Don't Miss!
- Sports
ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್ಪ್ರೀತ್ ಕೌರ್
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಟ್ಯಾಗೋರ್ ಗೀತೆಗಳಿಗೆ ಮರುಳಾಗಿದ್ದ ಜಾಕ್ಸನ್
ಲಂಡನ್, ಜು. 1 : ಪಾಪ್ ಲೋಕದ ಅನರ್ಘ್ಯ ರತ್ನ ಮೈಕಲ್ ಜಾಕ್ಸನ್ ಅವರಿಗೆ ಭಾರತದ ಬಗ್ಗೆ ವಿಶೇಷ ಪ್ರೀತಿ ಇತ್ತು. ಸ್ಲಂಡಾಗ್ ಮಿಲೇನಿಯರ್ ಚಿತ್ರಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿ ಪಡೆದುಕೊಂಡಿರುವ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರೊಂದಿಗೆ ನೊಬೆಲ್ ಪುರಷ್ಕೃತ ಸಾಹಿತಿ ರವೀಂದ್ರನಾಥ್ ಟ್ಯಾಗೋರ್ ಅವರ ಗೀತೆಗೆ ರಾಗ ಸಂಯೋಜನೆ ಮಾಡುವ ಹಂಬಲ ಅವರಿಗಿತ್ತು ಎಂದು ತಿಳಿದುಬಂದಿದೆ.
ಮೈಕಲ್ ಜಾಕ್ಸನ್ ಅವರು ತಮ್ಮ ಕೊನೆ ದಿನಗಳಲ್ಲಿ ಪರಿಸರ ಕುರಿತ ಗೀತೆ ರಚಿಸುವ ಸಲುವಾಗಿ ರವೀಂದ್ರನಾಥ್ ಟ್ಯಾಗೋರ್ ಅವರ ಗೀತೆಗಳನ್ನು ಓದುತ್ತಿದ್ದರು. ಸ್ವರಚಿತವಾದ ಗೀತೆಯನ್ನಿಟ್ಟುಕೊಂಡು ಎಆರ್ ರೆಹಮಾನ್ ಅವರಿಂದ ಸಂಗೀತ ಸಂಯೋಜನೆ ಮಾಡಿಸುವ ಆಸೆಯನ್ನು ಜಾಕ್ಸನ್ ತಮ್ಮ ಆಪ್ತ ವಲಯದಲ್ಲಿ ವ್ಯಕ್ತಪಡಿಸಿದ್ದರು.
ಸ್ಲಂಡಾಗ್ ಮಿಲೇನಿಯರ್ ಚಿತ್ರದ ಜೈಹೋ ಹಾಡಿಗೆ ಅತೀವ ಸಂತಸ ವ್ಯಕ್ತಪಡಿಸಿದ್ದ ಜಾಕ್ಸನ್, ಮುಕ್ತ ಮನಸ್ಸಿನಿಂದ ಕೊಂಡಾಡಿದ್ದರು. ಜಗತ್ತಿಗೆ ಏಕತೆಯನ್ನು ಸಾರುವ 'ವಿ ಆರ್ ದಿ ವರ್ಲ್ಡ್' ಎಂಬ ಪದದಿಂದ ಆರಂಭವಾಗುವ ಒಂದು ಹಾಡನ್ನು ರಚಿಸುವ ಬಗ್ಗೆ ಮಾತನಾಡಿದ್ದರು. ಆದರೆ, ವಿಧಿ ಅವರನ್ನು ಬೇಗ ತನ್ನೆಡೆಗೆ ಕರೆದುಕೊಂಡುಬಿಟ್ಟಿತು ಎಂದು ಸಂಗೀತ ನಿರ್ದೇಶಕ ರೆಹಮಾನ್ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ.
ಜಾಕ್ಸನ್ 1996ರಂದು ಮುಂಬೈನಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂದು ಅವರಾಡಿದ ಮಾತುಗಳು ಇನ್ನೂ ನನ್ನ ನೆನಪಿನಲ್ಲಿವೆ. ಭಾರತದ ಬಗ್ಗೆ ಅವರಿಗೆ ವಿಶೇಷವಾದ ಪ್ರೀತಿ ಇತ್ತು. ಇಲ್ಲಿನ ಅಭಿಮಾನಿಗಳು, ಅವರು ತೋರಿಸುವ ನಿಷ್ಕಲ್ಮಶ ಪ್ರೀತಿಗೆ ಜಾಕ್ಸನ್ ಮಾರು ಹೋಗಿದ್ದರು ಎಂದು ರೆಹಮಾನ್ ಬರೆದುಕೊಂಡಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)