Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಂಗಶಂಕರ'ದಲ್ಲಿ ಕಾಫಿ ಕುಡಿಯುತ್ತಿದ್ದ ಹುಡುಗಿ ಅದೇ ದಿನ ನಟಿಯಾಗಿ ಬಿಟ್ಟಳು
ಅವಕಾಶ ಯಾವಾಗ ಒಲಿದು ಬರುತ್ತದೆ ಎಂದು ಹೇಳಲು ಆಗುವುದಿಲ್ಲ. ಆದರೆ ಅವಕಾಶ ನಮ್ಮ ಬಳಿ ಬರುವ ವೇಳೆಗೆ ನಾನು ಪ್ರತಿಭೆ ಜೊತೆಗೆ ಸಿದ್ಧರಾಗಿ ಇರಬೇಕು. ಆಗ ಮಾತ್ರ ಯಶಸ್ಸು ಸಿಗುತ್ತದೆ.
ಇದೇ ರೀತಿ ಕನ್ನಡದ ನಟಿ ನಿಖಿಲಾ ಸುಮನ್ ಅವರಿಗೆ ಕೂಡ ಇದ್ದಕ್ಕಿದ್ದ ಹಾಗೆ ಒಂದು ಅವಕಾಶ ಸಿಕ್ಕಿತು. ನಾಟಕಗಳ ಮೂಲಕ ಅಭಿನಯವನ್ನು ಕರಗತ ಮಾಡಿಕೊಂಡಿದ್ದ ಇವರು ಮೊದಲ ಪ್ರಯತ್ನದಲ್ಲಿಯೇ ಅವಕಾಶ ಪಡೆದರು.
ಮಾನಸ ಜೋಷಿಯ ಮೊದಲ ಸೆಲೆಬ್ರಿಟಿ ಕ್ರಶ್ ಈ ಬಾಲಿವುಡ್ ನಟ
ಅಂದಹಾಗೆ, 'ಶ್ರೀನಿವಾಸ ಕಲ್ಯಾಣ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ನಟಿ ನಿಖಿಲಾ ಸುಮನ್ ಸದ್ಯ ಕಿರುತೆರೆಯಲ್ಲಿ ಜನಪ್ರಿಯರಾಗಿದ್ದಾರೆ. 'ಶನಿ' ಧಾರಾವಾಹಿ ಮೂಲಕ ನಿಖಿಲಾ ಮನೆ ಮಾತಾಗಿದ್ದಾರೆ.
ತಮ್ಮ ಮೊದಲ ಸಿನಿಮಾದ ಬಗ್ಗೆ ಮಾತನಾಡಿರುವ ಅವರು ''ಒಮ್ಮೆ ನಾನು ರಂಗಶಂಕರದಲ್ಲಿ ಕಾಫಿ ಕುಡಿಯುತ್ತ ಇದ್ದೆ. ಶಂಕರ್ ಗಣೇಶ್ ಅಂತ ನನ್ನ ಫ್ರೆಂಡ್ ಬಂದು ಇದ್ದಕ್ಕಿದ್ದ ಹಾಗೆ ಒಂದು ಸ್ಟೂಡಿಯೊಗೆ ಕರೆದುಕೊಂಡು ಹೋದರು. ಅಲ್ಲಿಯೇ 'ಶ್ರೀನಿವಾಸ ಕಲ್ಯಾಣ' ಚಿತ್ರದ ಆಡಿಷನ್ ಕೊಟ್ಟೆ. ನನಗೆ ಆಡಿಷನ್ ಗಳನ್ನು ಕೊಡುವುದು ಇಷ್ಟ ಇಲ್ಲ. ಆದರೆ, ಅಂದು ನನ್ನ ಫ್ರೆಂಡ್ ಒತ್ತಾಯ ಮಾಡಿದರು. ಹೀಗೆ ಚಿತ್ರರಂಗಕ್ಕೆ ಬಂದೆ'' ಎಂದು ತಾವು ಆಯ್ಕೆ ಆದ ಕಥೆಯನ್ನು ಹೇಳಿದ್ದಾರೆ.
ಅಂದಹಾಗೆ, ನಟಿ ನಿಖಿಲಾ ಸುಮನ್ ಸಂದರ್ಶನದ ಪೂರ್ಣ ವಿಡಿಯೋ ಇಲ್ಲಿದೆ ವೀಕ್ಷಿಸಿ.