Don't Miss!
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು-ತೆಲುಗಿನಲ್ಲು ಸದ್ದು ಮಾಡಲಿದೆಯಾ ಶಿವಣ್ಣನ 'ಶಿವಲಿಂಗ'
ಪ್ರತಿಭಾವಂತ ನಿರ್ದೇಶಕ ಪಿ.ವಾಸು ಆಕ್ಷನ್-ಕಟ್ ಹೇಳಿದ್ದ ಹಿಟ್ ಸಿನಿಮಾ 'ಶಿವಲಿಂಗ' ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಇದೀಗ ತಮಿಳು ಮತ್ತು ತೆಲುಗು ಭಾಷೆಗೆ ರೀಮೇಕ್ ಆಗುತ್ತಿದೆ ಎಂದು ಅಲ್ಲಲ್ಲಿ ಸುದ್ದಿಯಾಗಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಟಿ ವೇದಿಕಾ ಅವರು ಇದೇ ಮೊದಲ ಬಾರಿಗೆ ಒಂದಾಗಿ ಕಾಣಿಸಿಕೊಂಡಿದ್ದ 'ಶಿವಲಿಂಗ' ಸಿನಿಮಾ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಅಲ್ಲದೇ ನಿರ್ದೇಶಕ ಪಿ.ವಾಸು ಅವರ ಮಗ ನಟ ಶಕ್ತಿ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿ ಪ್ರೇಕ್ಷಕರನ್ನು ಥ್ರಿಲ್ಲಾಗಿಸಿದ್ದು ಚಿತ್ರದ ಮತ್ತೊಂದು ವಿಶೇಷ.['ಶಿವಲಿಂಗ'ದಲ್ಲಿ ರಹೀಂ ಪಾತ್ರ ಮಾಡಿದವರು ಯಾರು ಗೊತ್ತಾ?]
ಇದೀಗ 'ಶಿವಲಿಂಗ' ಚಿತ್ರದ ಲೇಟೆಸ್ಟ್ ಮಾಹಿತಿ ಏನಪ್ಪಾ ಅಂದ್ರೆ, ಕನ್ನಡದಲ್ಲಿ ಯಶಸ್ವಿಯಾದ ಈ ಸಿನಿಮಾ ಇದೀಗ ತಮಿಳು ಮತ್ತು ತೆಲುಗು ಭಾಷೆಗೆ ರೀಮೇಕ್ ಆಗಲಿದ್ದು, ತಮಿಳಿನಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್ ಮತ್ತು ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ್ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ.
ಈ ಮೊದಲು ಕನ್ನಡದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದ, ಡಾ.ವಿಷ್ಣುವರ್ಧನ್, ರಮೇಶ್ ಅರವಿಂದ್ ಮತ್ತು ನಟಿ ಸೌಂದರ್ಯ ಅವರು ಕಾಣಿಸಿಕೊಂಡಿದ್ದ 'ಆಪ್ತಮಿತ್ರ' ತೆಲುಗು ಮತ್ತು ತಮಿಳಿನಲ್ಲಿ ರೀಮೇಕ್ ಆಗಿ 'ಚಂದ್ರಮುಖಿ' ಎಂದಾಗಿತ್ತು. ಚಿತ್ರದಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಮಿಂಚಿದ್ದರು. ಅಲ್ಲೂ ಸಿನಿಮಾ ಒಳ್ಳೆ ಗಳಿಕೆ ಮಾಡಿತ್ತು.['ಶಿವಲಿಂಗ' ವಿಮರ್ಶೆ; ಪಿ.ವಾಸು ನಿರ್ದೇಶನದ ಮತ್ತೊಂದು 'ಆಪ್ತಮಿತ್ರ']
ತದನಂತರ ಪಿ.ವಾಸು ಅವರದೇ ಆಕ್ಷನ್-ಕಟ್ ನಲ್ಲಿ ಮೂಡಿಬಂದಿದ್ದ 'ಆಪ್ತರಕ್ಷಕ' ಸಿನಿಮಾ ಕೂಡ ತೆಲುಗಿಗೆ 'ನಾಗವಲ್ಲಿ' ಎಂಬ ಹೆಸರಿನಲ್ಲಿ ರೀಮೇಕ್ ಆಗಿತ್ತು. ಕನ್ನಡದಲ್ಲಿ ಡಾ.ವಿಷ್ಣುವರ್ಧನ್, ವಿಮಲಾ ರಾಮನ್ ಮತ್ತು ತೆಲುಗು ನಟಿ ಸಂಧ್ಯಾ ಮಿಂಚಿದರೆ, ತೆಲುಗಿನಲ್ಲಿ ವಿಕ್ಟರಿ ವೆಂಕಟೇಶ್ ಪ್ರಮುಖ ಪಾತ್ರ ವಹಿಸಿದ್ದರು.
ತದನಂತರ ವಾಸು ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ 'ದೃಶ್ಯ' ಸಿನಿಮಾ ಕೂಡ ತೆಲುಗಿಗೆ ರೀಮೇಕ್ ಆಗಿರುವ ವಿಚಾರ ನಿಮಗೆ ಗೊತ್ತೇ ಇದೆ. ಕನ್ನಡದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಈ ಸಿನಿಮಾ ಭರ್ಜರಿ ಬ್ರೇಕ್ ಕೊಟ್ಟಿತ್ತು.['ಶಿವಲಿಂಗ' ಹೇಗಿದೆ ಟ್ವಿಟ್ಟರ್ ನಲ್ಲಿ ಪ್ರಥಮ ವಿಮರ್ಶೆ]
ಅದೇನೇ ಇರಲಿ ಸದ್ಯಕ್ಕೆ 'ಶಿವಲಿಂಗ' ಸಿನಿಮಾ ಕೂಡ ಪರಭಾಷೆಗೆ ರೀಮೇಕ್ ಆಗುತ್ತಿದೆ ಎಂದು ಸುದ್ದಿಯಾಗಿದ್ದು, ಈ ಸುದ್ದಿ ನಿಜಾನೋ ಸುಳ್ಳೋ ಎಂಬುದು ಸದ್ಯದಲ್ಲೇ ತಿಳಿದು ಬರಲಿದೆ.