twitter
    For Quick Alerts
    ALLOW NOTIFICATIONS  
    For Daily Alerts

    'ಕಥಾ ಸಂಗಮದ ಒಳಗಿದೆ ನನ್ನ ಸಂಭ್ರಮ':– ಕಿರಣ್ ರಾಜ್

    |

    ಮೂಲತಃ ಕಾಸರಗೋಡಿನವರಾದ ಕಿರಣ್ ರಾಜ್ ಸಿನಿಮಾ ನಟನಾಗುವ ಕನಸು ಕಂಡವರು. ಆರಂಭದಲ್ಲಿ ಸಹಾಯಕ ನಿರ್ದೇಶಕನಾಗಿಯೂ ಅವಕಾಶಗಳು ಸಿಕ್ಕಿರಲಿಲ್ಲ. ಬಳಿಕ ಊರಿನಲ್ಲೇ ಬೀದಿ ನಾಟಕ ಮೊದಲಾದವುಗಳಲ್ಲಿ ತೊಡಗಿಸಿಕೊಂಡಿದ್ದರು. ಸ್ನೇಹಿತರೊಂದಿಗೆ ಸೇರಿ ತಾವೇ ಕಾವಳ' ಎನ್ನುವ ಕತೆ ಬರೆದು ಟೆಲಿಫಿಲ್ಮ್ ಮಾಡಿದ್ದರು.

    ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ಉನ್ನತ ಶಿಕ್ಷಣಕ್ಕಾಗಿ ನಗರ ಪ್ರವೇಶ ಮಾಡಿದಾಗ ಅವರಿಗೆ ಎದುರಾಗುವ ಸಮಸ್ಯೆಗಳೇನು ಎನ್ನುವುದೇ ಚಿತ್ರದ ಕತೆಯಾಗಿತ್ತು. ಅದು ವಿವಿಧ ಶಾಲೆಗಳಲ್ಲಿ ನೂರರಷ್ಟು ಪ್ರದರ್ಶನ ಕಂಡಿತು. ಬಳಿಕ ಕಬ್ಬಿನ ಹಾಲು' ಎನ್ನುವ ಕಿರುಚಿತ್ರ ಮಾಡಿದರು. ಅದು ಅವರನ್ನು ಬೆಂಗಳೂರು ತನಕ ಕರೆದು ತಂದಿತು.

    ಹೊಸ ಪ್ರಯೋಗಕ್ಕೆ ಮುಂದಾದ ಕನ್ನಡದ ಈ ನಟನನ್ನು ಗುರುತಿಸಿಹೊಸ ಪ್ರಯೋಗಕ್ಕೆ ಮುಂದಾದ ಕನ್ನಡದ ಈ ನಟನನ್ನು ಗುರುತಿಸಿ

    ಈಗ ರಿಷಭ್ ಶೆಟ್ಟಿಯ ಕನಸಿನ ಚಿತ್ರ ಕಥಾ ಸಂಗಮ' ಎನ್ನುವ 7ಚಿತ್ರಗಳ ಗುಚ್ಛ ದಲ್ಲಿ ಸಾಗರ ಸಂಗಮ' ಎನ್ನುವ ಒಂದು ಚಿತ್ರವನ್ನು ಖುದ್ದಾಗಿ ನಿರ್ದೇಶಿಸುವ ತನಕ ಬೆಳೆದು ನಿಂತಿದ್ದಾರೆ. ಅವರ ಈ ಯಶಸ್ಸಿನ ಪಯಣದ ಬಗ್ಗೆ ಫಿಲ್ಮಿಬೀಟ್ ಜತೆಗೆ ವಿಶೇಷ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

     `ಕಬ್ಬಿನ ಹಾಲು’ ಕಿರುಚಿತ್ರ ನಿಮ್ಮನ್ನು ಬೆಂಗಳೂರಿಗನನ್ನಾಗಿಸಿದ ಬಗೆ ಹೇಗೆ?

    `ಕಬ್ಬಿನ ಹಾಲು’ ಕಿರುಚಿತ್ರ ನಿಮ್ಮನ್ನು ಬೆಂಗಳೂರಿಗನನ್ನಾಗಿಸಿದ ಬಗೆ ಹೇಗೆ?

    ಡಾ.ವಿಷ್ಣುವರ್ಧನ್ ಅವರ ಮೂರನೇ ಪುಣ್ಯತಿಥಿಯಾರ್ಥ ಬೆಂಗಳೂರಿನಲ್ಲಿ ಕಿರುಚಿತ್ರ ಸ್ಪರ್ಧೆ ಏರ್ಪಡಿಸಲಾಗಿತ್ತು. ಅದರಲ್ಲಿ ನನ್ನ `ಕಬ್ಬಿನ ಹಾಲು' ಕಿರುಚಿತ್ರಕ್ಕೆ ಪ್ರಥಮ ಸ್ಥಾನ ದೊರಕಿತ್ತು. ಅದರ ತೀರ್ಪುಗಾರರರಲ್ಲೊಬ್ಬರಾಗಿದ್ದ ನಿರ್ದೇಶಕ ಜಯತೀರ್ಥ ಅವರು, ತಮ್ಮ `ಟೋನಿ' ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗುವಂತೆ ನನ್ನನ್ನು ಆಹ್ವಾನಿಸಿದರು. ಅವರ ಜತೆಗಿದ್ದ ನನ್ನನ್ನು ಪರಿಚಯ ಮಾಡಿಕೊಂಡ ಇಮ್ರಾನ್ ಸರ್ದಾರಿಯ ಅವರು ನನ್ನನ್ನು ತಮ್ಮ `ಎಂದೆಂದಿಗೂ' ಚಿತ್ರಕ್ಕೆ ಅಸಿಸ್ಟೆಂಟ್ ಆಗಿ ನೇಮಿಸಿಕೊಂಡರು. ಆ ಚಿತ್ರದ ಬಳಿಕ ಅದರ ನಿರ್ಮಾಪಕ ಎಸ್.ವಿ ಬಾಬು ಅವರು ನಿರ್ಮಿಸಿದ ಮತ್ತೊಂದು ಚಿತ್ರ `ರಿಕ್ಕಿ'ಯಲ್ಲಿ ನಿರ್ದೇಶಕ ರಿಷಭ್ ಸರ್ ಮೂಲಕ ನನಗೆ ಅವಕಾಶ ಮಾಡಿಕೊಟ್ಟರು. ಹಾಗೆ ಬೆಂಗಳೂರೇ ತವರಾಯಿತು!

     ಅಸೋಸಿಯೇಟ್ ನಿರ್ದೇಶಕರಾಗಿದ್ದ ನೀವು ಕಥಾ ಸಂಗಮದ ಮೂಲಕ ನಿರ್ದೇಶಕರಾದ ಬಗ್ಗೆ ಹೇಳಿ

    ಅಸೋಸಿಯೇಟ್ ನಿರ್ದೇಶಕರಾಗಿದ್ದ ನೀವು ಕಥಾ ಸಂಗಮದ ಮೂಲಕ ನಿರ್ದೇಶಕರಾದ ಬಗ್ಗೆ ಹೇಳಿ

    ನಾನು ಅದಾಗಲೇ `ಉಳಿದವರು ಕಂಡಂತೆ' ಚಿತ್ರ ನೋಡಿ ರಕ್ಷಿತ್ ತಂಡದ ಫ್ಯಾನ್ ಆಗಿದ್ದೆ. ಹಾಗೆ `ರಿಕ್ಕಿ' ಮತ್ತು ಅದರ ಬಳಿಕ `ಕಿರಿಕ್ ಪಾರ್ಟಿ' ಚಿತ್ರದಲ್ಲಿ ಕೆಲಸ ಮಾಡುವ ಅವಕಾಶ ನನಗೆ ಲಭಿಸಿತು. ಹಾಗೆ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಅವರ ಬರಹಗಾರರ ತಂಡದಲ್ಲಿ ಪ್ರಮುಖ ಅಸೋಸಿಯೇಟಾಗಿ ಗುರುತಿಸಿಕೊಂಡೆ. ಅದರ ಬಳಿಕ `ಕಥಾ ಸಂಗಮ'ದ ಏಳು ಸಿನಿಮಾಗಳಲ್ಲಿ ಒಂದು ಚಿತ್ರ ಮತ್ತು ರಕ್ಷಿತ್ ಅವರ ನಾಯಕತ್ವದ `ಚಾರ್ಲಿ' ಚಿತ್ರ ನಿರ್ದೇಶಿಸುವ ಅವಕಾಶ ಲಭಿಸಿತು.

