ಸುನೀಲ್ ಕುಮಾರ್ ದೇಸಾಯಿ ಸಂದರ್ಶನ: ನಾನು, ನನ್ನ ಬರ್ತಡೇ ಮತ್ತು 'ಉದ್ಘರ್ಷ'

ತರ್ಕ, ನಿಷ್ಕರ್ಷ, ಸ್ಪರ್ಶ, ಸಂಘರ್ಷ ಸೇರಿದಂತೆ ಟೈಟಲ್ ನಿಂದಲೇ ಕುತೂಹಲ ಮೂಡಿಸುವ ಮಾಸ್ಟರ್ ಮೈಂಡ್ ಡೈರೆಕ್ಟರ್ ಎಂದೇ ಖ್ಯಾತಿ ಪಡೆದವರು ಸುನೀಲ್ ಕುಮಾರ್ ದೇಸಾಯಿ. ಇದೀಗ 'ಉದ್ಘರ್ಷ' ಮೂಲಕ ಕುತೂಹಲದ ಕಿಚ್ಚು ಹಚ್ಚಿರುವ ಅವರು, ತಮಿಳಿನಲ್ಲಿ 'ಉಚ್ಚಕಟ್ಟಂ' ಆಗಿ ತೆರೆಗೆ ತರುವ ತಯಾರಿಯಲ್ಲಿದ್ದಾರೆ.

ದೇಸಾಯಿ ನಿರ್ದೇಶನದ 'ಉದ್ಘರ್ಷ' ಈಗಾಗಲೇ ಸಾಕಷ್ಟು ಸಂಚಲನ ಮೂಡಿಸಿದೆ. ಕನ್ನಡ ಸೇರಿದಂತೆ ತಮಿಳು, ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಸಿನಿಮಾವನ್ನು ಇದೇ ವರ್ಷ ತೆರೆಗೆ ತರುವುದು 'ಉದ್ಘರ್ಷ' ತಂಡದ ಆಲೋಚನೆಯಾಗಿತ್ತು. ಕಾರಣಾಂತರಗಳಿಂದ ಆಗಲಿಲ್ಲ. ಆದ್ರೀಗ, ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದೇಸಾಯಿ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಹೌದು, ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಹೊಸ ಚಿತ್ರದ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ. ಮುಂದೆ ಓದಿ.....

ಹುಟ್ಟುಹಬ್ಬದ ಆಚರಣೆ ಹೇಗಿದೆ, ಟ್ರೈಲರ್ ಬರುತ್ತಾ.?

ಹುಟ್ಟುಹಬ್ಬದ ಆಚರಣೆ ಹೇಗಿದೆ, ಟ್ರೈಲರ್ ಬರುತ್ತಾ.?

'ನಾನು ಮೊದಲಿನಿಂದಲೂ ಆಡಂಬರದ ಹುಟ್ಟುಹಬ್ಬ ಆಚರಿಸಿಕೊಂಡವನಲ್ಲ. 'ಉದ್ಘರ್ಷ' ಚಿತ್ರತಂಡದವರೆಲ್ಲಾ 'ಬರ್ತಡೇಗೆ ಏನಾದ್ರೂ ಮಾಡೋಣ ಸಾರ್' ಅಂದ್ರು. ನಾನೇ ಅವೆಲ್ಲಾ ಬೇಡ ಅಂತ ಸುಮ್ಮನಾಗಿಸಿದೆ. ಎಲ್ಲರೂ ಸೇರಿಕೊಂಡು ಸಿಂಪಲ್ಲಾಗಿ ಸಿಹಿ ತಿಂದರೆ ಅದಕ್ಕಿಂತ ಆಚರಣೆ ಮತ್ತೊಂದಿಲ್ಲ. ಹೀಗಾಗಿ ಯಾವುದೇ ಟ್ರೇಲರ್, ಟೀಸರ್, ಪೋಸ್ಟರ್ ಬಿಡುತ್ತಿಲ್ಲ' - ಸುನೀಲ್ ಕುಮಾರ್ ದೇಸಾಯಿ

ನವೆಂಬರ್ ನಿಮ್ಮ ತಂಡಕ್ಕೆ ಬರ್ತಡೇ ಮಂಥ್ ಅನಿಸುತ್ತೆ.?

