Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ಮುಂದಿನ ಚಿತ್ರಕ್ಕೆ ಇಬ್ಬರು ನಾಯಕಿಯರು!
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯಿಸುತ್ತಿರುವ 'ದರ್ಬಾರ್' ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲು ಸಜ್ಜಾಗುತ್ತಿದೆ. ಎಆರ್ ಮುರುಗದಾಸ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ಸುಮಾರು ವರ್ಷದ ನಂತರ ತಲೈವಾ ಪೊಲೀಸ್ ಆಫೀಸರ್ ಆಗಿ ಅಬ್ಬರಿಸಿದ್ದಾರೆ.
ಇದೀಗ, ರಜನಿಯ ಮುಂದಿನ ಸಿನಿಮಾ ಯಾವುದು ಎಂಬ ಚರ್ಚೆ ಆರಂಭವಾಗಿದೆ. ತಲೈವಾ ಅವರ ಆಪ್ತರ ಪ್ರಕಾರ, ರಜನಿ ಮುಂದಿನ ಚಿತ್ರಕ್ಕೆ ಶಿವ ನಿರ್ದೇಶನ ಮಾಡಲಿದ್ದಾರೆ.
'ದರ್ಬಾರ್' ನಂತರ ರಜನಿ ಮುಂದಿನ ಚಿತ್ರಕ್ಕೆ ಡೈರೆಕ್ಟರ್ ಫಿಕ್ಸ್
Recommended Video
ವೀರಂ, ವೇದಾಲಂ, ವಿವೇಗಂ, ವಿಶ್ವಾಸಂ ಅಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನ ನಿರ್ದೇಶನ ಮಾಡಿರುವ ಶಿವ, ಸೂಪರ್ ಸ್ಟಾರ್ ಗೆ ಆಕ್ಷನ್ ಕಟ್ ಹೇಳಲು ಸಿದ್ಧವಾಗಿದ್ದಾರಂತೆ.
ಈಗಾಗಲೇ ಕಥೆ ಪಕ್ಕಾ ಮಾಡಿರುವ ರಜನಿ ಕಾಲ್ ಶೀಟ್ ಕೂಡ ಕೊಟ್ಟಿದ್ದಾರಂತೆ, ರಜನಿಯ 168ನೇ ಚಿತ್ರಕ್ಕೆ ನಾಯಕಿ ಯಾರಾಗಬಹುದು ಎಂಬ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಈ ಸಿನಿಮಾದಲ್ಲಿ ರಜನಿಗೆ ಇಬ್ಬರು ನಾಯಕಿಯರು ಎಂದು ಹೇಳಲಾಗುತ್ತಿದೆ.
ಹೀರೋ ಮಾಡಿದ ನಿರ್ಮಾಪಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸೂಪರ್ ಸ್ಟಾರ್
ಎರಡು ಕಾಲಾವಧಿಯಲ್ಲಿ ಈ ಕಥೆ ನಡೆಯಲಿದ್ದು, ಹಿರಿಯ ನಟಿ ಜ್ಯೋತಿಕಾ ಮತ್ತು ಕೀರ್ತಿ ಸುರೇಶ್ ಹೆಸರು ಸದ್ದು ಮಾಡ್ತಿದೆ. ಒಂದು ಕಥೆಯಲ್ಲಿ ಜ್ಯೋತಿಕಾ ಮತ್ತು ಇನ್ನೊಂದು ಕಥೆಯಲ್ಲಿ ಕೀರ್ತಿ ಸುರೇಶ್ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 'ಚಂದ್ರಮುಖಿ' ಚಿತ್ರದಲ್ಲಿ ಜ್ಯೋತಿಕಾ ಅವರು ರಜನಿ ಜೊತೆ ನಟಿಸಿದ್ದಾರೆ. ಕೀರ್ತಿ ಸುರೇಶ್ ಪಕ್ಕಾ ಆದರೆ ತಲೈವಾ ಜೊತೆ ನಟಿಸುವ ಅದೃಷ್ಟ ಪಡೆಯಲಿದ್ದಾರೆ.
ಸದ್ಯ ರಜನಿಕಾಂತ್ ಅವರು ಹಿಮಾಲಯಕ್ಕೆ ಹೋಗಿದ್ದಾರೆ. ಹಿಮಾಲಯದಿಂದ ವಾಪಸ್ ಬಂದ್ಮೇಲೆ ಈ ಸಿನಿಮಾಗೆ ಸಂಬಂಧಿಸಿದಂತೆ ಅಪ್ಡೇಟ್ ಹೊರಬೀಳಲಿದೆ.