Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೌಕರ ಆತ್ಮಹತ್ಯೆ: ರಾಘಣ್ಣ ದಂಪತಿ ವಿರುದ್ದ ಕೇಸ್ ದಾಖಲು
ಹಲವು ವರ್ಷಗಳಿಂದ ವರನಟ ಡಾ. ರಾಜಕುಮಾರ್ ಅವರ ಒಡೆತನದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ವಜ್ರೇಶ್ವರಿ ಕಂಬೈನ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉಮೇಶ್ ಎನ್ನುವ ವ್ಯಕ್ತಿಯ ಶವ ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ವಸತಿ ಗೃಹವೊಂದದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶುಕ್ರವಾರ (ಜೂ 5) ಪತ್ತೆಯಾಗಿದೆ.
ಸಹದ್ಯೋಗಿಗಳ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಉಮೇಶ್ ಕುಟುಂಬದವರು ದೂರು ನೀಡಿರುವ ಹಿನ್ನಲೆಯಲ್ಲಿ, ತ್ಯಾಗರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೊತೆಗೆ, ವಜ್ರೇಶ್ವರಿ ಕಂಬೈನ್ಸ್ ಆಡಳಿತ ಮಂಡಳಿ ವಿರುದ್ಧ ಕಿರುಕುಳ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆತ್ಮಹತ್ಯೆ ಘಟನೆ ನಡೆದ ಬೆನ್ನಲ್ಲೇ ಪೊಲೀಸರು ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಮತ್ತು ಅವರ ಪತ್ನಿಯ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲಿ (IPC-306) ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ಬಗ್ಗೆ: ತ್ಯಾಗರಾಜನಗರ ನಿವಾಸಿಯಾಗಿದ್ದ ಮೂಲತಃ ಉಡುಪಿ ಮೂಲದವರಾದ ಉಮೇಶ್ ಕೋಟೇಕಾರ್ (47) ಎನ್ನುವ ವ್ಯಕ್ತಿ ವಜ್ರೇಶ್ವರಿ ಸಂಸ್ಥೆಯ ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
ಆದರೆ ಇತ್ತೀಚಿನ ದಿನಗಳಲ್ಲಿ ರಾಘವೇಂದ್ರ ರಾಜಕುಮಾರ್, ಉಮೇಶ್ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದರು ಎನ್ನುವ ಮಾಹಿತಿಯಿದೆ.
ಸಂಸ್ಥೆಯ ಹಣಕಾಸಿನ ಲೆಕ್ಕಾಚಾರದಲ್ಲಿ ಸುಮಾರು ಮೂರು ಕೋಟಿ ರೂಪಾಯಿನಷ್ಟು ಹಣ ದುರಪಯೋಗವಾಗಿದೆ ಎನ್ನುವುದು ಆಡಳಿತ ಮಂಡಳಿಯ ಅನುಮಾನವಾಗಿತ್ತು.
ಈ ಸಂಬಂಧ ವಿವರಣೆ ನೀಡುವಂತೆ ರಾಘವೇಂದ್ರ ರಾಜಕುಮಾರ್ ಪತ್ನಿ ಉಮೇಶ್ ಅವರಿಗೆ ತಾಕೀತು ಮಾಡಿದ್ದರು. ಇದಾದ ಒಂದು ದಿನದ ನಂತರ ಸಂಸ್ಥೆಯ ನೌಕರರು ಉಮೇಶ್ ಮನೆಯಿಂದ ಕೆಲವೊಂದು ಕಡತಗಳನ್ನು ತೆಗೆದುಕೊಂಡು ಹೋಗಿದ್ದರು.
ಘಟನೆಯಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಪತಿ ಹಣ ದುರ್ಬಳಕೆ ಮಾಡಿಕೊಂಡಿಲ್ಲ. ಪತಿಯ ಸಾವಿಗೆ ರಾಘಣ್ಣ ಕುಟುಂಬದವರೇ ಕಾರಣ ಎಂದು ಮೃತ ಉಮೇಶ್ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ.