Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಿಯಾಂಕಾ ಮೌನಕ್ಕೆ ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫಾ ಅಸಮಾಧಾನ
ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫ ದೆಹಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಕಾರಣ ಭಾರತದಲ್ಲಿ ಕೆಲವು ದಿನಗಳಿಂದ ಸಖತ್ ಸುದ್ದಿಯಲ್ಲಿದ್ದಾರೆ.
ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಬಳಿಕ ಮಿಯಾ ಖಲೀಫ ವಿರುದ್ಧ ಹಲವರು ಟ್ರೋಲ್ ಮಾಡಿದರು. ಅದಕ್ಕೆ ದಿಟ್ಟ ಉತ್ತರವನ್ನೇ ಮಿಯಾ ಖಲೀಫಾ ಟ್ವಿಟ್ಟರ್ನಲ್ಲಿ ನೀಡಿದರು. ಇದೀಗ ಇದ್ದಕ್ಕಿಂದ್ದಂತೆ ನಟಿ ಪ್ರಿಯಾಂಕಾ ಚೋಪ್ರಾ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಮಿಯಾ ಖಲೀಫಾ.
ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಟ್ವೀಟ್: ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ
ನಟಿ ಪ್ರಿಯಾಂಕಾ ಚೋಪ್ರಾ, ದೆಹಲಿಯ ರೈತ ಪ್ರತಿಭಟನೆ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ರೈತರಿಗೆ ಬೆಂಬಲ ವ್ಯಕ್ತಪಡಿಸುತ್ತಿಲ್ಲ ಎಂಬುದೇ ಮಿಯಾ ಖಲೀಫಾ ಅಸಮಾಧಾನಕ್ಕೆ ಕಾರಣ.
ಈ ಬಗ್ಗೆ ಟ್ವೀಟ್ ಮಾಡಿರುವ ಮಿಯಾ ಖಲೀಫಾ, 'ಶ್ರೀಮತಿ ಜೋನಸ್ (ಪ್ರಿಯಾಂಕಾ ಚೋಪ್ರಾ ಪತಿ ಹೆಸರು ನಿಕ್ ಜೋನಸ್) ಏನಾದರೂ ಸದ್ದು ಮಾಡುತ್ತಾರೆಯೇ? ಅಥವಾ ಬೈರೋತ್ ದುರಂತ ಆದಾಗ ಶಕೀರಾ ಮಾಡಿದಂತೆ ಸುಮ್ಮನಾಗಿಬಿಡುತ್ತಾರೆಯೇ? ಎಂದು ಮಿಯಾ ಖಲೀಫಾ ಪ್ರಶ್ನೆ ಮಾಡಿದ್ದಾರೆ.
ರೈತರನ್ನು ಭಯೋತ್ಪಾದಕರೆಂದ ಕಂಗನಾ ವಿರುದ್ಧ ಬೆಳಗಾವಿಯಲ್ಲಿ ದೂರು
ಮೊದಲ ಟ್ವೀಟ್ ಮಾಡಿದ್ದು ಪ್ರಿಯಾಂಕಾ ಚೋಪ್ರಾ
ಸತ್ಯವೆಂದರೆ, ದೆಹಲಿ ರೈತ ಪ್ರತಿಭಟನೆ ಬಗ್ಗೆ ಮೊದಲು ಟ್ವೀಟ್ ಮಾಡಿದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ. ರೈತರ ಪ್ರತಿಭಟನೆ ವಿರುದ್ಧವಿದ್ದ ನಟಿ ಕಂಗನಾ ರಣೌತ್ ಪ್ರಿಯಾಂಕಾ ವಿರುದ್ಧ ಸರಣಿ ಟ್ವೀಟ್ಗಳನ್ನು ಆಗ ಮಾಡಿದ್ದರು.
ರೈತರ ಬಗ್ಗೆ ಟ್ವೀಟ್ ಮಾಡಿದ್ದ ಪ್ರಿಯಾಂಕಾ ಚೋಪ್ರಾ
'ನಮ್ಮ ರೈತರು ಭಾರತದ ಆಹಾರ ಸೈನಿಕರು. ಅವರ ಭಯವನ್ನು ಹೋಗಲಾಡಿಸಬೇಕಾಗಿದೆ. ಅವರ ಆಶಯಗಳನ್ನು ಈಡೇರಿಸಬೇಕಾಗಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವವಾಗಿ, ಈ ಬಿಕ್ಕಟ್ಟುಗಳನ್ನು ಶೀಘ್ರದಲ್ಲಿಯೇ ಪರಿಹರಿಸಿಕೊಳ್ಳಬೇಕಿದೆ' ಎಂದು ಪ್ರಿಯಾಂಕಾ ಚೋಪ್ರಾ, ರೈತರ ಬೆಂಬಲದಲ್ಲಿ ಟ್ವೀಟ್ ಮಾಡಿದ್ದರು.
ಪ್ರಿಯಾಂಕಾ ಚೋಪ್ರಾ ವಿರುದ್ಧ ಹರಿಹಾಯ್ದಿದ್ದ ಕಂಗನಾ
ನಟಿ ಪ್ರಿಯಾಂಕಾ ಚೋಪ್ರಾ ಮತ್ತು ದಿಲ್ಜಿತ್ ದುಸ್ಸಾಂಜ್ ಅವರುಗಳು ರೈತರನ್ನು ಪ್ರಚೋದಿಸುವ, ಕೆರಳಿಸುವ ಯತ್ನವನ್ನು ಮಾಡುತ್ತಿದ್ದಾರೆ ಎಂದು ನಟಿ ಕಂಗನಾ ರಣೌತ್ ಆರೋಪ ಮಾಡಿದ್ದರು. ಆ ನಂತರ ನಟ ದಿಲ್ಜಿತ್ ದುಸ್ಸಾಂಜ್ ಹಾಗೂ ಕಂಗನಾ ನಡುವೆ ಟ್ವೀಟ್ ವಾರ್ ನಡೆದಿತ್ತು.
ಬೆನ್ನುಮೂಳೆ ಇಲ್ಲದ ಬಾಲಿವುಡ್ ಎಂದ ನಟಿ ರಮ್ಯಾ
Recommended Video
ಹಲವರಿಂದ ಬೆಂಬಲ ದೊರಕಿದೆ
ನಟಿ ಮಿಯಾ ಖಲೀಫಾ, ಪಾಪ್ ತಾರೆ ರಿಹಾನ್ನ, ಯೂಟ್ಯೂಬ್ ತಾರೆ ಅಮಂಡಾ ಕೆರ್ನಿ, ಪರಿಸರ ಹೋರಾಟಗಾರ್ತಿ ಗ್ರೆಟಾ ಥೆನ್ಬರ್ಗ್, ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸಂಬಂಧಿ ಮೀನಾ ಹ್ಯಾರಿಸ್ ಇನ್ನೂ ಹಲವಾರು ಅಂತರಾಷ್ಟ್ರಿಯ ಸೆಲೆಬ್ರಿಟಿಗಳು ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.