Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಮೌಳಿ ಬಿಟ್ಟು ತಮಿಳು ನಿರ್ದೇಶಕನ ಜೊತೆ ಕೈಜೋಡಿಸಿದ ಮಹೇಶ್ ಬಾಬು?
ತೆಲುಗು ನಟ ಮಹೇಶ್ ಬಾಬು 'ಸರ್ಕಾರು ವಾರಿ ಪಾಟ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೊರೊನಾ ಕಾರಣಕ್ಕೆ ಸಿನಿಮಾದ ಚಿತ್ರೀಕರಣ ಕುಂಟುತ್ತಾ ಸಾಗುತ್ತಿದೆ.
'ಸರ್ಕಾರು ವಾರಿ ಪಾಟ' ಸಿನಿಮಾದ ಬಳಿಕ ಮಹೇಶ್ ಬಾಬು ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಹೊಸದಾಗಿ ಬಂದಿರುವ ಸುದ್ದಿಯೆಂದರೆ ಮಹೇಶ್ ಬಾಬು ಅವರು ತಮಿಳು ನಿರ್ದೇಶಕನ ಸಿನಿಮಾದಲ್ಲಿ ನಟಿಸಲು ತಯಾರಾಗಿದ್ದಾರಂತೆ.
ಸೂಕ್ಷ್ಮ ವಿಷಯಕ್ಕೆ ಕಮರ್ಷಿಯಲ್ ಹೊದಿಕೆ ಹೊದಿಸಿ ಸಿನಿಮಾಗಳನ್ನು ಪ್ರೆಸೆಂಟ್ ಮಾಡುವುದರಲ್ಲಿ ನಿಸ್ಸೀಮರಾಗಿರುವ ನಿರ್ದೇಶಕ ಲೋಕೇಶ್ ಕನಕರಾಜ್ ಸಿನಿಮಾದಲ್ಲಿ ಮಹೇಶ್ ಬಾಬು ನಟಿಸಲಿದ್ದಾರೆ.
ಲೋಕೇಶ್ ಕನಕರಾಜ್ ಈಗಾಗಲೇ ಮಹೇಶ್ ಬಾಬುಗೆ ಕತೆ ಹೇಳಿದ್ದು, ಕತೆ ಮಹೇಶ್ಗೆ ಬಹಳ ಹಿಡಿಸಿದೆಯಂತೆ. ಸಿನಿಮಾಕ್ಕೆ ಮಹೇಶ್ ಈಗಾಗಲೇ ಯೆಸ್ ಅಂದಿದ್ದು, 'ಸರ್ಕಾರು ವಾರಿ ಪಾಟ' ಸಿನಿಮಾ ಮುಗಿಯುತ್ತಿದ್ದಂತೆ ಲೋಕೇಶ್-ಮಹೇಶ್ ಜೋಡಿಯ ಸಿನಿಮಾ ಪ್ರಾರಂಭವಾಗಲಿದೆ.
ಕಾಡಿನಲ್ಲಿ ನಡೆವ ಥ್ರಿಲ್ಲರ್ ಕತೆಯನ್ನು ಮಹೇಶ್ ನಾಯಕ, ರಾಜಮೌಳಿ ನಿರ್ದೇಶಕ
ರಾಜಮೌಳಿ ಜೊತೆಗೆ ಮಹೇಶ್ ಬಾಬು ಮುಂದಿನ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಕಾಡಿನ ಒಳಗೆ ನಡೆಯುವ ಆಕ್ಷನ್ ಥ್ರಿಲ್ಲರ್ ಕತೆ ಇದಾಗಿರಲಿದ್ದು, ರಾಜಮೌಳಿ ತಂದೆ ವಿಜಯೇಂದ್ರ ಸಿನಿಮಾಕ್ಕೆ ಕತೆ ಬರೆದಿದ್ದಾರೆ. ಆದರೆ ಲೋಕೇಶ್ ಕನಕರಾಜನ್ ಸಿನಿಮಾದ ನಂತರ ರಾಜಮೌಳಿ ಜೊತೆಗಿನ ಮಹೇಶ್ ಬಾಬು ಸಿನಿಮಾ ಆರಂಭವಾಗಲಿದೆ.
ತ್ರಿವಿಕ್ರಮ್ ಕತೆಗೆ ನೋ ಎಂಬ ಮಹೇಶ್ ಬಾಬು
ತೆಲುಗಿನ ಮತ್ತೊಬ್ಬ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಸಹ ಮಹೇಶ್ ಬಾಬು ಅವರಿಗೆ ಕತೆ ಹೇಳಿದ್ದರು. ಆದರೆ ಲೋಕೇಶ್ ಕನಕರಾಜನ್ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡಿದ್ದ ಕಾರಣ ತ್ರಿವಿಕ್ರಮ್ ಕತೆಯನ್ನು ಮಹೇಶ್ ನಿರಾಕರಿಸಿದ್ದಾರಂತೆ.
ಕಮಲ್ ಜೊತೆ ಸಿನಿಮಾ ಮಾಡುತ್ತಿರುವ ಲೋಕೇಶ್
ಇನ್ನು ಲೋಕೇಶ್ ಕನಕರಾಜನ್ ಪ್ರಸ್ತುತ ಕಮಲ್ ಹಾಸನ್ ಜೊತೆಗೆ 'ವಿಕ್ರಂ' ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಈ ಮುನ್ನ ಅವರು ಸೂಪರ್ ಹಿಟ್ ಸಿನಿಮಾಗಳಾದ 'ಮಾನಗರಂ', 'ಖೈದಿ' ವಿಜಯ್ ನಟನೆಯ 'ಮಾಸ್ಟರ್' ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.
ಕೋವಿಡ್ ಕಾರಣಕ್ಕೆ ಚಿತ್ರೀಕರಣ ವಿಳಂಬ
ಮಹೇಶ್ ಬಾಬು ಪ್ರಸ್ತುತ ನಟಿಸುತ್ತಿರುವ 'ಸರ್ಕಾರು ವಾರಿ ಪಾಟ' ಸಿನಿಮಾದ ಚಿತ್ರೀಕರಣ ಕೊರೊನಾ ಕಾರಣಕ್ಕೆ ಕುಂಟುತ್ತಾ ಸಾಗಿದೆ. ಯೂನಿಟ್ನ ಸಿಬ್ಬಂದಿಗೆ ಎರಡು ಬಾರಿ ಕೊರೊನಾ ಕಾಣಿಸಿಕೊಂಡ ಕಾರಣ ಎರಡು ಬಾರಿ ಚಿತ್ರೀಕರಣ ಮುಂದೂಡಲಾಗಿದೆ. ಸಿನಿಮಾದಲ್ಲಿ ಮಹೇಶ್ ಬಾಬು ಜೊತೆಗೆ ಕೀರ್ತಿ ಸುರೇಶ್, ಅನುಷ್ಕಾ ಶೆಟ್ಟಿ ನಟಿಸುತ್ತಿದ್ದಾರೆ.