Don't Miss!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ 'ತ್ರಿವಿಕ್ರಮ'ನಿಗೆ ಬಾಲಿವುಡ್ ನಟ ಸಂಜಯ್ ದತ್ ವಿಲನ್ ?
ಬಾಲಿವುಡ್ ನಟ ಸಂಜಯ್ ದತ್ ಈಗ ಕನ್ನಡಕ್ಕೆ ಬರುತ್ತಾರಂತೆ. ಕನ್ನಡದ ಸ್ಟಾರ್ ನಟನ ಸಿನಿಮಾಗೆ ವಿಲನ್ ಆಗುತ್ತಾರಂತೆ. ಇನ್ನು ಸಂಜಯ್ ದತ್ ಅವರನ್ನು ಕನ್ನಡಕ್ಕೆ ಕರೆ ತರುತ್ತಿರುವವರು ಬೇರೆ ಯಾರು ಅಲ್ಲ ನಿರ್ದೇಶಕ ಓಂ ಪ್ರಕಾಶ್ ರಾವ್.
ನಿರ್ದೇಶಕ ಓಂ ಪ್ರಕಾಶ್ ರಾವ್ ಇತ್ತೀಚಿಗಷ್ಟೆ 50ನೇ ಸಿನಿಮಾವನ್ನು ಶಿವರಾಜ್ ಕುಮಾರ್ ಜೊತೆಗೆ ಮಾಡುವುದಾಗಿ ಹೇಳಿದ್ದರು. ಈಗ ಅವರು ಆ ಸಿನಿಮಾಗೆ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಕರೆತರುವ ತಯಾರಿ ನಡೆಸಿದ್ದಾರೆ. ಜೊತೆಗೆ ಈ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಸಿನಿಮಾಗೆ 'ತ್ರಿವಿಕ್ರಮ' ಎಂಬ ಮಾಸ್ ಹೆಸರನ್ನು ಇಡಲಾಗಿದೆ.
50ನೇ, 100ನೇ ಚಿತ್ರದ ನಿರ್ದೇಶಕರಿಗೆ ಶಿವಣ್ಣ ಸಾಥ್.!
ಅಂದಹಾಗೆ, ನಿರ್ದೇಶಕ ಓಂ ಪ್ರಕಾಶ್ ರಾವ್ ಇನ್ನೊಂದು ವಾರದಲ್ಲಿ ಸಂಜಯ್ ದತ್ ಅವರನ್ನು ಸಂಪರ್ಕ ಮಾಡಲಿದ್ದಾರಂತೆ. ಓಂ ಪ್ರಕಾಶ್ ರೀತಿಯೇ ಕೆಲವು ಕನ್ನಡದ ನಿರ್ದೇಶಕರು ಈ ಹಿಂದೆ ಸಂಜಯ್ ದತ್ ಅವರನ್ನು ಕನ್ನಡಕ್ಕೆ ಕರೆ ತರುವ ಪಯತ್ನ ಮಾಡಿದ್ದರು. ಸಂಜಯ್ ದತ್ ಜೊತೆಗೆ ಸುನೀಲ್ ಶೆಟ್ಟಿ ಕೂಡ ಈ ಸಿನಿಮಾದಲ್ಲಿ ನಟಿಸಬೇಕು ಎಂಬುದು ಓಂ ಪ್ರಕಾಶ್ ರಾವ್ ಆಸೆ.
ಈ ಹಿಂದೆ ಶಿವರಾಜ್ ಕುಮಾರ್ ಅವರಿಗೆ ಓಂ ಪ್ರಕಾಶ್ ರಾವ್ 'AK47', 'ಸಿಂಹದ ಮರಿ' 'ಶಿವ' ಸೇರಿದಂತೆ ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.