    ಪುಟ್ಟಣ್ಣ ಕಣಗಾಲ್ 'ಕಥಾ ಸಂಗಮ'ದ ಮೂಲಕ ರಿಷಬ್ ಶೆಟ್ಟಿ ಹೊಸ ಸಾಹಸಪುಟ್ಟಣ್ಣ ಕಣಗಾಲ್ 'ಕಥಾ ಸಂಗಮ'ದ ಮೂಲಕ ರಿಷಬ್ ಶೆಟ್ಟಿ ಹೊಸ ಸಾಹಸ

     `ಕಥಾ ಸಂಗಮ’ದಲ್ಲಿ ನಿಮ್ಮ ಕಿರುಚಿತ್ರವೂ ಸೇರಿಕೊಂಡಿದ್ದು ಹೇಗೆ?

    `ಕಥಾ ಸಂಗಮ’ದಲ್ಲಿ ನಿಮ್ಮ ಕಿರುಚಿತ್ರವೂ ಸೇರಿಕೊಂಡಿದ್ದು ಹೇಗೆ?

    ರಿಕ್ಕಿ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಈ ಕತೆ ಹೇಳಿದಾಗ ಅದರಲ್ಲಿನ ಎರಡು ಪಾತ್ರಗಳನ್ನು ರಕ್ಷಿತ್ ಮತ್ತು ರಿಷಭ್ ಮಾಡುವುದಾಗಿ ತೀರ್ಮಾನವಾಗಿತ್ತು. ಆದರೆ ಅದೇ ಸೆಟ್ ನಲ್ಲಿದ್ದ ಹರಿಪ್ರಿಯಾ ಈ ಕತೆ ಕೇಳಿದಾಗ ಇದರಲ್ಲಿ ರಕ್ಷಿತ್ ಬದಲಿಗೆ ಯಾರಾದರೂ ಹುಡುಗಿ ಇದ್ದರೆ ಇನ್ನಷ್ಟು ಇಂಪ್ರೆಸಿವ್ ಆಗಿರುತ್ತದೆ ಎಂದರು. ನನಗೂ ಅದು ಸರಿ ಅನಿಸಿತು. ಹಾಗೆ ಆ ಪಾತ್ರ ಹರಿಪ್ರಿಯಾ ಅವರಿಗೇ ನೀಡಲಾಯಿತು. ಮಾತ್ರವಲ್ಲ, ಆಗ ಅದನ್ನು ಒಂದು ಪ್ರತ್ಯೇಕ ಕಿರುಚಿತ್ರವಾಗಿ ಮಾಡಬೇಕು ಎಂದುಕೊಂಡಿದ್ದೆವು. ಆದರೆ `ಕಥಾ ಸಂಗಮ'ದ ಯೋಜನೆ ಬಂದಾಗ ಈ ಕಿರುಚಿತ್ರವನ್ನು ಕೂಡ ಅದರಲ್ಲಿ ಸೇರಿಸುವ ಯೋಜನೆ ಹಾಕಲಾಯಿತು.

    ನೀವು ಕಂಡ ಹಾಗೆ ರಕ್ಷಿತ್ ಮತ್ತು ರಿಷಭ್ ಶೆಟ್ಟಿಯವರ ನಿರ್ದೇಶನದ ಶೈಲಿ ಹೇಗಿರುತ್ತದೆ?

