Don't Miss!
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತಕ್ಕೆ 'ಅವತಾರ್' ನಿರ್ದೇಶಕ ಜೇಮ್ಸ್ ಕೆಮೆರಾನ್
'ಟೈಟಾನಿಕ್', 'ದಿ ಟರ್ಮಿನೇಟರ್', 'ಏಲಿಯನ್ಸ್', 'ಅವತಾರ್'ನಂತಹ ಅದ್ಭುತ ಚಿತ್ರಗಳನ್ನು ಕೊಟ್ಟಂತಹ ಕೆನಡಿಯನ್ ನಿರ್ದೇಶಕ ಜೇಮ್ಸ್ ಕೆಮೆರಾನ್ ಭಾರತಕ್ಕೆ ಆಗಮಿಸುತ್ತಿದ್ದಾರೆ. ಅವರ ನಿರ್ದೇಶನದಲ್ಲಿ ಬಂದಂತಹ ಇತ್ತೀಚಿನ 'ಅವತಾರ್' ಚಿತ್ರ ಅವರ ಹಿಂದಿನ 'ಟೈಟಾನಿಕ್' ಚಿತ್ರದ ಬಾಕ್ಸಾಫೀಸ್ ಗಳಿಕೆಯನ್ನು ಚಿಂದಿಮಾಡಿತ್ತು.
ಅಂದಹಾಗೆ ಯಾವುದೇ ಚಿತ್ರವನ್ನು ನಿರ್ದೇಶಿಸಲು ಕೆಮರಾನ್ ಭಾರತಕ್ಕೆ ಬರುತ್ತಿಲ್ಲ. ಮಹಾರಾಷ್ಟ್ರದ ಲವಾಸದಲ್ಲಿ ಡಿಸೆಂಬರ್ 10 ರಿಂದ 12ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ತಂತ್ರಜ್ಞಾನ ಹಾಗೂ ಮನರಂಜನೆ ಬಗ್ಗೆ ಕೆಮರಾನ್ ಮಾತನಾಡಲಿದ್ದಾರೆ.
ಖ್ಯಾತ ಗಣಿತಜ್ಞ ಆನಂದ್ ಕುಮಾರ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು ರೂಪಿಸಿದ ಸೂಪರ್ 30 ಕಾರ್ಯಕ್ರಮ ವಿಶ್ವದಾದ್ಯಂತ ಜನಮನ್ನಣೆಗೆ ಪಾತ್ರವಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತ ಶಿಕ್ಷಣ ನೀಡಲು ಈ ಕಾರ್ಯಕ್ರಮ ನೆರವಾಗುತ್ತಿದೆ. ಕೆಮರಾನ್ ಜೊತೆ ವೇದಿಕೆ ಹಂಚಿಕೊಳ್ಳುತ್ತಿರುವ ಬಗ್ಗೆ ಆನಂದ್ ಸಂತಸ ವ್ಯಕ್ತಪಡಿಸಿದ್ದಾರೆ.