Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ 'ಐ ಲವ್ ಯೂ' ಹೇಳುವುದು ಯಾರಿಗೆ.?
Recommended Video
ಕೆಪಿಜೆಪಿ ಪಕ್ಷದಿಂದ ಹೊರ ಬಂದ ಉಪೇಂದ್ರ ತಮ್ಮದೇ ಹೊಸ ಪಕ್ಷ ಸ್ಥಾಪಿಸಲು ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಮತ್ತೆ ಚಿತ್ರರಂಗಕ್ಕೆ ವಾಪಸ್ ಆಗುತ್ತಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ಸದ್ಯ, ಉಪೇಂದ್ರ ಅಭಿನಯಿಸುತ್ತಿರುವ 'ಹೋಮ್ ಮಿನಿಸ್ಟರ್' ಸಿನಿಮಾ ಬಹುತೇಕ ಚಿತ್ರೀಕರಣ ಮುಗಿದಿದೆ. ಈ ಮಧ್ಯೆ ನಿರ್ದೇಶಕ ಆರ್ ಚಂದ್ರು ಅವರ ನಿರ್ದೇಶನದಲ್ಲಿ ಉಪೇಂದ್ರ ಮತ್ತೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ.
ಇಷ್ಟು ದಿನ ಸೈಲೆಂಟ್ ಆಗಿದ್ದ ಉಪೇಂದ್ರ ಬಗ್ಗೆ ಈಗ ಬಂದಿದೆ ಹೊಸ ಬ್ರೇಕಿಂಗ್ ನ್ಯೂಸ್ !
2014ರಲ್ಲಿ ತೆರೆಕಂಡಿದ್ದ 'ಬ್ರಹ್ಮ' ಸಿನಿಮಾದ ನಂತರ ಮತ್ತೆ ಉಪ್ಪಿ ಜೊತೆ ಚಂದ್ರು ಸಿನಿಮಾ ಮಾಡಿರಲಿಲ್ಲ. ಈಗ ಮತ್ತೊಮ್ಮೆ ಇವರಿಬ್ಬರು ಒಂದಾಗಲಿದ್ದಾರಂತೆ. 'ಕನಕ' ಚಿತ್ರದ ನಂತರ ಆರ್ ಚಂದ್ರು ಆಕ್ಷನ್ ಕಟ್ ಹೇಳಲಿರುವ ಬಹುಭಾಷೆ ಚಿತ್ರಕ್ಕೆ'ಐ ಲವ್ ಯೂ' ಎಂಬ ಟೈಟಲ್ ಕೂಡ ಇಡಲಾಗಿದೆಯಂತೆ.
ಉಪೇಂದ್ರ ಅವರ ಖಾತೆಯಲ್ಲಿ ಮೂರ್ನಾಲ್ಕು ಸಿನಿಮಾಗಳು ಬಾಕಿ ಇದೆ. 'ಹೋಮ್ ಮಿನಿಸ್ಟರ್' ನಂತರ 'ಉಪ್ಪಿ ರುಪ್ಪಿ' ಸಿನಿಮಾ ಶುರು ಆಗಬೇಕಿದೆ. ಈ ಚಿತ್ರದಲ್ಲಿ ಮೊದಲ ಬಾರಿಗೆ ಉಪೇಂದ್ರ ಮತ್ತು ರಚಿತಾ ರಾಮ್ ಜೋಡಿಯಾಗಿದ್ದಾರೆ. ಅದರ ಜೊತೆಗೆ ಮಂಜು ಮಾಂಡವ್ಯ ಹಾಗೂ ಗುರುದತ್ ನಿರ್ದೇಶನದಲ್ಲಿ ಉಪ್ಪಿ ಒಂದೊಂದು ಸಿನಿಮಾ ಮಾಡುವುದು ಬಾಕಿ ಇದೆ. ಗುರುದತ್ ನಿರ್ದೇಶನದ ಚಿತ್ರಕ್ಕೆ 'ನಾಗರ್ಜುನ' ಎಂಬ ಟೈಟಲ್ ಇಡಲಾಗಿತ್ತು. ಈ ಚಿತ್ರಗಳಿಗಿಂತ ಮುಂಚೆಯೇ ಈಗ ಆರ್ ಚಂದ್ರು ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಷ್ಟೆಲ್ಲಾ ನಿರೀಕ್ಷೆಗಳ ಮಧ್ಯೆ ಉಪೇಂದ್ರ ನಿರ್ದೇಶನ ಮಾಡಲಿರುವ ಸಿನಿಮಾಗ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ. ಬಹುಶಃ ಉಪ್ಪಿಯ ಈ ವರ್ಷದ ಹುಟ್ಟುಹಬ್ಬಕ್ಕೆ (ಸಪ್ಟೆಂಬರ್ 18)ಕ್ಕೆ ಈ ಸಿನಿಮಾ ಲಾಂಚ್ ಆಗಬಹುದು. 2016ರಲ್ಲಿ ಬಿಡುಗಡೆಯಾಗಿದ್ದ 'ಮುಕುಂದ ಮುರಾರಿ' ಚಿತ್ರದಲ್ಲಿ ಉಪೇಂದ್ರ ಕೊನೆಯದಾಗಿ ಕಾಣಿಸಿಕೊಂಡಿದ್ದರು.