Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೋದಿಯನ್ನು ಭೇಟಿಯಾಗಲು ಹೊರಟ 'ಬಿಗ್ ಬಾಸ್' ಸ್ಪರ್ಧಿ ಸಮೀರ್ ಆಚಾರ್ಯ! ಕಾರಣ ಏನು.?
Recommended Video
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮ ಗೆದ್ದು ಕರ್ನಾಟಕದಲ್ಲಿ ದೊಡ್ಡ ವಿದ್ಯಾಕ್ರಾಂತಿ ಮಾಡಬೇಕು ಎಂಬ ಮಹದಾಸೆ ಹೊಂದಿದ್ದವರು ಹುಬ್ಬಳ್ಳಿಯ ಸಮೀರಾಚಾರ್ಯ. ಆದ್ರೆ, ಸಮೀರಾಚಾರ್ಯ ಕನಸು ಈಡೇರಲಿಲ್ಲ.
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಟಾಪ್ 5 ಹಂತಕ್ಕೆ ಏರಲು ಇನ್ನೊಂದೇ ಹೆಜ್ಜೆ ಬಾಕಿ ಇರುವಾಗ ಸಮೀರಾಚಾರ್ಯ ಮುಗ್ಗರಿಸಿಬಿದ್ದರು. ನೂರು ದಿನಗಳ ಕಾಲ 'ಬಿಗ್ ಬಾಸ್' ಮನೆಯೊಳಗೆ ಇದ್ದ ಸಮೀರಾಚಾರ್ಯ ರಾತ್ರೋ ರಾತ್ರಿ ಸೂಟ್ ಕೇಸ್ ಹಿಡಿದು ಹೊರ ನಡೆದರು.
'ಬಿಗ್ ಬಾಸ್' ಮನೆಯಲ್ಲಿ ಸಮೀರಾಚಾರ್ಯ ಕನಸಿಗೆ ಪ್ರೋತ್ಸಾಹ ಸಿಗದೆ ಇರಬಹುದು. ಆದ್ರೆ, ಅವರ ಹೋರಾಟ ಮಾತ್ರ ನಿಂತಿಲ್ಲ. ಮಹದಾಯಿ ವಿವಾದಕ್ಕೆ ಅಂತ್ಯ ಹಾಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಲು ಸದ್ಯದಲ್ಲೇ ದೆಹಲಿಗೆ ತೆರಳುತ್ತಿದ್ದಾರಂತೆ ಸಮೀರಾಚಾರ್ಯ. ಮುಂದೆ ಓದಿರಿ...
'ಬಿಗ್ ಬಾಸ್' ಮನೆಗೆ ಬಂದಿದ್ದೇ ಈ ಉದ್ದೇಶಕ್ಕೆ
'ಬಿಗ್ ಬಾಸ್' ಮನೆಗೆ ಸಮೀರಾಚಾರ್ಯ ಬಂದ ಮುಖ್ಯ ಉದ್ದೇಶವೇ ಮಹದಾಯಿ ಹೋರಾಟ. ''ನನ್ನ ಮುಖ್ಯ ಉದ್ದೇಶ ಮಹದಾಯಿ ಹೋರಾಟ. ಅನೇಕ ಬಾರಿ ಈ ವಿಚಾರವನ್ನು 'ಬಿಗ್ ಬಾಸ್' ಮನೆಯೊಳಗೆ ಪ್ರಸೆಂಟ್ ಮಾಡಿದ್ದೆ. ನನ್ನ ನಿಲುವು ರೈತ ಪರ. ಮೋದಿ ಬೆಳಗಾವಿಗೆ ಬಂದಾಗ ರೈತರನ್ನು ಭೇಟಿಯಾಗಲು ಬಿಡಲಿಲ್ಲ. ನಾನು ರೈತರ ಮಗ ಅಲ್ಲ. ಆದರೆ ಅವರ ಕಷ್ಟವನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ಅವರ ಬಲಿದಾನ ನನ್ನ ಕಣ್ಣಲ್ಲಿ ನೀರು ತರಿಸುತ್ತದೆ'' ಎನ್ನುತ್ತಾರೆ ಸಮೀರಾಚಾರ್ಯ.
ಸಮೀರಾಚಾರ್ಯ ಅವರಿಗೆ ಬೇಸರ ಆಗಿತ್ತು
'ಬಿಗ್ ಬಾಸ್' ನಲ್ಲಿ ಫ್ಯಾಷನ್ ಶೋ ನಡೆಸಿದಾಗ ನಾನು ಮಹದಾಯಿ ಬಗ್ಗೆ ಮಾತನಾಡಿದ್ದೆ. ಆದರೆ ನನಗೆ ಕಡಿಮೆ ಅಂಕ ಸಿಕ್ಕಿತು. ನನಗೆ ಆಗ ಬೇಸರವೆನಿಸಿತು. ಯಾರು ಕೂಡ ನನಗೆ ಸಪೋರ್ಟ್ ಮಾಡಲಿಲ್ಲ'' ಎನ್ನುತ್ತಾರೆ ಸಮೀರಾಚಾರ್ಯ.
ಮೋದಿ ಭೇಟಿ ಮಾಡಲು ಹೊರಟ ಸಮೀರಾಚಾರ್ಯ
ಮಹದಾಯಿ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ಮಾಡಲು ಸಮೀರಾಚಾರ್ಯ ದೆಹಲಿಗೆ ಹೊರಟಿದ್ದಾರೆ. ''ಮುಂದಿನ ತಿಂಗಳು ಮೋದಿಯವರನ್ನು ಭೇಟಿಯಾಗಲು ಮಹದಾಯಿ ವಿಚಾರವಾಗಿ ಅವರೊಂದಿಗೆ ಮಾತನಾಡಲು ದಿನಾಂಕ ನಿಗದಿ ಮಾಡುತ್ತಿದ್ದೇನೆ'' ಅಂತಾರೆ ಸಮೀರಾಚಾರ್ಯ.
ಮತ್ತೆ ರಿಯಾಲಿಟಿ ಶೋಗಳಲ್ಲಿ ಸಮೀರಾಚಾರ್ಯ
ಸದ್ಯ 4 ರಿಯಾಲಿಟಿ ಶೋಗಳಿಗೆ ಸಮೀರಾಚಾರ್ಯ ಒಪ್ಪಿಗೆ ನೀಡಿದ್ದಾರಂತೆ. ರಾಮಾಯಣ, ಮಹಾಭಾರತ ವಿಚಾರವಾಗಿ ರಿಸರ್ಚ್ ನಡೆಸಲು ತಯಾರಿ ಸಹ ನಡೆಸುತ್ತಿದ್ದಾರಂತೆ.