Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಮೌಳಿ ಬಿಟ್ಟು ತಮಿಳು ನಿರ್ದೇಶಕನ ಜೊತೆ ಕೈಜೋಡಿಸಿದ ಮಹೇಶ್ ಬಾಬು?
ತೆಲುಗು ನಟ ಮಹೇಶ್ ಬಾಬು 'ಸರ್ಕಾರು ವಾರಿ ಪಾಟ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾದ ಚಿತ್ರೀಕರಣ ಕುಂಟುತ್ತಾ ಸಾಗುತ್ತಿದೆ.
'ಸರ್ಕಾರು ವಾರಿ ಪಾಟ' ಸಿನಿಮಾದ ಬಳಿಕ ಮಹೇಶ್ ಬಾಬು ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಹೊಸದಾಗಿ ಬಂದಿರುವ ಸುದ್ದಿಯೆಂದರೆ ಮಹೇಶ್ ಬಾಬು ಅವರು ತಮಿಳು ನಿರ್ದೇಶಕನ ಸಿನಿಮಾದಲ್ಲಿ ನಟಿಸಲು ತಯಾರಾಗಿದ್ದಾರಂತೆ.
ಸೂಕ್ಷ್ಮ ವಿಷಯಕ್ಕೆ ಕಮರ್ಷಿಯಲ್ ಹೊದಿಕೆ ಹೊದಿಸಿ ಸಿನಿಮಾಗಳನ್ನು ಪ್ರೆಸೆಂಟ್ ಮಾಡುವುದರಲ್ಲಿ ನಿಸ್ಸೀಮರಾಗಿರುವ ನಿರ್ದೇಶಕ ಲೋಕೇಶ್ ಕನಕರಾಜ್ ಸಿನಿಮಾದಲ್ಲಿ ಮಹೇಶ್ ಬಾಬು ನಟಿಸಲಿದ್ದಾರೆ.
ಲೋಕೇಶ್ ಕನಕರಾಜ್ ಈಗಾಗಲೇ ಮಹೇಶ್ ಬಾಬುಗೆ ಕತೆ ಹೇಳಿದ್ದು, ಕತೆ ಮಹೇಶ್ಗೆ ಬಹಳ ಹಿಡಿಸಿದೆಯಂತೆ. ಸಿನಿಮಾಕ್ಕೆ ಮಹೇಶ್ ಈಗಾಗಲೇ ಯೆಸ್ ಅಂದಿದ್ದು, 'ಸರ್ಕಾರು ವಾರಿ ಪಾಟ' ಸಿನಿಮಾ ಮುಗಿಯುತ್ತಿದ್ದಂತೆ ಲೋಕೇಶ್-ಮಹೇಶ್ ಜೋಡಿಯ ಸಿನಿಮಾ ಪ್ರಾರಂಭವಾಗಲಿದೆ.
ಕಾಡಿನಲ್ಲಿ ನಡೆವ ಥ್ರಿಲ್ಲರ್ ಕತೆಯನ್ನು ಮಹೇಶ್ ನಾಯಕ, ರಾಜಮೌಳಿ ನಿರ್ದೇಶಕ
ರಾಜಮೌಳಿ ಜೊತೆಗೆ ಮಹೇಶ್ ಬಾಬು ಮುಂದಿನ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಕಾಡಿನ ಒಳಗೆ ನಡೆಯುವ ಆಕ್ಷನ್ ಥ್ರಿಲ್ಲರ್ ಕತೆ ಇದಾಗಿರಲಿದ್ದು, ರಾಜಮೌಳಿ ತಂದೆ ವಿಜಯೇಂದ್ರ ಸಿನಿಮಾಕ್ಕೆ ಕತೆ ಬರೆದಿದ್ದಾರೆ. ಆದರೆ ಲೋಕೇಶ್ ಕನಕರಾಜನ್ ಸಿನಿಮಾದ ನಂತರ ರಾಜಮೌಳಿ ಜೊತೆಗಿನ ಮಹೇಶ್ ಬಾಬು ಸಿನಿಮಾ ಆರಂಭವಾಗಲಿದೆ.
ತ್ರಿವಿಕ್ರಮ್ ಕತೆಗೆ ನೋ ಎಂಬ ಮಹೇಶ್ ಬಾಬು
ತೆಲುಗಿನ ಮತ್ತೊಬ್ಬ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಸಹ ಮಹೇಶ್ ಬಾಬು ಅವರಿಗೆ ಕತೆ ಹೇಳಿದ್ದರು. ಆದರೆ ಲೋಕೇಶ್ ಕನಕರಾಜನ್ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡಿದ್ದ ಕಾರಣ ತ್ರಿವಿಕ್ರಮ್ ಕತೆಯನ್ನು ಮಹೇಶ್ ನಿರಾಕರಿಸಿದ್ದಾರಂತೆ.
ಕಮಲ್ ಜೊತೆ ಸಿನಿಮಾ ಮಾಡುತ್ತಿರುವ ಲೋಕೇಶ್
ಇನ್ನು ಲೋಕೇಶ್ ಕನಕರಾಜನ್ ಪ್ರಸ್ತುತ ಕಮಲ್ ಹಾಸನ್ ಜೊತೆಗೆ 'ವಿಕ್ರಂ' ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಈ ಮುನ್ನ ಅವರು ಸೂಪರ್ ಹಿಟ್ ಸಿನಿಮಾಗಳಾದ 'ಮಾನಗರಂ', 'ಖೈದಿ' ವಿಜಯ್ ನಟನೆಯ 'ಮಾಸ್ಟರ್' ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.
ಕೋವಿಡ್ ಕಾರಣಕ್ಕೆ ಚಿತ್ರೀಕರಣ ವಿಳಂಬ
ಮಹೇಶ್ ಬಾಬು ಪ್ರಸ್ತುತ ನಟಿಸುತ್ತಿರುವ 'ಸರ್ಕಾರು ವಾರಿ ಪಾಟ' ಸಿನಿಮಾದ ಚಿತ್ರೀಕರಣ ಕೊರೊನಾ ಕಾರಣಕ್ಕೆ ಕುಂಟುತ್ತಾ ಸಾಗಿದೆ. ಯೂನಿಟ್ನ ಸಿಬ್ಬಂದಿಗೆ ಎರಡು ಬಾರಿ ಕೊರೊನಾ ಕಾಣಿಸಿಕೊಂಡ ಕಾರಣ ಎರಡು ಬಾರಿ ಚಿತ್ರೀಕರಣ ಮುಂದೂಡಲಾಗಿದೆ. ಸಿನಿಮಾದಲ್ಲಿ ಮಹೇಶ್ ಬಾಬು ಜೊತೆಗೆ ಕೀರ್ತಿ ಸುರೇಶ್, ಅನುಷ್ಕಾ ಶೆಟ್ಟಿ ನಟಿಸುತ್ತಿದ್ದಾರೆ.