Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರೋಫಿ ಗೆಲ್ಲದೆ ಬುಟ್ಬುತ್ತಿವಾ..! ಅಂದಿದ್ದಾರೆ 'ಕನ್ನಡದ ಕಣ್ಮಣಿ' ಸಂಹಿತಾ
'ಬುಟ್ಬುತ್ತಿವಾ..!' ಎಂಬ ಡೈಲಾಗ್ ಅನ್ನು ತನ್ನದೇ ಶೈಲಿಯಲ್ಲಿ ಹೇಳಿ 'ಕನ್ನಡದ ಕಣ್ಮಣಿ' ಕಾರ್ಯಕ್ರಮದಲ್ಲಿ ಹೈಲೈಟ್ ಆದ ಹುಡುಗಿ ಸಂಹಿತಾ.
ಪ್ರತಿ ವಾರ ಕೂಡ ತನ್ನ ಮಾತಿನ ಮೂಲಕ ಸಿಕ್ಸರ್ ಬಾರಿಸುವ ಸಂಹಿತಾ ಈಗ ಕಾರ್ಯಕ್ರಮದ ಅಂತಿಮ ಹಂತಕ್ಕೆ ಬಂದಿದ್ದಾರೆ. ತಮ್ಮ 'ಕನ್ನಡದ ಕಣ್ಮಣಿ' ಪಯಣ ಬಗ್ಗೆ 'ಫಿಲ್ಮಿಬೀಟ್ ಕನ್ನಡ'ದ ಜೊತೆಗೆ ಸಂತಸ ಹಂಚಿಕೊಂಡಿದ್ದಾರೆ.
ಸಂಹಿತಾ ಉಡುಪಿಯ ಹುಡುಗಿ. ಸದ್ಯ 7ನೇ ಕ್ಲಾಸ್ ಓದುತ್ತಿದ್ದಾರೆ.
'ಡ್ರಾಮಾ ಜೂನಿಯರ್'ನಲ್ಲಿ ಫೇಲ್, 'ಕನ್ನಡದ ಕಣ್ಮಣಿ'ಯಲ್ಲಿ ಫೈನಲಿಸ್ಟ್
ಸ್ಕೂಲ್ ನಲ್ಲಿ ಚೆನ್ನಾಗಿ ಮಾಡುತ್ತಾಳೆ ಎಂದು ಎಲ್ಲರೂ ಹೇಳುತ್ತಿದ್ದರಂತೆ. ಹಾಗಾಗಿ ಕೆಲವು ಶೋಗಳಿಗೆ ಪ್ರಯತ್ನ ಮಾಡಿದ್ದಾರೆ. ಕೊನೆಗೆ 'ಕನ್ನಡದ ಕಣ್ಮಣಿ' ಕಾರ್ಯಕ್ರಮಕ್ಕೆ ಆಯ್ಕೆ ಆಗಿದ್ದಾರೆ.
ಅಪ್ಪ, ಸಾಲ, ಕುಟುಂಬದ ಸಂತೋಷಕ್ಕೆ ಮಗಳು ಕಾರಣ, ಲಕ್ ವಿರುದ್ಧ ಮಕ್ಕಳಿಗೆ ಆಸ್ತಿ ಮಾಡಬೇಡಿ... ಮಕ್ಕಳನ್ನೇ ಆಸ್ತಿಯಾಗಿ ಮಾಡಿ, ಬಡತನ ಈ ವಿಷಯಗಳ ಬಗ್ಗೆ ಸಂಹಿತಾ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
ಅಪ್ಪನ ಬಗ್ಗೆ ಮಾತನಾಡಿದ್ದ ಸಂಚಿಕೆ ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿದೆ. ಕಾರ್ಯಕ್ರಮಕ್ಕೆ ಬಂದು ಹೊಸ ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತಿದ್ದೇವೆ ಎನ್ನುತ್ತಾರೆ ಸಂಹಿತಾ.
ಕಾರ್ಯಕ್ರಮದಲ್ಲಿ ತನ್ನ ಮಾತುಗಳ ಮೂಲಕ ಕರ್ನಾಟಕದ ಮನೆ ಮಾತಾಗಿರುವ ಈ ಪುಟ್ಟ ಹುಡುಗಿ ಮುಂದೆ ಒಳ್ಳೆಯ ಭಾಷಣಗಾರ್ತಿ ಆಗಬೇಕು ಎನ್ನುವ ಆಸೆ ಹೊಂದಿದ್ದಾಳೆ.