    ನೀವು ಕಂಡ ಹಾಗೆ ರಕ್ಷಿತ್ ಮತ್ತು ರಿಷಭ್ ಶೆಟ್ಟಿಯವರ ನಿರ್ದೇಶನದ ಶೈಲಿ ಹೇಗಿರುತ್ತದೆ?

    ರಿಷಭ್ ಸರ್ ಯಾವಾಗಲೂ ಎನರ್ಜೆಟಿಕ್ ಆಗಿರುತ್ತಾರೆ. ನಿರ್ದೇಶಕರಾಗಿ ಅವರ ಎನರ್ಜಿಯನ್ನು ಬ್ರೇಕ್ ಮಾಡುವ ಇನ್ನೊಬ್ಬರು ನಮ್ಮ ಇಂಡಸ್ಟ್ರಿಯಲ್ಲಿ ಇದ್ದಾರ ಎಂದು ನನಗೆ ಗೊತ್ತಿಲ್ಲ. ಚಿತ್ರೀಕರಣದ ವೇಳೆ ಏನೇ ಅಡಚಣೆಗಳು ಎದುರಾದರೂ ಅವುಗಳಿಗೆ ತಲೆ ಕೆಡಿಸಿಕೊಂಡು ಕುಳಿತುಕೊಳ್ಳುವ ಜಾಯಮಾನ ರಿಷಭ್ ಅವರದ್ದಲ್ಲ. ತಕ್ಷಣವೇ ಅದನ್ನು ಪರಿಹರಿಸಿಕೊಂಡು ಮುನ್ನುಗ್ಗುತ್ತಾರೆ. ಆದರೆ ರಕ್ಷಿತ್ ಸರ್ ಅದಕ್ಕೆ ಡೆಡ್ ಅಪೊಸಿಟ್ ಎಂದು ಹೇಳಬಹುದು. ಸೈಲೆಂಟಾಗಿ, ಕಾಮಾಗಿ, ಕೂಲ್ ಆಗಿ ತಮ್ಮ ಕೆಲಸ ಮಾಡುತ್ತಾ ಹೋಗುತ್ತಾರೆ. ನನಗೆ ಇಬ್ಬರ ಶೈಲಿಯೂ ಇಷ್ಟವಾಗುತ್ತದೆ.

     `ಸಾಗರ ಸಂಗಮ’ ಚಿತ್ರದ ಶೂಟಿಂಗ್ ನಡೆದಾಗ ಘಟಿಸಿದ ವಿಶೇಷ ಅನುಭವ ಏನಾದರೂ ಇದೆಯೇ?

    `ಸಾಗರ ಸಂಗಮ’ ಚಿತ್ರದ ಶೂಟಿಂಗ್ ನಡೆದಾಗ ಘಟಿಸಿದ ವಿಶೇಷ ಅನುಭವ ಏನಾದರೂ ಇದೆಯೇ?

