆಂಪೇಗೌಡ' ಮತ್ತು 'ಮಾಣಿಕ್ಯ' ಚಿತ್ರಗಳನ್ನ ನಿರ್ದೇಶನ ಮಾಡಿರುವ ಸುದೀಪ್ ಇದೀಗ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರಂತೆ ಎಂಬ ಗುಸು ಗುಸು ನಿನ್ನೆಯಷ್ಟೇ ಗಾಂಧಿನಗರದಲ್ಲಿ ಕೇಳಿಬಂದಿತ್ತು.
ಡೈರೆಕ್ಟರ್ ಸೀಟ್ ಮೇಲೆ ಸುದೀಪ್ ಕುಳಿತು ಐದು ವರ್ಷಗಳಾಗಿವೆ. ನಟನೆಯಿಂದ ಬ್ಯಾಕ್ ಟು ಬ್ಯಾಕ್ ಹಿಟ್ ಕೊಡುತ್ತಾ ಬರುತ್ತಿರುವ ಸುದೀಪ್ ಇದೀಗ ಮತ್ತೆ ನಿರ್ದೇಶನದ ಕಡೆ ಒಲವು ತೋರುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದ ಬೆನ್ನಲ್ಲೆ ಮತ್ತೊಂದು ಅಪ್ ಡೇಟ್ ಸಿಕ್ಕಿದೆ.
ಅದೇನಪ್ಪಾ ಅಂದ್ರೆ, ತೆಲುಗಿನಲ್ಲಿ ಸೂಪರ್ ಹಿಟ್ ಆದ 'ಭರತ್ ಅನೇ ನೇನು' ಚಿತ್ರವನ್ನ ಕನ್ನಡದಲ್ಲಿ ರೀಮೇಕ್ ಮಾಡಲು ಸುದೀಪ್ ಮನಸ್ಸು ಮಾಡಿದ್ದಾರಂತೆ. 'ಭರತ್ ಅನೇ ನೇನು' ಚಿತ್ರದ ರೀಮೇಕ್ ರೈಟ್ಸ್ ಸುದೀಪ್ ಬಳಿ ಇದ್ಯಂತೆ ಎಂಬ ಅಂತೆ-ಕಂತೆ ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿದೆ.
'ಮಾಣಿಕ್ಯ' ಬಳಿಕ ಮತ್ತೆ ನಿರ್ದೇಶನಕ್ಕೆ ಮರಳಿದ ಕಿಚ್ಚ ಸುದೀಪ್
ಸದ್ಯಕ್ಕೆ 'ಕೋಟಿಗೊಬ್ಬ-3', 'ದಬ್ಬಂಗ್-3' ಸಿನಿಮಾಗಳ ಶೂಟಿಂಗ್ ನಲ್ಲಿ ಸುದೀಪ್ ಬಿಜಿಯಾಗಿದ್ದಾರೆ. 'ಬಿಲ್ಲಾರಂಗಾ ಬಾಷಾ' ಮತ್ತು 'ಫ್ಯಾಂಟಮ್' ಚಿತ್ರಗಳಿಗೆ ಸುದೀಪ್ ಈಗಾಗಲೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಎಲ್ಲಾ ಚಿತ್ರಗಳ ಕಮ್ಮಿಟ್ ಮೆಂಟ್ ಮುಗಿದ ಮೇಲೆ 'ಭರತ್ ಅನೇ ನೇನು' ರೀಮೇಕ್ ಪ್ರಾಜೆಕ್ಟ್ ಗೆ ಸುದೀಪ್ ಕೈಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಂದ್ಹಾಗೆ, ಮತ್ತೆ ನಿರ್ದೇಶನದ ಕಡೆ ಮುಖ ಮಾಡಿರುವ ಕುರಿತಾಗಲಿ, 'ಭರತ್ ಅನೇ ನೇನು' ರೀಮೇಕ್ ರೈಟ್ಸ್ ತಂದಿರುವ ಬಗ್ಗೆಯಾಗಲಿ ಸುದೀಪ್ ಇನ್ನೂ ಸ್ಪಷ್ಟ ಪಡಿಸಿಲ್ಲ. ಎಲ್ಲವೂ ಗಾಂಧಿನಗರದ ಗುಸುಗುಸು ಅಷ್ಟೇ.