ನವೆಂಬರ್ ನಿಮ್ಮ ತಂಡಕ್ಕೆ ಬರ್ತಡೇ ಮಂಥ್ ಅನಿಸುತ್ತೆ.?

'ಹೌದು, ಹೆಚ್ಚಾಗಿ ಈ ತಿಂಗಳಲ್ಲಿ ನಮ್ಮ ತಂಡದ ನಾಲ್ಕೈದು ಜನರ ಹುಟ್ಟುಹಬ್ಬ ನವೆಂಬರ್‍ ನಲ್ಲೇ ಬಂದಿರೋದು ವಿಶೇಷ. ನವೆಂಬರ್ 19ರಂದು ನಮ್ಮ ಚಿತ್ರದ ಸಂಗೀತ ನಿರ್ದೇಶಕ ಸಂಜೋಯ್ ಚೌಧರಿ ಅವರ ಹುಟ್ಟುಹಬ್ಬವಿತ್ತು. ಹಾಗೆಯೇ ನವೆಂಬರ್ 20ರಂದು ಚಿತ್ರದ ಪ್ರಮುಖ ಪಾತ್ರಧಾರಿ ಧನ್ಸಿಕಾರ ಬರ್ತಡೇ ಇತ್ತು. ಅವರಿಗೆ ನಮ್ಮ ತಂಡದಿಂದ ಶುಭ ಕೋರಿದ್ದೇವೆ. ಈಗ ನನ್ನ ಸರದಿ. ನನ್ನ ತಂಡದವರದ್ದು ಇದೇ ತಿಂಗಳಲ್ಲಿ ಹುಟ್ಟುಹಬ್ಬವಿದೆ. ಹೀಗಾಗಿ ಒಂಥರಾ ಖುಷಿಯಿದೆ'

ಈಗ 'ಉದ್ಘರ್ಷ' ಯಾವ ಹಂತದಲ್ಲಿದೆ.?

ಈಗ 'ಉದ್ಘರ್ಷ' ಯಾವ ಹಂತದಲ್ಲಿದೆ.?

'ಸದ್ಯ ಡಿಟಿಎಸ್ ಅಂತಿಮ ಹಂತದಲ್ಲಿದೆ. ಇನ್ನೆರಡು ವಾರದಲ್ಲಿ ಫಸ್ಟ್ ಕಾಪಿ ಕೈ ಸೇರಲಿದೆ. ಅಲ್ಲಿಗೆ ಕನ್ನಡದ 'ಉದ್ಘರ್ಷ' ಸೆನ್ಸಾರ್ ಹಂತ ತಲುಪುತ್ತದೆ. ಅದಾಗಿ ಒಂದೆರಡು ವಾರದ ಅಂತರದಲ್ಲಿ ತಮಿಳು ಮತ್ತು ತೆಲುಗು ವರ್ಷನ್ ಸಿದ್ಧಗೊಳ್ಳಲಿದೆ. ಡಿಸೆಂಬರ್ ಹೊತ್ತಿಗೆ ಸಿನಿಮಾ ಸಂಪೂರ್ಣವಾಗಿ ರೆಡಿಯಾಗಿರುತ್ತದೆ. ಜನವರಿಯಲ್ಲಿ ಸರಿಯಾದ ಸಮಯ ನೋಡಿಕೊಂಡು ಬಿಡುಗಡೆ ಮಾಡಲು ನಮ್ಮ ತಂಡ ಹಾಗೂ ವಿತರಕರ ಜೊತೆ ಮಾತುಕತೆಯಾಗಿದೆ'

ದೊಡ್ಡ ಕಲಾವಿದರ ಬಳಗ, ಅದ್ಧೂರಿ ಬಜೆಟ್ ಹಿಂದಿನ ಗುಟ್ಟೇನು.?

ದೊಡ್ಡ ಕಲಾವಿದರ ಬಳಗ, ಅದ್ಧೂರಿ ಬಜೆಟ್ ಹಿಂದಿನ ಗುಟ್ಟೇನು.?

