Don't Miss!
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- News Bengaluru Peripheral Ring Road: 73 ಕಿಲೋ ಮೀಟರ್ ಯೋಜನೆಗೆ ಬಿಡ್ ಮಾಡಿದ್ದು ಕೇವಲ ಒಂದೇ ಕಂಪನಿ .!-ವೆಚ್ಚ ಎಷ್ಟು?
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ 'ಐ ಲವ್ ಯೂ' ಹೇಳುವುದು ಯಾರಿಗೆ.?
Recommended Video
ಕೆಪಿಜೆಪಿ ಪಕ್ಷದಿಂದ ಹೊರ ಬಂದ ಉಪೇಂದ್ರ ತಮ್ಮದೇ ಹೊಸ ಪಕ್ಷ ಸ್ಥಾಪಿಸಲು ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಮತ್ತೆ ಚಿತ್ರರಂಗಕ್ಕೆ ವಾಪಸ್ ಆಗುತ್ತಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ಸದ್ಯ, ಉಪೇಂದ್ರ ಅಭಿನಯಿಸುತ್ತಿರುವ 'ಹೋಮ್ ಮಿನಿಸ್ಟರ್' ಸಿನಿಮಾ ಬಹುತೇಕ ಚಿತ್ರೀಕರಣ ಮುಗಿದಿದೆ. ಈ ಮಧ್ಯೆ ನಿರ್ದೇಶಕ ಆರ್ ಚಂದ್ರು ಅವರ ನಿರ್ದೇಶನದಲ್ಲಿ ಉಪೇಂದ್ರ ಮತ್ತೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ.
ಇಷ್ಟು ದಿನ ಸೈಲೆಂಟ್ ಆಗಿದ್ದ ಉಪೇಂದ್ರ ಬಗ್ಗೆ ಈಗ ಬಂದಿದೆ ಹೊಸ ಬ್ರೇಕಿಂಗ್ ನ್ಯೂಸ್ !
2014ರಲ್ಲಿ ತೆರೆಕಂಡಿದ್ದ 'ಬ್ರಹ್ಮ' ಸಿನಿಮಾದ ನಂತರ ಮತ್ತೆ ಉಪ್ಪಿ ಜೊತೆ ಚಂದ್ರು ಸಿನಿಮಾ ಮಾಡಿರಲಿಲ್ಲ. ಈಗ ಮತ್ತೊಮ್ಮೆ ಇವರಿಬ್ಬರು ಒಂದಾಗಲಿದ್ದಾರಂತೆ. 'ಕನಕ' ಚಿತ್ರದ ನಂತರ ಆರ್ ಚಂದ್ರು ಆಕ್ಷನ್ ಕಟ್ ಹೇಳಲಿರುವ ಬಹುಭಾಷೆ ಚಿತ್ರಕ್ಕೆ'ಐ ಲವ್ ಯೂ' ಎಂಬ ಟೈಟಲ್ ಕೂಡ ಇಡಲಾಗಿದೆಯಂತೆ.
ಉಪೇಂದ್ರ ಅವರ ಖಾತೆಯಲ್ಲಿ ಮೂರ್ನಾಲ್ಕು ಸಿನಿಮಾಗಳು ಬಾಕಿ ಇದೆ. 'ಹೋಮ್ ಮಿನಿಸ್ಟರ್' ನಂತರ 'ಉಪ್ಪಿ ರುಪ್ಪಿ' ಸಿನಿಮಾ ಶುರು ಆಗಬೇಕಿದೆ. ಈ ಚಿತ್ರದಲ್ಲಿ ಮೊದಲ ಬಾರಿಗೆ ಉಪೇಂದ್ರ ಮತ್ತು ರಚಿತಾ ರಾಮ್ ಜೋಡಿಯಾಗಿದ್ದಾರೆ. ಅದರ ಜೊತೆಗೆ ಮಂಜು ಮಾಂಡವ್ಯ ಹಾಗೂ ಗುರುದತ್ ನಿರ್ದೇಶನದಲ್ಲಿ ಉಪ್ಪಿ ಒಂದೊಂದು ಸಿನಿಮಾ ಮಾಡುವುದು ಬಾಕಿ ಇದೆ. ಗುರುದತ್ ನಿರ್ದೇಶನದ ಚಿತ್ರಕ್ಕೆ 'ನಾಗರ್ಜುನ' ಎಂಬ ಟೈಟಲ್ ಇಡಲಾಗಿತ್ತು. ಈ ಚಿತ್ರಗಳಿಗಿಂತ ಮುಂಚೆಯೇ ಈಗ ಆರ್ ಚಂದ್ರು ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಷ್ಟೆಲ್ಲಾ ನಿರೀಕ್ಷೆಗಳ ಮಧ್ಯೆ ಉಪೇಂದ್ರ ನಿರ್ದೇಶನ ಮಾಡಲಿರುವ ಸಿನಿಮಾಗ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ. ಬಹುಶಃ ಉಪ್ಪಿಯ ಈ ವರ್ಷದ ಹುಟ್ಟುಹಬ್ಬಕ್ಕೆ (ಸಪ್ಟೆಂಬರ್ 18)ಕ್ಕೆ ಈ ಸಿನಿಮಾ ಲಾಂಚ್ ಆಗಬಹುದು. 2016ರಲ್ಲಿ ಬಿಡುಗಡೆಯಾಗಿದ್ದ 'ಮುಕುಂದ ಮುರಾರಿ' ಚಿತ್ರದಲ್ಲಿ ಉಪೇಂದ್ರ ಕೊನೆಯದಾಗಿ ಕಾಣಿಸಿಕೊಂಡಿದ್ದರು.