    ಆರಂಭದಲ್ಲಿ ಚಿತ್ರಕ್ಕೆ ಹೆಸರಿಟ್ಟಿರಲಿಲ್ಲ! ಹರಿಪ್ರಿಯ ನಿರ್ವಹಿಸಿರುವ ಪಾತ್ರಕ್ಕೆ ಒಂದು ಅಸಹಾಯಕ ಪರಿಸ್ಥಿತಿ ನಿರ್ಮಾಣವಾಗುವಂಥ ಲೊಕೇಶನ್ ಬೇಕಾಗಿತ್ತು. ರಾಮೇಶ್ವರದಲ್ಲಿ ಧನುಷ್ಕೋಡಿಯಲ್ಲಿ ಅಂಥ ಜಾಗ ಸಿಗಬಹುದೆಂದು ಹೋಗಿದ್ದೆ. ವಿಶೇಷ ಏನೆಂದರೆ ನನ್ನ ಚಿತ್ರದಲ್ಲಿ ರಿಷಭ್, ಹರಿಪ್ರಿಯಾ ಮತ್ತು ರೂಮಿ ಎನ್ನುವ ನಾಯಿ ಸೇರಿದಂತೆ ಇದ್ದಿದ್ದು ಮೂರೇ ಪಾತ್ರಗಳು. ಅದಕ್ಕೆ ಪೂರಕವಾಗಿ ಧನುಷ್ಕೋಡಿಯಲ್ಲಿ ಮೂರು ಸಾಗರಗಳ ಸಂಗಮದ ಸ್ಥಳವಿತ್ತು! ಆಗಲೇ `ಸಾಗರ ಸಂಗಮ' ಎನ್ನುವ ಹೆಸರು ಪಕ್ಕ ಮಾಡಿಕೊಂಡೆ. ಅದರಲ್ಲಿಯೂ ಸೌಮ್ಯ ಮತ್ತು ಉಗ್ರವಾದ ಎರಡು ಪಾತ್ರಗಳನ್ನು ಪ್ರತಿನಿಧಿಸುವಂತೆ ಒಂದು ಕಡಲು ಸೌಮ್ಯವಾಗಿಯೂ ಮತ್ತೊಂದು ಉಗ್ರವಾದ ಅಲೆಗಳೊಂದಿಗೂ ಕೂಡಿತ್ತು. ನಾವು ಅಲ್ಲಿಗೆ ಹೋದ ಸಂದರ್ಭದಲ್ಲಿ ಹೊಸದಾಗಿ ರಸ್ತೆಯ ಕೆಲಸ ಬೇರೆ ನಡೆದಿದ್ದ ಕಾರಣ ಪ್ರವಾಸಿಗರ ಸಂಖ್ಯೆಯೂ ಬೆರಳೆಣೆಕೆಯಲ್ಲಿತ್ತು. ಹೀಗೆ ಚಿತ್ರೀಕರಣಕ್ಕೆ ಪೂರಕವಾದ ಸ್ಥಳ ಮತ್ತು ವಾತಾವರಣ ಕೂಡಿ ಬಂದಿದ್ದು ನನಗೆ ಮರೆಯಲಾಗದ ಸಂಗತಿ.

    ನಿಮ್ಮ ಸಿನಿಮಾದ ಇತರ ತಂತ್ರಜ್ಞರಾಗಿ ಯಾರಿದ್ದಾರೆ?

    ನಿಮ್ಮ ಸಿನಿಮಾದ ಇತರ ತಂತ್ರಜ್ಞರಾಗಿ ಯಾರಿದ್ದಾರೆ?

    ತಾರಾಗಣದ ಬಗ್ಗೆ ನಿಮಗೆ ಗೊತ್ತೇ ಇದೆ. ವೆಂಕಟೇಶ್ ಅಂಗುರಾಜ್ ಚಿತ್ರದ ಛಾಯಾಗ್ರಾಹಕರಾಗಿದ್ದು, ಈ ಹಿಂದೆ ಅವರು ಸ.ಹಿ.ಪ್ರಾ. ಶಾಲೆ ಕಾಸರಗೋಡು ಮತ್ತು ಪ್ರಸ್ತುತ `ಯುವರತ್ನ' ಚಿತ್ರಗಳಿಗೆ ಕೆಲಸ ಮಾಡಿದಂಥವರು. `ರಾಮಾ ರಾಮಾ ರೇ' ಖ್ಯಾತಿಯ ನೊಬಿನ್ ಪೌಲ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸಿನಿಮಾಕ್ಕಾಗಿ ಒಟ್ಟು ಐದು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದ್ದು ಪರದೆಯ ಮೇಲೆ 17ನಿಮಿಷದ ಕತೆಯಾಗಿ ಮೂಡಿ ಬಂದಿದೆ.

    English summary
    New Comer Director Kiran Raj is from Kasaragod. He Directed One of the Short film in katha sangama. And also he is the director of Charlie movie.
    Saturday, November 9, 2019, 15:19
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X