'ಎಲ್ಲರೂ ಚಿತ್ರದ ತಾರಾಬಳಗ ನೋಡಿ ನಿಬ್ಬೆರಗಾಗಿ ನೋಡಿದ್ದುಂಟು. ನನ್ನ ಕಥೆಗೆ ತಕ್ಕ ಕಲಾವಿದರನ್ನ ಆರಿಸಿಕೊಂಡಿದ್ದೇನೆ. ಬಜೆಟ್ ಬಗ್ಗೆ ನಿರ್ಮಾಪಕರು ತಲೆ ಕೆಡಿಸಿಕೊಂಡಿಲ್ಲ. ಸಿನಿಮಾಗೆ ಏನು ಬೇಕೋ ಅದನ್ನೆಲ್ಲಾ ಧಾರಾಳವಾಗಿ ಬಳಸುವ ಸ್ವಾತಂತ್ರ ಕೊಟ್ಟಿದ್ದಾರೆ. ಹಾಗಂತ ದುಂದುವೆಚ್ಚ ಮಾಡೋಕೆ ನನಗೆ ಇಷ್ಟವಿಲ್ಲ. ಸ್ಕ್ರಿಪ್ಟ್‍ನಲ್ಲಿ ಡಿಸೈನ್ ಮಾಡಿದಂತೆಯೇ ಸಿನಿಮಾ ಮಾಡಿ ಮುಗಿಸಿದ ಖುಷಿ ಹಾಗೂ ತೃಪ್ತಿ ನನಗಿದೆ'

ಹೇಗಿತ್ತು 'ಉದ್ಘರ್ಷ' ಶೂಟಿಂಗ್ ಅನುಭವ.?

ಹೇಗಿತ್ತು 'ಉದ್ಘರ್ಷ' ಶೂಟಿಂಗ್ ಅನುಭವ.?

'ಒಟ್ಟಾರೆಯಾಗಿ 75 ದಿನಗಳ ಕಾಲ ಶೂಟಿಂಗ್ ನಡೆದಿದೆ. ಹೈದ್ರಾಬಾದ್, ಕೇರಳ, ಮಡಿಕೇರಿ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಎಲ್ಲೂ ಕಾಂಪ್ರೋಮೈಸ್ ಆಗದೇ ಸಿನಿಮಾ ಮಾಡಿದ್ದೀವಿ. ತಾರಾಗಣದ ಜೊತೆಗೆ ತಾಂತ್ರಿಕವಾಗಿಯೂ ಗಟ್ಟಿಯಾಗಿದೆ. ತುಂಬಾ ವರ್ಷಗಳ ಬಳಿಕ ನನ್ನ ಡೈರೆಕ್ಷನ್ ಟೀಂನಲ್ಲಿ ಒಳ್ಳೊಳ್ಳೆ ಅಸೋಸಿಯೇಟ್ಸ್ ಸಿಕ್ಕಿದ್ದಾರೆ. ಮುರಳಿ, ರಂಗ, ಅರ್ಜುನ್ ಸೇರಿದಂತೆ ಒಂಭತ್ತು ಜನರ ತಂಡ ನನ್ನ ಕೆಲಸವನ್ನ ಸರಾಗವಾಗಿ ಮಾಡಿ ಔಟ್‍ಪುಟ್ ಚೆನ್ನಾಗಿ ಬರಲು ಸಹಕರಿಸಿದ್ದಾರೆ' ಎಂದರು ದೇಸಾಯಿ ಖುಷಿ ವ್ಯಕ್ತಪಡಿಸಿದರು.

ಜನವರಿಯಲ್ಲಿ ಉದ್ಘರ್ಷ ಆಗಮನ

ಜನವರಿಯಲ್ಲಿ ಉದ್ಘರ್ಷ ಆಗಮನ

ಆರ್.ದೇವರಾಜ್ ನಿರ್ಮಾಣವಿರುವ ಈ ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್, ಧನ್ಸಿಕಾ, ತಾನ್ಯ ಹೋಪ್, ಕಬೀರ್ ಸಿಂಗ್ ದುಹಾನ್, ಬಾಹುಬಲಿ ಖ್ಯಾತಿಯ ಪ್ರಭಾಕರ್, ಶ್ರದ್ಧಾ ದಾಸ್, ಹರ್ಷಿಕಾ ಪೂಣಚ್ಚ ಸೇರಿದಂತೆ ಸಾಕಷ್ಟು ಕಲಾವಿದರಿದ್ದಾರೆ. ಜನವರಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

More from Filmibeat

English summary
Kannada Director Sunil Kumar Desai celebrates his 63rd Birthday today (November 22nd). Desai's new movie udgarsha will release on january. here is the interview of sunil kumar desai.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X