Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಲಿವುಡ್ ಚಿತ್ರದಲ್ಲಿ ಮಿಂಚುತ್ತಿರುವ ಮಲೆನಾಡ ಪ್ರತಿಭೆ
ಹಾಲಿವುಡ್ ಚಿತ್ರರಂಗದಲ್ಲಿ ಮಲೆನಾಡಿನ ಪ್ರತಿಭೆ ಪೂರ್ವ ಹೊಸ ಸಂಚಲನ ಮೂಡಿಸುತ್ತಿದ್ದಾರೆ. ಮೂಲತಃ ಶಿವಮೊಗ್ಗದ ಗೋಪಾಳದ ಶಿವಕುಮಾರ್ ಹಾಗೂ ವೀಣಾ ದಂಪತಿಯ ಪುತ್ರರಾಗಿರುವ ಪೂರ್ವ ಪ್ರಸ್ತುತ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ.
ಲಾಸ್ ಎಂಜಲೀಸ್ ನಲ್ಲಿ ಎಂಎಫ್ ಎ ಇನ್ ಮಾಸ್ಟರ್ ಕೋರ್ಸ್ ಮುಗಿಸಿರುವ ಪೂರ್ವ ಇದೀಗ ಹಾಲಿವುಡ್ ನ ಹೊಸ ಚಿತ್ರದ ನಾಯಕ ನಟರಾಗಿ ನಟಿಸುತ್ತಿದ್ದಾರೆ.
ಬಾಲಿವುಡ್ನಲ್ಲಿ ಮಹಾಭಾರತ ಫಿಕ್ಸ್: ದ್ರೌಪದಿ ಪಾತ್ರದಲ್ಲಿ ಬೆಂಗಳೂರು ಹುಡುಗಿ
ಆರಂಭದ ದಿನಗಳಿಂದಲೂ ಹಾಲಿವುಡ್ ಚಿತ್ರರಂಗದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಪೂರ್ವ, ಲಾಸ್ ಎಂಜಲೀಸ್ ನಲ್ಲಿ ಎಂಎಫ್ ಎ ಕೋರ್ಸ್ ಮಾಡಿ ಈಗಾಗಲೇ ಹಾಲಿವುಡ್ ನಲ್ಲಿ ಗುರುತಿಸಿಕೊಂಡಿದ್ದಾರೆ.
ಇದೀಗ 'ದ ಬಿಗ್ ರಾಂಟ್' ಚಿತ್ರದಲ್ಲಿ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿರುವುದು ಮಲೆನಾಡಿನ ಹೆಮ್ಮೆ. ಈಗಾಗಲೇ 'ದ ಬಿಗ್ ರಾಂಟ್' ಚಿತ್ರದ ಶೇಕಡಾ 70 ರಷ್ಟು ಚಿತ್ರೀಕರಣ ಮುಗಿದಿದ್ದು ಮುಂದಿನ ತಿಂಗಳು ಲಾಸ್ ಎಂಜಲೀಸ್ ನಲ್ಲಿ ನಡೆಯಲಿರುವ ಫಿಲ್ಮಂ ಫೆಸ್ಟಿವಲ್ ನಲ್ಲಿ ಈ ಚಿತ್ರ ಬಿಡುಗಡೆಗೊಳ್ಳಲಿದೆ.
'ಅವತಾರ್' ಚಿತ್ರಕ್ಕೆ ಟೈಟಲ್ ಕೊಟ್ಟಿದ್ದೇ ಈ ಬಾಲಿವುಡ್ ನಟನಂತೆ.!
ಹಾಲಿವುಡ್ ಚಿತ್ರರಂಗದಲ್ಲಿ ನಾಯಕ ನಟನಾಗಿ ಪ್ರತಿಭೆ ಹೊರಹಾಕಿರುವ ಮೊದಲ ಮಲೆನಾಡಿಗ ಎಂಬ ಕೀರ್ತಿಗೂ ಪೂರ್ವ ಪಾತ್ರರಾಗಿದ್ದಾರೆ.
ಈಗಾಗಲೇ ಹಾಲಿವುಡ್ ನ ಹಲವು ಕಿರುಚಿತ್ರಗಳು, ಜಾಹಿರಾತುಗಳಲ್ಲಿ ಅಭಿನಯಿಸಿರುವ ಅನುಭವ ಹೊಂದಿರುವ ಪೂರ್ವ ಇದೀಗ ಹಾಲಿವುಡ್ ಹೀರೋ ಆಗಿ ಅಭಿನಯಿಸುತ್ತಿದ್ದಾರೆ.