Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಓದಬೇಕಿದ್ದ ಕಾಲೇಜ್ ಗೆ ಅತಿಥಿಯಾಗಿ ಹೋಗಿದ್ದ 'ಬಿಗ್ ಬಾಸ್' ಜಯಶ್ರೀ
ಕನ್ನಡದ 'ಬಿಗ್ ಬಾಸ್' ಕಾರ್ಯಕ್ರಮದಿಂದ ಏಕ್ದಂ ಜನಪ್ರಿಯತೆ ಪಡೆದವರಲ್ಲಿ ಜಯಶ್ರೀ ರಾಮಯ್ಯ ಕೂಡ ಒಬ್ಬರು. ಮೂಲತಃ ಡ್ಯಾನ್ಸರ್ ಆಗಿರುವ ಜಯಶ್ರೀ ರಾಮಯ್ಯ 'ಬಿಗ್ ಬಾಸ್' ಕಾರ್ಯಕ್ರಮದ ಬಳಿಕ ಸ್ಯಾಂಡಲ್ ವುಡ್ಡಿಗೂ ಕಾಲಿಟ್ಟರು.
ಇಮ್ರಾನ್ ಸರ್ದಾರಿಯಾ ರವರ 'ಉಪ್ಪು ಹುಳಿ ಖಾರ' ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಜಯಶ್ರೀ ರಾಮಯ್ಯ ಸದ್ಯ ಕೆಲವು ಚಿತ್ರಗಳ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ.
ಈ ನಡುವೆ ನಿಮ್ಮ 'ಫಿಲ್ಮಿಬೀಟ್ ಕನ್ನಡ'ದ ಸ್ಪೆಷಲ್ ಪ್ರೋಗ್ರಾಂ 'ಸಖತ್ ಶುಕ್ರವಾರ' ಕಾರ್ಯಕ್ರಮದಲ್ಲಿ ಜಯಶ್ರೀ ರಾಮಯ್ಯ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ತಮ್ಮ ಕಾಲೇಜ್ ಲೈಫ್ ಬಗ್ಗೆಯೂ ಜಯಶ್ರೀ ಮಾತನಾಡಿದ್ದಾರೆ.
'Rapid ಫೈರ್' ಪ್ರಶ್ನೆಗಳಿಗೆ ಬಿಗ್ ಬಾಸ್ ಜಯಶ್ರೀ ಕೊಟ್ಟ ನೇರ ಉತ್ತರ
ಡಿಗ್ರಿ ಓದುವಾಗ ಕೊನೆಯ ಸೆಮಿಸ್ಟರ್ ನಲ್ಲಿ ಪಾಸ್ ಆಗುವೆ ಎಂಬ ನಂಬಿಕೆ ಮೇಲೆ ಬಿ.ಎಂ.ಎಸ್ ಕಾಲೇಜ್ ನಲ್ಲಿ ಎಂ.ಎ ಮಾಡಲು ಜಯಶ್ರೀ ರಾಮಯ್ಯ ಸೀಟ್ ಬ್ಲಾಕ್ ಮಾಡಿಸಿದ್ದರಂತೆ.
ಆದ್ರೆ, ದುರಾದೃಷ್ಟವಶಾತ್ ಕೊನೆಯ ಸೆಮಿಸ್ಟರ್ ನಲ್ಲಿ ಜಯಶ್ರೀ ರಾಮಯ್ಯ ಪಾಸ್ ಆಗಲಿಲ್ಲ. ಹೀಗಾಗಿ ಅವರು ಬಿ.ಎಂ.ಎಸ್ ಕಾಲೇಜ್ ಸೇರಲು ಆಗಲಿಲ್ಲ. ಇಂಟ್ರೆಸ್ಟಿಂಗ್ ಅಂದ್ರೆ, 'ಬಿಗ್ ಬಾಸ್' ಮೂಲಕ ಖ್ಯಾತಿ ಪಡೆದ ಬಳಿಕ ಅದೇ ಜಯಶ್ರೀ ಬಿ.ಎಂ.ಎಸ್ ಕಾಲೇಜಿಗೆ ಮುಖ್ಯ ಅತಿಥಿಯಾಗಿ ಹೋದರಂತೆ.
'ಸಖತ್ ಶುಕ್ರವಾರ' ಕಾರ್ಯಕ್ರಮದ ಮೂರನೇ ಭಾಗ ಇಲ್ಲಿದೆ, ನೋಡಿ...