Don't Miss!
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- News Weather Report: ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ಡೈರೆಕ್ಟರ್ ಕ್ಯಾಪ್ ತೊಡುತ್ತಿರುವುದು 'ಈ' ಚಿತ್ರಕ್ಕಾ.?
'ಅಭಿನಯ ಚಕ್ರವರ್ತಿ' ಕಿಚ್ಚ ಸುದೀಪ್ ಬರೀ ನಟ ಮಾತ್ರ ಅಲ್ಲ.. ಉತ್ತಮ ನಿರ್ದೇಶಕ ಕೂಡ ಹೌದು. 'ಮೈ ಆಟೋಗ್ರಾಫ್', '#73 ಶಾಂತಿನಿವಾಸ', 'ವೀರ ಮದಕರಿ', 'ಜಸ್ಟ್ ಮಾತ್ ಮಾತಲ್ಲಿ', 'ಕೆಂಪೇಗೌಡ' ಮತ್ತು 'ಮಾಣಿಕ್ಯ' ಚಿತ್ರಗಳನ್ನ ನಿರ್ದೇಶನ ಮಾಡಿರುವ ಸುದೀಪ್ ಇದೀಗ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರಂತೆ ಎಂಬ ಗುಸು ಗುಸು ನಿನ್ನೆಯಷ್ಟೇ ಗಾಂಧಿನಗರದಲ್ಲಿ ಕೇಳಿಬಂದಿತ್ತು.
ಡೈರೆಕ್ಟರ್ ಸೀಟ್ ಮೇಲೆ ಸುದೀಪ್ ಕುಳಿತು ಐದು ವರ್ಷಗಳಾಗಿವೆ. ನಟನೆಯಿಂದ ಬ್ಯಾಕ್ ಟು ಬ್ಯಾಕ್ ಹಿಟ್ ಕೊಡುತ್ತಾ ಬರುತ್ತಿರುವ ಸುದೀಪ್ ಇದೀಗ ಮತ್ತೆ ನಿರ್ದೇಶನದ ಕಡೆ ಒಲವು ತೋರುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದ ಬೆನ್ನಲ್ಲೆ ಮತ್ತೊಂದು ಅಪ್ ಡೇಟ್ ಸಿಕ್ಕಿದೆ.
ಅದೇನಪ್ಪಾ ಅಂದ್ರೆ, ತೆಲುಗಿನಲ್ಲಿ ಸೂಪರ್ ಹಿಟ್ ಆದ 'ಭರತ್ ಅನೇ ನೇನು' ಚಿತ್ರವನ್ನ ಕನ್ನಡದಲ್ಲಿ ರೀಮೇಕ್ ಮಾಡಲು ಸುದೀಪ್ ಮನಸ್ಸು ಮಾಡಿದ್ದಾರಂತೆ. 'ಭರತ್ ಅನೇ ನೇನು' ಚಿತ್ರದ ರೀಮೇಕ್ ರೈಟ್ಸ್ ಸುದೀಪ್ ಬಳಿ ಇದ್ಯಂತೆ ಎಂಬ ಅಂತೆ-ಕಂತೆ ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿದೆ.
'ಮಾಣಿಕ್ಯ' ಬಳಿಕ ಮತ್ತೆ ನಿರ್ದೇಶನಕ್ಕೆ ಮರಳಿದ ಕಿಚ್ಚ ಸುದೀಪ್
ಸದ್ಯಕ್ಕೆ 'ಕೋಟಿಗೊಬ್ಬ-3', 'ದಬ್ಬಂಗ್-3' ಸಿನಿಮಾಗಳ ಶೂಟಿಂಗ್ ನಲ್ಲಿ ಸುದೀಪ್ ಬಿಜಿಯಾಗಿದ್ದಾರೆ. 'ಬಿಲ್ಲಾರಂಗಾ ಬಾಷಾ' ಮತ್ತು 'ಫ್ಯಾಂಟಮ್' ಚಿತ್ರಗಳಿಗೆ ಸುದೀಪ್ ಈಗಾಗಲೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಎಲ್ಲಾ ಚಿತ್ರಗಳ ಕಮ್ಮಿಟ್ ಮೆಂಟ್ ಮುಗಿದ ಮೇಲೆ 'ಭರತ್ ಅನೇ ನೇನು' ರೀಮೇಕ್ ಪ್ರಾಜೆಕ್ಟ್ ಗೆ ಸುದೀಪ್ ಕೈಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಂದ್ಹಾಗೆ, ಮತ್ತೆ ನಿರ್ದೇಶನದ ಕಡೆ ಮುಖ ಮಾಡಿರುವ ಕುರಿತಾಗಲಿ, 'ಭರತ್ ಅನೇ ನೇನು' ರೀಮೇಕ್ ರೈಟ್ಸ್ ತಂದಿರುವ ಬಗ್ಗೆಯಾಗಲಿ ಸುದೀಪ್ ಇನ್ನೂ ಸ್ಪಷ್ಟ ಪಡಿಸಿಲ್ಲ. ಎಲ್ಲವೂ ಗಾಂಧಿನಗರದ ಗುಸುಗುಸು ಅಷ್ಟೇ.