Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಟಂಟ್ ಮ್ಯಾನ್ ಗಳ ಕಣ್ಣೀರ ಕಥೆ ಹೇಳಿದ್ದ ಹಂಸ
ಟಿವಿಯಲ್ಲಿ ರಿಯಾಲಿಟಿ ಶೋ ನೋಡುವ ಅಪ್ಪ ಅಮ್ಮನಿಗೆ ತನ್ನ ಮಗ - ಮಗಳು ಈ ರೀತಿಯ ಕಾರ್ಯಕ್ರಮಕ್ಕೆ ಹೋಗಬೇಕು ಎನ್ನುವ ಆಸೆ ಇರುತ್ತದೆ. ಅಂತಹ ಆಸೆಯನ್ನು ಹಂಸ ಈಡೇರಿಸಿದ್ದಾಳೆ.
ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮ ನೋಡಿ ತನ್ನ ಮಗಳು ಅಂತಹ ಕಾರ್ಯಕ್ರಮಕ್ಕೆ ಹೋಗಬೇಕು ಎಂದು ಹಂಸ ಅವರ ತಾಯಿ ಕನಸು ಇಟ್ಟುಕೊಂಡಿದ್ದರು. ಅದೇ ವಾಹಿನಿಯ 'ಕನ್ನಡದ ಕಣ್ಮಣಿ' ಕಾರ್ಯಕ್ರಮಕ್ಕೆ ಆಯ್ಕೆ ಆಗುವ ಮೂಲಕ ಹಂಸ ಆ ಕನಸನ್ನು ನನಸು ಮಾಡಿದ್ದಾಳೆ.
ವೈರಲ್ ಮಾಡೋದಲ್ಲ, ಗಿಡ ನೆಟ್ಟರೆ ನಂಗೆ ಖುಷಿಯಾಗುತ್ತೆ - ನಿನಾದ್
ಶಾಲೆಯಲ್ಲಿ ಹಂಸ ಚೆನ್ನಾಗಿ ಮಾತನಾಡುತ್ತಾಳೆ ಎಂದು ಈ ಕಾರ್ಯಕ್ರಮದ ಆಡಿಷನ್ ನಲ್ಲಿ ಭಾಗಿಯಾಗಲು ಅವರ ಶಿಕ್ಷಕರು ಹೇಳಿದರು. ಆ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ ಹಂಸ ಇಂದು ಅಂತಿಮ ಹಂತಕ್ಕೆ ಬಂದು ನಿಂತಿದ್ದಾರೆ.
ಯಾವುದೇ ವಿಷಯ ನೀಡಿದರು ತನ್ನ ತನದ ಮೂಲಕ ಹಂಸ ಅದನ್ನು ವೇದಿಕೆ ಮೇಲೆ ನಿಂತು ಮಾತನಾಡುತ್ತಾಳೆ. ಈ ರೀತಿ ಕಾರ್ಯಕ್ರಮದ ಮೂಲಕ ತಮ್ಮ ಆತ್ಮ ವಿಶ್ವಾಸ ಹೆಚ್ಚಾಗಿದೆ ಎನ್ನುತ್ತಾರೆ ಹಂಸ.
ಟ್ರೋಫಿ ಗೆಲ್ಲದೆ ಬುಟ್ಬುತ್ತಿವಾ..! ಅಂದಿದ್ದಾರೆ 'ಕನ್ನಡದ ಕಣ್ಮಣಿ' ಸಂಹಿತಾ
ಹಂಸ ಈವರೆಗೆ, ಖಾಸಗಿ ಶಾಲೆ ಶಿಕ್ಷಣ ವ್ಯಾಪಾರಿಕರಣ, ಹೆಣ್ಮಕ್ಳೆ ಬೆಸ್ಟ್, ಇಂದಿನ ಧಾರಾವಾಹಿ, ವಿಜ್ಞಾನ ಒಳ್ಳೆಯದೇ ಕೆಟ್ಟದೆ, ಆಸೆಯೇ ದುಃಖಕ್ಕೆ ಮೂಲ, ಸ್ಟಂಟ್ ಮ್ಯಾನ್ ಈ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಸ್ಟಂಟ್ ಮ್ಯಾನ್ ಕಷ್ಟಗಳ ಬಗ್ಗೆ ಮಾತನಾಡಿದ್ದ ಸಂಚಿಕೆ ಹಂಸಗೆ ದೊಡ್ಡ ಹೆಸರು ತಂದುಕೊಟ್ಟಿದೆ.
ಹಂಸ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಅವರ ಅಪ್ಪ ಅಮ್ಮನಿಗೂ ಬಹಳ ಖುಷಿ ನೀಡಿದೆಯಂತೆ. ಅಪ್ಪ ಎಷ್ಟೋ ಬಾರಿ ಆಫೀಸ್ ಗೆ ರಜೆ ಹಾಕಿ ಕಾರ್ಯಕ್ರಮಕ್ಕೆ ಬರುತ್ತಾರಂತೆ. ಫೈನಲ್ ನಲ್ಲಿ ತುಂಬ ದೊಡ್ಡ ಸ್ಪರ್ಥೆ ಇದ್ದು, ಗೆಲ್ಲುವ ನಂಬಿಕೆ ಇದೆ ಎಂದರು ಹಂಸ.